AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ಒಂದು ವಾರದಿಂದ ಸಿಲಿಕಾನ್‌ ಸಿಟಿಯಲ್ಲಿ ಆರ್ಭಟಿಸುತ್ತಿರೋ ವರುಣ ನಿನ್ನೆ ಸಹ ಅಬ್ಬರಿಸಿದ್ದಾನೆ. ಸಂಜೆ ವೇಳೆಗೆ ಸಣ್ಣಗೆ ಆರಂಭವಾಗಿ ತಡರಾತ್ರಿವರೆಗೂ ಸುರಿದ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿ ಹೋಗಿದ್ದಾರೆ.

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
TV9 Web
| Edited By: ಆಯೇಷಾ ಬಾನು|

Updated on: Oct 12, 2021 | 7:49 AM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಕಾರಣವಾಗಿದೆ. ಭಾರಿ ಮಳೆ ಹಿನ್ನೆಲೆ ಮನೆಗೆ ನೀರು ನುಗ್ಗಿ ವ್ಯಕ್ತಿ ಬಲಿಯಾಗಿದ್ದಾರೆ. ವಿದ್ಯುತ್ ಪ್ರವಹಿಸಿ ವೆಂಕಟೇಶ್(56) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭಾರಿ ಮಳೆಗೆ ನೀರು ಮನೆಗೆ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ನೀರನ್ನು ಹೊರಹಾಕುತ್ತಿದ್ದ ವೇಳೆ ವೆಂಕಟೇಶ್ ಸ್ವಿಚ್ ಬೋರ್ಡ್ ಮುಟ್ಟಿದ್ದಾರೆ. ಆಗ ಸ್ವಿಚ್ ಬೋರ್ಡ್‌ನಲ್ಲಿ ವಿದ್ಯುತ್ ಪ್ರವಹಿಸ್ತಿದ್ದ ಹಿನ್ನೆಲೆ ವೆಂಕಟೇಶ್ ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ರೈತ ಸಾವು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಸೈದಾಪುರ ಗ್ರಾಮದ ಬಳಿ ಸಿಡಿಲು ಬಡಿದು ರೈತ ಮೃತಪಟ್ಟ ಘಟನೆ ನಡೆದಿದೆ. ಸಿಡಿಲಿಗೆ ರೈತ ಸಂಗಪ್ಪ ಫಕೀರಪ್ಪ ವಾರದ(45) ಬಲಿಯಾಗಿದ್ದಾರೆ. ಹೊಲದಿಂದ ಮನೆಗೆ ಬರುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಲ್ಲಿ ವರುಣನ ಮಹಾಪ್ರತಾಪ ಒಂದು ವಾರದಿಂದ ಸಿಲಿಕಾನ್‌ ಸಿಟಿಯಲ್ಲಿ ಆರ್ಭಟಿಸುತ್ತಿರೋ ವರುಣ ನಿನ್ನೆ ಸಹ ಅಬ್ಬರಿಸಿದ್ದಾನೆ. ಸಂಜೆ ವೇಳೆಗೆ ಸಣ್ಣಗೆ ಆರಂಭವಾಗಿ ತಡರಾತ್ರಿವರೆಗೂ ಸುರಿದ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಇದ್ದ ಮೋಡ ಕವಿದ ವಾತಾವರಣ ಸಂಜೆ ವೇಳೆಗೆ ಜನರಿಗೆ ಬಿಗ್ ಶಾಕ್ ನೀಡಿತ್ತು. ಸಂಜೆ ಟೈಂನಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ವಾಹನ ಸವಾರರು ತತ್ತರಿಸಿ ಹೋಗಿದ್ರು. ಕೆ.ಆರ್‌.ಮಾರುಕಟ್ಟೆ, ಟೌನ್‌ಹಾಲ್‌ ಮುಂಭಾಗ, ಕೆ.ಆರ್‌.ವೃತ್ತ, ಶಿವಾಜಿನಗರ, ರಾಜಾಜಿನಗರ, ಮೈಸೂರು ರಸ್ತೆ, ತುಮಕೂರು ರಸ್ತೆ, ಓಕಳಿಪುರಂ ರಸ್ತೆ ಅಂಡರ್‌ಪಾಸ್‌, ಮೇಖ್ರಿ ವೃತ್ತ ಸೇರಿದಂತೆ ಹಲವು ರಸ್ತೆಗಳ ಮೇಲೆ ಮಳೆ ನೀರು ಹೊಳೆಯಂತೆ ಹರಿಯುತ್ತಿತ್ತು. ಇದರಿಂದ ವಾಹನ ಸವಾರು ಸರ್ಕಸ್ ಮಾಡುತ್ತಲೇ ಸಂಚಾರ ಮಾಡಿದ್ರು. ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲಿ ಮಳೆಯಲ್ಲೇ ಸಂಚರಿಸಿದ್ರು.

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಶೇಷಾದ್ರಿಪುರಂನ ಶಿರೂರು ಪಾರ್ಕ್ ರಸ್ತೆಯಲ್ಲಿ ಮರವೊಂದು ಧರೆಗುರುಳಿತ್ತು. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ರಿಂದ ಮಂತ್ರಿಮಾಲ್ ಕಡೆಗೆ ಸಾಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಿಂದಾಗಿ ಕೆ.ಹೆಚ್.ಬಿ ಕಾಲೋನಿ ಬಳಿ ಆರೋಗ್ಯ ಇಲಾಖೆಯ ಕಾಂಪೌಂಡ್ ಕುಸಿದು ಬಸ್ ಸ್ಟಾಂಡ್‌ಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ಕಾಫಿನಾಡಿನಲ್ಲಿ ನಿಲ್ಲದ ಮಳೆ, ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಕಾಫಿ ಬೆಳೆಗಾರರಲ್ಲಿ ಆತಂಕ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?