AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಮನೆಯಲ್ಲಿ ಜೋರಾಗಿ ಸಾಂಗ್​ ಹಾಕದಂತೆ ಹೇಳಿದ್ದಕ್ಕೆ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಲಾಯಿಡ್ ನೇಮಯ್ಯ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಮೃತ ಲಾಯಿಡ್ ನೇಮಯ್ಯ, ಹಲ್ಲೆ ಸಮಯದ ವಿಡಿಯೋ ದೃಶ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 05, 2023 | 1:26 PM

Share

ಮುಖ್ಯಾಂಶಗಳು

  • ಮನೆಯಲ್ಲಿ ಜೋರಾಗಿ ಸಾಂಗ್​ ಹಾಕದಂತೆ ಹೇಳಿದ್ದಕ್ಕೆ ಹಲ್ಲೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
  • HAL ಪೊಲೀಸರಿಂದ ದೂರು ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ
  • 10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಮನೆಯಲ್ಲಿ ಜೋರಾಗಿ ಸಾಂಗ್​ ಹಾಕದಂತೆ ಹೇಳಿದ್ದಕ್ಕೆ ಹಲ್ಲೆ ಮಾಡಲಾಗಿದ್ದು ಹಲ್ಲೆಗೊಳಗಾಗಿದ್ದ ಲಾಯಿಡ್ ನೇಮಯ್ಯ(54) ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್​ಎಎಲ್​ ಬಳಿಯ ವಿಜ್ಞಾನ ನಗರದಲ್ಲಿ ನಡೆದಿದೆ. ಏಪ್ರಿಲ್ 2ರಂದು ಲಾಯಿಡ್ ನೇಮಯ್ಯನವರ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಟೆಕ್ಕಿಗಳು ಜೋರಾಗಿ ಹಾಡುಗಳನ್ನು ಹಾಕಿ ಪಾರ್ಟಿ ಮಾಡಿದ್ದರು. ಈ ವೇಳೆ ಸೌಂಡ್ ಕಡಿಮೆ ಮಾಡಿ ಮನೆಯಲ್ಲಿ ವಯಸ್ಸಾದವರಿದ್ದಾರೆ ಎಂದು ಲಾಯಿಡ್ ಹೇಳಿದ್ದರು.

ಸ್ವಲ್ಪ ಸಮಯದ ಬಳಿಕ ಲಾಯಿಡ್ ನೇಮಯ್ಯ ಮನೆಗೆ ನುಗ್ಗಿದ ಟೆಕ್ಕಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾಗಿದ್ದ ಲಾಯಿಡ್ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಲಾಟೆ ಬಳಿಕ ಹಲ್ಲೆ ಕೇಸ್ ದಾಖಲಿಸಿಕೊಂಡಿದ್ದ HAL ಪೊಲೀಸರು ಸದ್ಯ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಒಡಿಶಾ ಮೂಲದ ಟೆಕ್ಕಿಗಳಿಂದ ಲಾಯಿಡ್ ನೇಮಯ್ಯ ಕೊಲೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಮೃತ ಲಾಯಿಡ್ ನೇಮಯ್ಯ ಅವರು ಸೇವೆಯಲ್ಲಿರುವ ಸೇನಾ ಅಧಿಕಾರಿ ಕರ್ನಲ್ ಡೇವಿಡ್ ನೇಮಯ್ಯ ಅವರ ಸಹೋದರ. ಮೂವರು ಟೆಕ್ಕಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾರೆ. ಲಾಯಿಡ್ ಅವರಿಗೆ ಆಂತರಿಕ ಗಾಯಗಳಿಂದಾಗಿ ಅವರು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಇದನ್ನೂ ಓದಿ: ಕದ್ದ ಚಿನ್ನವನ್ನು ಗುಜರಿಗೆ ಹಾಕಿದ ಮುಗ್ಧ ಕಳ್ಳನ ರೋಚಕ ಕಥೆ ಇಲ್ಲಿದೆ!

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರ ಸೆರೆ

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಮೊಹ್ಮದ್ ಜಬೀವುದ್ದೀನ್, ಮೊಹ್ಮದ್ ಮೆಹತಾಬ್, ದಿನೇಶ್​ ಅಲಿಯಾಸ್ ದಿನ ಎಂಬಾತನನ್ನು ಬಂಧಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಈ ಮೂವರು ಆರೋಪಿಗಳು ಭಾಗಿಯಾಗಿದ್ದರು. ವಾರಂಟ್ ಜಾರಿ ಮಾಡಿದ್ದರೂ ಕೋರ್ಟ್​ಗೆ ಹಾಜರಾಗದೆ ನಾಪತ್ತೆಯಾಗಿದ್ದರು. ಸದ್ಯ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂವರು ಪಾತಕಿಗಳ ಸೆರೆ ಹಿಡಿಯಲಾಗಿದೆ. ಚುನಾವಣೆ ವೇಳೆ ಸ್ಥಳೀಯ ಮುಖಂಡರ ಜತೆ ಓಡಾಡ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಮೊಹಮ್ಮದ್ ಜಬೀವುದ್ದೀನ್ ಮೇಲೆ ಬರೋಬ್ಬರಿ 17 ಪ್ರಕರಣಗಳು ದಾಖಲಾಗಿವೆ. ಕೆಜಿ ಹಳ್ಳಿ, ವಿವೇಕನಗರ, ಬನಶಂಕರಿ, ಬಸವನಗುಡಿ, ಜೆಪಿ ನಗರ, ಕೆಎಸ್ ಲೇಔಟ್ ಸೇರಿ ಹಲವು ಠಾಣೆಗಳಿಗೆ ಬೇಕಾಗಿದ್ದ ಆರೋಪಿ ಈತ. ಮೊಹಮ್ಮದ್ ಮೆಹತಾಬ್ ವಿರುದ್ಧ 18 ಪ್ರಕರಣ ದಾಖಲಾಗಿದ್ದು ಜಯನಗರ, ಬನಶಂಕರಿ, ಬಸವನಗುಡಿ, ಸಿದ್ದಾಪುರ, ಸುಬ್ರಮಣ್ಯಪುರ ವಿವೇಕನಗರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ದಿನೇಶ ಅಲಿಯಾಸ್ ದೀನ ಮೇಲೆ ಐದು ಪ್ರಕರಣ ದಾಖಲಾಗಿದೆ. ಈ ಮೂವರು ಆರೋಪಿಗಳು ಚುನಾವಣೆ ಹಿನ್ನೆಲೆ ಸ್ಥಳೀಯ ಮುಖಂಡರ ಜೊತೆ ಗುರುತಿಸಿಕೊಂಡು ಓಡಾಡಿಕೊಂಡಿದ್ದರು. ಕಾನೂನು ಸುವ್ಯವಸ್ಥೆ ಸಲುವಾಗಿ ಒಬ್ಬೊಬ್ಬರನ್ನೆ ಪತ್ತೆ ಮಾಡಿ ಜೈಲಿಗೆ ಕಳಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:26 pm, Wed, 5 April 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ