AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ಒಂದು ವಾರದಿಂದ ಸಿಲಿಕಾನ್‌ ಸಿಟಿಯಲ್ಲಿ ಆರ್ಭಟಿಸುತ್ತಿರೋ ವರುಣ ನಿನ್ನೆ ಸಹ ಅಬ್ಬರಿಸಿದ್ದಾನೆ. ಸಂಜೆ ವೇಳೆಗೆ ಸಣ್ಣಗೆ ಆರಂಭವಾಗಿ ತಡರಾತ್ರಿವರೆಗೂ ಸುರಿದ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿ ಹೋಗಿದ್ದಾರೆ.

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
TV9 Web
| Updated By: ಆಯೇಷಾ ಬಾನು|

Updated on: Oct 12, 2021 | 7:49 AM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಕಾರಣವಾಗಿದೆ. ಭಾರಿ ಮಳೆ ಹಿನ್ನೆಲೆ ಮನೆಗೆ ನೀರು ನುಗ್ಗಿ ವ್ಯಕ್ತಿ ಬಲಿಯಾಗಿದ್ದಾರೆ. ವಿದ್ಯುತ್ ಪ್ರವಹಿಸಿ ವೆಂಕಟೇಶ್(56) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭಾರಿ ಮಳೆಗೆ ನೀರು ಮನೆಗೆ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ನೀರನ್ನು ಹೊರಹಾಕುತ್ತಿದ್ದ ವೇಳೆ ವೆಂಕಟೇಶ್ ಸ್ವಿಚ್ ಬೋರ್ಡ್ ಮುಟ್ಟಿದ್ದಾರೆ. ಆಗ ಸ್ವಿಚ್ ಬೋರ್ಡ್‌ನಲ್ಲಿ ವಿದ್ಯುತ್ ಪ್ರವಹಿಸ್ತಿದ್ದ ಹಿನ್ನೆಲೆ ವೆಂಕಟೇಶ್ ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ರೈತ ಸಾವು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಸೈದಾಪುರ ಗ್ರಾಮದ ಬಳಿ ಸಿಡಿಲು ಬಡಿದು ರೈತ ಮೃತಪಟ್ಟ ಘಟನೆ ನಡೆದಿದೆ. ಸಿಡಿಲಿಗೆ ರೈತ ಸಂಗಪ್ಪ ಫಕೀರಪ್ಪ ವಾರದ(45) ಬಲಿಯಾಗಿದ್ದಾರೆ. ಹೊಲದಿಂದ ಮನೆಗೆ ಬರುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಲ್ಲಿ ವರುಣನ ಮಹಾಪ್ರತಾಪ ಒಂದು ವಾರದಿಂದ ಸಿಲಿಕಾನ್‌ ಸಿಟಿಯಲ್ಲಿ ಆರ್ಭಟಿಸುತ್ತಿರೋ ವರುಣ ನಿನ್ನೆ ಸಹ ಅಬ್ಬರಿಸಿದ್ದಾನೆ. ಸಂಜೆ ವೇಳೆಗೆ ಸಣ್ಣಗೆ ಆರಂಭವಾಗಿ ತಡರಾತ್ರಿವರೆಗೂ ಸುರಿದ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಇದ್ದ ಮೋಡ ಕವಿದ ವಾತಾವರಣ ಸಂಜೆ ವೇಳೆಗೆ ಜನರಿಗೆ ಬಿಗ್ ಶಾಕ್ ನೀಡಿತ್ತು. ಸಂಜೆ ಟೈಂನಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ವಾಹನ ಸವಾರರು ತತ್ತರಿಸಿ ಹೋಗಿದ್ರು. ಕೆ.ಆರ್‌.ಮಾರುಕಟ್ಟೆ, ಟೌನ್‌ಹಾಲ್‌ ಮುಂಭಾಗ, ಕೆ.ಆರ್‌.ವೃತ್ತ, ಶಿವಾಜಿನಗರ, ರಾಜಾಜಿನಗರ, ಮೈಸೂರು ರಸ್ತೆ, ತುಮಕೂರು ರಸ್ತೆ, ಓಕಳಿಪುರಂ ರಸ್ತೆ ಅಂಡರ್‌ಪಾಸ್‌, ಮೇಖ್ರಿ ವೃತ್ತ ಸೇರಿದಂತೆ ಹಲವು ರಸ್ತೆಗಳ ಮೇಲೆ ಮಳೆ ನೀರು ಹೊಳೆಯಂತೆ ಹರಿಯುತ್ತಿತ್ತು. ಇದರಿಂದ ವಾಹನ ಸವಾರು ಸರ್ಕಸ್ ಮಾಡುತ್ತಲೇ ಸಂಚಾರ ಮಾಡಿದ್ರು. ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲಿ ಮಳೆಯಲ್ಲೇ ಸಂಚರಿಸಿದ್ರು.

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಶೇಷಾದ್ರಿಪುರಂನ ಶಿರೂರು ಪಾರ್ಕ್ ರಸ್ತೆಯಲ್ಲಿ ಮರವೊಂದು ಧರೆಗುರುಳಿತ್ತು. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ರಿಂದ ಮಂತ್ರಿಮಾಲ್ ಕಡೆಗೆ ಸಾಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಿಂದಾಗಿ ಕೆ.ಹೆಚ್.ಬಿ ಕಾಲೋನಿ ಬಳಿ ಆರೋಗ್ಯ ಇಲಾಖೆಯ ಕಾಂಪೌಂಡ್ ಕುಸಿದು ಬಸ್ ಸ್ಟಾಂಡ್‌ಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ಕಾಫಿನಾಡಿನಲ್ಲಿ ನಿಲ್ಲದ ಮಳೆ, ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಕಾಫಿ ಬೆಳೆಗಾರರಲ್ಲಿ ಆತಂಕ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?