AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಸೆಪ್ಟೆಂಬರ್ 3 ರ ರಾತ್ರಿ 9.11 ಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿದೆ. ಸ್ವಲ್ಪ ಸಮಯದ ನಂತರ ವಿಮಾನದ ಹಿಂಭಾಗದಿಂದ ಸುಡುವ ವಾಸನೆ, ಸಹ ಪ್ರಯಾಣಿಕರಿಗೆ ಬಂದಿದೆ. ಸ್ವಲ್ಪ ಸಮಯದ ನಂತರ ಈ ವಾಸನೆ ಶೌಚಾಲಯದಿಂದ ಬರುತ್ತಿದೆ ಎಂದು ಪ್ರಯಾಣಿಕರು ಅರಿತರು.

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಇಂಡಿಗೋ ವಿಮಾನ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 05, 2023 | 7:50 AM

ಬೆಂಗಳೂರು: ಭಾನುವಾರ ರಾತ್ರಿ ಕೋಲ್ಕತ್ತಾದಿಂದ (Kolkata) ಬೆಂಗಳೂರಿಗೆ (Bengaluru) ಬರುತ್ತಿದ್ದ ಇಂಡಿಗೋ ವಿಮಾನದ (IndiGo Airplane) ಶೌಚಾಲಯದೊಳಗೆ ಧೂಮಪಾನ (Smoking) ಮಾಡಿದ ಆರೋಪದ ಮೇಲೆ ಜಿ ಕರುಣಾಕರನ್ ಎಂಬ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಸೆಕ್ಷನ್ 336 ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಗೆ ದಕ್ಕೆ, ಸೆಕ್ಷನ್ 25 (3ಬಿ) ನಿಯಮ ಉಲ್ಲಂಘನೆ ಮತ್ತು ಏರ್‌ಕ್ರಾಫ್ಟ್ ನಿಯಮ 1937 ರ ಅಡಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 3 ರ ರಾತ್ರಿ 9.11 ಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿದೆ. ಸ್ವಲ್ಪ ಸಮಯದ ನಂತರ ವಿಮಾನದ ಹಿಂಭಾಗದಿಂದ ಸುಡುವ ವಾಸನೆ, ಸಹ ಪ್ರಯಾಣಿಕರಿಗೆ ಬಂದಿದೆ. ಸ್ವಲ್ಪ ಸಮಯದ ನಂತರ ಈ ವಾಸನೆ ಶೌಚಾಲಯದಿಂದ ಬರುತ್ತಿದೆ ಎಂದು ಪ್ರಯಾಣಿಕರು ಅರಿತರು. ತಕ್ಷಣವೇ ಈ ವಿಚಾರವನ್ನು ಪ್ರಯಾಣಿಕರು ವಿಮಾನ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಸಿಬ್ಬಂದಿ ಶೌಚಾಲಯದ ಬಾಗಿ ತಟ್ಟಿದ್ದಾರೆ.

ಒಳಗಿದ್ದ ಜಿ ಕರುಣಾಕರನ್ ಬಾಗಿಲು ತೆರೆದಾಗ ಅವರ ಕೈಯಲ್ಲಿ ಬೀಡಿ ಇರುವುದು ಕಂಡಿದೆ. ಜಿ ಕರುಣಾಕರನ್ ತಕ್ಷಣವೇ ಅರ್ಧ ಸೇದಿದ ಬೀಡಿಯನ್ನು ಶೌಚಾಲಯದೊಳಗೆ ಹಾಕಿ ಫ್ಲೆಶ್​ ಮಾಡಲು ಯತ್ನಿಸಿದರು ಎಂದು ಎಫ್ಐಆರ್​​ನಲ್ಲಿ ದಾಖಲಿಸಲಾಗಿದೆ. ಬಳಿಕ ವಿಮಾನವು ಕೆಐಎನಲ್ಲಿ ಲ್ಯಾಂಡ್​ ಆದ ತಕ್ಷಣ, ಜಿ ಕರುಣಾಕರನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 12 ರಿಂದ ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ

ಇಂಡಿಗೋ ವಿಮಾನ 3 ಗಂಟೆ ವಿಳಂಬ, ನಾವೇನು ಭಿಕ್ಷುಕರಾ ಎಂದ ಪ್ರಯಾಣಿಕ

ಬೆಂಗಳೂರಿನಿಂದ ತೂತುಕುಡಿಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಮೂರು ಗಂಟೆ 11 ನಿಮಿಷ ತಡವಾಗಿತ್ತು. ಸೋಮವಾರ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ವಿಮಾನ ತಡವಾಗಿ ಬರುವುದರಿಂದ ಟೇಕಾಫ್​ ತಡವಾಗಲಿದೆ ಎಂದು ಅನೌನ್ಸ್ ಮಾಡಲಾಯ್ತು.

ಇದರಿಂದ ಬೇಸರಗೊಂಡ ಪ್ರಯಾಣಿಕ ಎಕ್ಸ್​ (ಟ್ವಿಟರ್)​ ಮೂಲಕ ವಿಮಾನಯಾನ ಸಚಿವಾಲಯಕ್ಕೆ ಟ್ಯಾಗ್​ ಮಾಡಿ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ಅಲ್ಲದೇ ನಮಗೆ ಅರ್ಧ ಸ್ಯಾಂಡ್​​​ವಿಚ್​​ ನೀಡಿ ನಮ್ಮನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:37 am, Tue, 5 September 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್