AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಂಗಳೂರಿನಲ್ಲಿ ಪತ್ನಿ ಕೊಂದು ಆಂಧ್ರಕ್ಕೆ ಎಸ್ಕೇಪ್ ಆದ ಪತಿ ಸಿಕ್ಕಿದ್ದು ಬೀದಿ ಹೆಣವಾಗಿ

ವಯಸ್ಸು ಐವತ್ತಾದರು ನಿಸಾರ್ ಪತ್ನಿ ಶೀಲ ಶಂಕಿಸುತ್ತಿದ್ದ. ನವೆಂಬರ್ 19ರಂದು ಪತ್ನಿಯ ಹತ್ಯೆಗೆ ಪ್ಲಾನ್ ಮಾಡಿಕೊಂಡು ಆಕೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದಾನೆ. ಆದ್ರೆ ಕೊನೆಗೆ ಬೆಂಗಳೂರಿನಿಂದ ತಪ್ಪಿಸಿಕೊಂಡು ಹೋಗಿ ಆಂಧ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Bengaluru Crime: ಬೆಂಗಳೂರಿನಲ್ಲಿ ಪತ್ನಿ ಕೊಂದು ಆಂಧ್ರಕ್ಕೆ ಎಸ್ಕೇಪ್ ಆದ ಪತಿ ಸಿಕ್ಕಿದ್ದು ಬೀದಿ ಹೆಣವಾಗಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 8:36 AM

Share

ಬೆಂಗಳೂರು: ಹೆಂಡತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಪತ್ನಿಯನ್ನು ಕೊಂದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಆಯೇಷಾ(45) ಮೃತ ಮಹಿಳೆ. ಹೆಂಡತಿಯನ್ನು ಕೊಲೆ ಮಾಡಿದ್ದ ಪತಿ ನಿಸಾರ್(50) ಆಂಧ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ನಿಸಾರ್ ಮತ್ತು ಆಯೇಷಾ ದಂಪತಿ ಬೆಂಗಳೂರಿನ ರಾಜೇಂದ್ರನಗರದಲ್ಲಿ ವಾಸವಿದ್ದರು. ವಯಸ್ಸು ಐವತ್ತಾದರು ನಿಸಾರ್ ಪತ್ನಿ ಶೀಲ ಶಂಕಿಸುತ್ತಿದ್ದ. ನವೆಂಬರ್ 19ರಂದು ಪತ್ನಿಯ ಹತ್ಯೆಗೆ ಪ್ಲಾನ್ ಮಾಡಿಕೊಂಡು ಆಕೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದಾನೆ. ಆದ್ರೆ ಕೊನೆಗೆ ಬೆಂಗಳೂರಿನಿಂದ ತಪ್ಪಿಸಿಕೊಂಡು ಹೋಗಿ ಆಂಧ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಆರೋಪಿ ನಿಸಾರ್ ಮಸೀದಿಗಳಲ್ಲಿ ಚಂದಾ ವಸೂಲಿ ಮಾಡಿ ಮದರಸಗೆ ನೀಡೊ‌ ಕೆಲಸ ಮಾಡುತ್ತಿದ್ದ. ಆತ ಪತ್ನಿ‌ ಶೀಲ ಶಂಕಿಸಿ ಆಗಾಗ ಜಗಳ ಮಾಡ್ತಿದ್ದ. ಮನೆಯಲ್ಲೂ ಕೂಡ ಹೆಚ್ಚಾಗಿ ಇರ್ತಾ ಇರ್ಲಿಲ್ಲ. ನವಂಬರ್ 19 ರಂದು ಹೆಂಡತಿಯನ್ನ ಕೊಲ್ಲಲೇಬೇಕೆಂದು ರೆಡಿಯಾಗಿ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಖರೀದಿಸಿಕೊಂಡು ಮನೆಗೆ ಬಂದಿದ್ದ.

ಪತ್ನಿಯನ್ನು ಕೊಲ್ಲಲು ಪತಿಯಿಂದ ಮಾಸ್ಟರ್ ಪ್ಲಾನ್ ಅಜ್ಜಿ ಆಯೇಷಾ ಜೊತೆ ಮಗಳ ಪುಟ್ಟ ಮಗು ವಾಸವಾಗಿತ್ತು. ಪಾಪು ಮನೆಯಲ್ಲಿದ್ರೆ ಪತ್ನಿ ಕಥೆ ಮುಗಿಸೋದು ಕಷ್ಟ ಎಂದು ಮೊದಲಿಗೆ ಅಳಿಯನಿಗೆ ಕರೆ ಮಾಡಿ ಪಾಪುವನ್ನ ನಾನು ನೋಡಬೇಕು ಅನ್ನಿಸ್ತಿದೆ ನೀಲಸಂದ್ರ ಸಂಬಂಧಿ ಮನೆಗೆ ಕರೆತರುವಂತೆ ಹೇಳಿದ್ದ. ಅದರಂತೆ ನವಂಬರ್ 19 ರ ಶುಕ್ರವಾರ ಆರೋಪಿ ನಿಸಾರ್ ಅಳಿಯ ಪಾಪು ಕರೆದು ನೀಲಸಂದ್ರ ಕಡೆ ತೆರಳಿದ್ದ. ಮನೆಯಲ್ಲಿದ್ದ ಮಗ ಮತ್ತು ಸೊಸೆ ಕೂಡ ಕೆಲಸಕ್ಕೆ ತೆರಳಿದ್ರು. ಈ ಸಮಯಕ್ಕಾಗಿ ಕಾಯುತ್ತಿದ್ದ ಆರೋಪಿ ಸಂಜೆ 3 ಗಂಟೆಗೆ ತನ್ನ ಮನೆಗೆ ಬಂದಿದ್ದ. ಬಂದು ಪತ್ನಿ ಬಳಿ ಐದು ಕೆ.ಜಿಯ ಚಿಕ್ಕ ಸಿಲಿಂಡರ್ ಕೊಡು ಅಂತಾ ಹೊರಗಿನಿಂದಲೇ ಕೇಳಿದ್ದಾನೆ. ಆಗ ಪತ್ನಿ ಸಿಲಂಡರ್ ತರಲು ಹೋದಾಗ ಆಕೆ ಮೇಲೆ ಪೆಟ್ರೋಲ್ ಸುರಿದು ತಕ್ಷಣ ಡೋರ್ ಲಾಕ್ ಮಾಡಿಕೊಂಡಿದ್ದಾನೆ. ಬಳಿಕ ಡೋರ್ ಪಕ್ಕದಲ್ಲೇ ಇದ್ದ ಕಿಟಕಿ ಗಾಜನ್ನು ಒಡೆದಿದ್ದಾನೆ. ಈ ವೇಳೆ ಒಡೆದ ಗಾಜಿನ ಚೂರು ಆತನ ಕೈಯನ್ನ ಸೀಳಿದೆ. ರಕ್ತ ಹರಿತಿದ್ರು ಕಿಟಕಿಯಿಂದಲೇ ಬೆಂಕಿ ಕಡ್ಡಿ ಗೀಚಿ ಎಸೆದಿದ್ದಾನೆ.

ತಕ್ಷಣ ಬೆಂಕಿ ಸ್ಫೋಟಗೊಂಡಿದೆ. ಬಾಗಿಲು ಒಡೆದಿದೆ. ಈ ಪರಿಣಾಮ ಕಿಟಕಿ ಬಳಿ ಇದ್ದ ಈತನ ಮುಖವನ್ನೂ ಬೆಂಕಿ ಸುಟ್ಟಿದೆ. ಅಕ್ಕ ಪಕ್ಕದವರು ಬರುವಷ್ಟರಲ್ಲಿ ಆರೋಪಿ ನಿಸಾರ್ ಎಸ್ಕೇಪ್ ಆಗಿದ್ದಾನೆ. ಬೆಂಕಿ ಆರಿಸಿದ ನೆರೆಹೊರೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಉಸಿರಾಡ್ತಿದ್ದ ಆಯೇಷಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪೊಲೀಸರು ಶುಕ್ರವಾರ ಸಂಜೆ ಹೊತ್ತಿಗೆ ಆರೋಪಿ ಪತ್ತೆಗೆ ಟೀಂ ರೆಡಿ ಮಾಡಿ ಕಾರ್ಯಾಚರಣೆ ಶುರು ಮಾಡಿದ್ರು.

ಪತ್ನಿ ಕೊಂದು ಎಸ್ಕೇಪ್ ಆದವ ಬೀದಿ ಹೆಣವಾಗಿದ್ದ ಆತನಿಗಾಗಿ ಎಲ್ಲಾ ಕಡೆಗಳಲ್ಲೂ ಹುಡುಕಾಟ ನಡೆಸಿದ್ರು. ಆರೋಪಿ ನಿಸಾರ್ ಬಸ್ ಹತ್ತಿ ಆಂಧ್ರ ಪ್ರದೇಶದತ್ತ ಪರಾರಿಯಾಗಿದ್ದ. ಜೊತೆಗೆ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದ. ಫೋನ್ ಆಗಾಗ ಆನ್ ಮಾಡಿ ಆಫ್ ಮಾಡ್ತಿದ್ದ ಆದರೆ ಯಾರಿಗೂ ಕರೆ ಮಾಡಿರಲಿಲ್ಲಿ. ಲೊಕೇಶನ್ ಟ್ರೇಸ್ ಮಾಡಿದ ಖಾಕಿಗೆ ಆತ ಮದನಪಲ್ಲಿಯಲ್ಲಿ ಇರೋದು ಗೊತ್ತಾಗಿದೆ. ಇಷ್ಟೆಲ್ಲಾ ಗಾಯವಾಗಿದ್ರು ಆತ ಆಸ್ಪತ್ರೆಗೆ ಮಾತ್ರ ಹೋಗಿರಲಿಲ್ಲ. ಬಸ್ ನಲ್ಲಿಯೇ ಆಂಧ್ರಗೆ ಹೋಗಿ ತಲೆಮರೆಸಿಕೊಳ್ಳುವ ಯತ್ನ ಮಾಡಿದ್ದ.

ಭಾನುವಾರ ಬೆಳಗ್ಗೆ ಮತ್ತೆ ಫೋನ್ ಆನ್ ಮಾಡಿದ್ದಾನೆ. ಆಗ ಆತ ಪೆನುಗೊಂಡದಲ್ಲಿ ಇರೋದು ಗೊತ್ತಾಗಿ ಪೊಲೀಸರು ಅಲ್ಲಿದ್ದ ಮಸೀದಿ, ದರ್ಗಾ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆತನನ್ನು ಹುಡುಕಿ ಹೈರಾಣಾಗಿದ್ದಾರೆ. ಇದೇ ವೇಳೆ ಭಾನುವಾರ ನಿಸಾರ್ ನಂಬರ್ಗೆ ಮಗ ಮನ್ಸೂರ್ ಕರೆ ಮಾಡಿದ್ದಾನೆ. ಆಗ ಫೋನ್ ರಿಸೀವ್ ಮಾಡಿದ ಸ್ಥಳೀಯರು ಆತ ಸಾವನ್ನಪ್ಪಿರೊ ವಿಷಯ ತಿಳಿಸಿದ್ದಾರೆ. ಪತ್ನಿಯನ್ನು ಕೊಲೆ ಮಾಡಿ ತಲೆ ಮರಿಸಿಕೊಳ್ಳಲು ಆಂಧ್ರಕ್ಕೆ ಬಂದ ಆರೋಪಿ ಬೀದಿ ಹೆಣವಾಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ