AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​​ ಸವಾರ ಬಲಿ, ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆ

ಸ್ಥಳ ಪರಿಶೀಲನೆ ವೇಳೆ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆ ಕುಡಿದ ಅಮಲಿನಲ್ಲಿ ಬೈಕ್ ಸವಾರ ಬೈಕ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಬೈಕ್​ ಸವಾರ ರಮೇಶ್​​ ತಲೆಗೆ ಗಾಯಗಳಾಗಿ ರಕ್ತ ಸ್ರಾವವಾಗಿದೆ. ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಮೃತಪಟ್ಟಿದ್ದಾರೆ.

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​​ ಸವಾರ ಬಲಿ, ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆ
ಮೃತ ರಮೇಶ್
TV9 Web
| Edited By: |

Updated on:Nov 05, 2022 | 7:49 AM

Share

ಬೆಂಗಳೂರು: ರಾಜಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ(KSRTC Bus Accident) ಬೈಕ್​​ ಸವಾರ ಬಲಿಯಾದ ಘಟನೆ ನಡೆದಿದೆ. ತಡರಾತ್ರಿ 12.30ರಲ್ಲಿ ರಾಜ್​ಕುಮಾರ್​ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ರಮೇಶ್(39) ಮೃತಪಟ್ಟಿದ್ದಾರೆ. ಮೃತ ರಮೇಶ್ ಸ್ನೇಹಿತರು ಚಾಲಕ ಹಾಗೂ ಕಂಡಕ್ಟರ್​ಗೆ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬರುತ್ತಿದ್ದ KSRTC ಬಸ್ ಪಕ್ಕದಲ್ಲಿ ಬಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್​ ಸವಾರ ರಮೇಶ್​​ ತಲೆಗೆ ಗಾಯಗಳಾಗಿ ರಕ್ತ ಸ್ರಾವವಾಗಿದೆ. ಸ್ಥಳೀಯರು ಕೂಡಲೇ ರಮೇಶ್​ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಮೃತಪಟ್ಟಿದ್ದಾರೆ. ಅಲ್ಲದೆ ಬೈಕ್​ ಚಾಲಕನ ವಿರುದ್ಧ ಕೆಎಸ್​ಆರ್​ಟಿಸಿ ಬಸ್​ ಚಾಲಕ, ಕಂಡಕ್ಟರ್​ ಡ್ರಂಕ್​ ಌಂಡ್ ಡ್ರೈವ್ ಆರೋಪ ಮಾಡಿದ್ದಾರೆ. ರಾಜಾಜಿನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಮತ್ತೊಂದೆಡೆ ಸ್ಥಳ ಪರಿಶೀಲನೆ ವೇಳೆ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ. ಈ ಹಿನ್ನೆಲೆ ಕುಡಿದ ಅಮಲಿನಲ್ಲಿ ಬೈಕ್ ಸವಾರ ಬೈಕ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಮೂರು ಬೈಕ್ ಹಾಗೂ ಒಂದು ಕಾರ್ ನಲ್ಲಿ ರಮೇಶ್ ಹಾಗೂ ಸ್ನೇಹಿತರು ಬರುತ್ತಿದ್ದರು. ಅಪಘಾತದ ನಂತರ ಬಸ್ ಡ್ರೈವರ್ ಹಾಗೂ ಕಂಡಕ್ಟರ್​ಗೆ ರಮೇಶ್ ಸ್ನೇಹಿತರು ಸುತ್ತುವರಿದು ಥಳಿಸಿದ್ದಾರೆ. ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಅಪಘಾತ ಸಂಬಂಧ ಮೃತನ ಕಡೆಯವರಿಂದ ದೂರು ದಾಖಲಾಗಿದ್ದು ಹಲ್ಲೆ ಸಂಬಂಧ ಕೆಎಸ್​ಆರ್​ಟಿಸಿ ಚಾಲಕ, ಕಂಟೆಕ್ಟರ್ ನಿಂದಲೂ ಪ್ರತಿದೂರು ದಾಖಲಾಗಿದೆ. ರಾಜಾಜಿನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Bengaluru Power Cut ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಪವರ್ ಕಟ್; ಯಾವ ಪ್ರದೇಶದಲ್ಲಿ ಇರಲ್ಲ ವಿದ್ಯುತ್?

ಆರ್​ಡಿ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಆರ್​ಡಿ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲಾಗಿದೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಗಲಾಟೆ ಮಾಡಿದ್ದಕ್ಕೆ ಮಕ್ಕಳಿಗೆ ಶಿಕ್ಷಕ ಹೊಡೆದಿದ್ದಾರೆ. ಮಕ್ಕಳನ್ನು ಶಿಕ್ಷಕ ಹೊಡೆಯುತ್ತಿದ್ದ ವೇಳೆ ಬಾಲಕಿ ಕುಸಿದು ಬಿದ್ದುದ್ದಾಳೆ. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಬಾಲಕಿ ಮೃತಪಟ್ಟಿದ್ದಾಳೆ ಎಂದು ಮೃತ ಬಾಲಕಿ ತಂದೆ ನಾಗೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಆರ್​ಪಿಸಿ 174ಸಿ ಅಡಿ ಯುಡಿಆರ್​ ಪ್ರಕರಣ ದಾಖಲಾಗಿದೆ. ರಾಮಯ್ಯ ಆಸ್ಪತ್ರೆಯಲ್ಲಿಂದು ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.

Published On - 7:49 am, Sat, 5 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ