AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್​ಹೋಲ್ ದುರಂತ: ಓರ್ವ ಕಾರ್ಮಿಕ ಸಾವು

ಮ್ಯಾನ್ ಹೋಲ್​​ ಸ್ಚಚ್ಛಗೊಳಿಸಲು ಬೇಕಾದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾವು ನೋವುಗಳು ಸಂಭವಿಸಿದಾಗ ಸರ್ಕಾರ, ಸಚಿವರು, ಬಿಬಿಎಂಪಿ ಅಧಿಕಾರಿಗಳು ಹೇಳಿಕೆ ಕೊಡುತ್ತಾರೆ. ಆದ್ರೆ, ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದರಿಂದ ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್​​ ಹೋಲ್​ ದುರಂತ ಸಂಭವಿಸಿದೆ.

ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್​ಹೋಲ್ ದುರಂತ: ಓರ್ವ ಕಾರ್ಮಿಕ ಸಾವು
Manhole
TV9 Web
| Edited By: |

Updated on: Jul 21, 2025 | 3:13 PM

Share

ಬೆಂಗಳೂರು, (ಜುಲೈ 21): ಮ್ಯಾನ್​ ಹೋಲ್ ಗೆ(manhole)​ ಇಳಿದು ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) RMC ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಆಶ್ರಯನಗರದ ನಿವಾಸಿ ಪುಟ್ಟಸ್ವಾಮಿ ಮೃತ ದುರ್ವೈವಿ. ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಂಥೋನಿ ಹಾಗೂ ಪುಟ್ಟಸ್ವಾಮಿ ಒಳಚರಂಡಿಗೆ ಇಳಿದಿದ್ದರು. ಸುಮಾರು ಅರ್ಧ ಗಂಟೆ ಒಳಗಡೆ ಕೆಲಸ ಮಾಡಿದ್ದಾರೆ. ಬಳಿಕ ಉಸಿರುಗಟ್ಟಿದಂತಾಗಿದ ಮೇಲೆ ಅಂಥೋನಿ ಹಾಗೂ ಪುಟ್ಟಸ್ವಾಮಿ ಆಚೆ ಬಂದಿದ್ದಾರೆ. ನಂತರ ಆಸ್ಪತ್ರೆಗೆ ದಾಖಲಾಗದೆ ಪುಟ್ಟಸ್ವಾಮಿ ಮನೆಗೆ ತೆರಳಿದ್ದ ವೇಳೆ ಸಾವನ್ನಪ್ಪಿದ್ದಾನೆ.ಇನ್ನು ಅಸ್ವಸ್ಥಗೊಂಡಿದ್ದ ಆಂಥೋನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಣದ ಆಸೆ ತೋರಿಸಿ ಒಳಚರಂಡಿಗೆ ಇಳಿಸಿರುವ ಶಂಕೆ ವ್ಯಕ್ತವಾಗಿದ್ದು, ಯಾರು ಇಳಿಸಿದ್ದು ಸೇರಿದಂತೆ ಈ ಬಗ್ಗೆ ಇನ್ನಿತರ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಈ ಹಿಂದೆ ಮ್ಯಾನ್​​ ಹೋಲ್ ದುರಂತ ಸಂಭವಿಸಿದ್ದಾಗ ಎಚ್​ ಆಂಜನೇಯ್ಯ ಅವರು ಕೆಲ ಕಟ್ಟು ನಿಟ್ಟಿನ ಸೂಚನೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಬಿಬಿಎಂಪಿಗೆ ನೀಡಿದ್ದರು. ಮ್ಯಾನ್ ಹೋಲ್ಗೆ ಇನ್ನು ಮುಂದೆ ಯಾರೂ ಇಳಿಯಬಾರದು. ಮ್ಯಾನ್ ಹೋಲ್ ಇಳಿಯುವ ಮುನ್ನ ಸ್ಥಳಿಯ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಇರಬೇಕು.‌ ಯಂತ್ರದ ಮೂಲಕ‌‌ ಮ್ಯಾನ್ ಹೋಲ್ ಓಪನ್ ಮಾಡಬೇಕು. ಅನಿವಾರ್ಯ ಕಾರಣದಿಂದ ಮ್ಯಾನ್ ಹೋಲ್ ನಲ್ಲಿ ಇಳಿಯಬೇಕಾದಲ್ಲಿ ಎಲ್ಲಾ ರೀತಿಯ ಪ್ರಿಕಾಶನ್ ಇರಬೇಕು ಎಂದು ಹೇಳಿದ್ದರು.

ಆದ್ರೆ, ಪದೇ ಪದೇ ಬೆಂಗಳೂರಿನಲ್ಲಿ ಈ ಮ್ಯಾನ್ ಹೋಲ್ ದುರಂತಗಳು ಸಂಭವಿಸುತ್ತಲೇ ಇವೆ. ಘಟನೆ ನಡೆದು ಸಾವು ನೋವು ಸಂಭವಿಸಿದಾಗ ಮಾತ್ರ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮ್ಯಾನ್ ಹೋಲ್​​ಗೆ ಕಾರ್ಮಿಕರನ್ನು ಇಳಿಸಬೇಕೆಂಬ ಮಾತುಗಳನ್ನಾಡುತ್ತಾರೆ. ಆದರೂ ಪದೇ ಪದೇ ಇಂತಹ ದುರ್ಘಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಸರ್ಕಾರ, ಇದಕ್ಕೊಂದು ಮಾರ್ಗಸೂಚಿ ಜಾರಿಗೆ ತರಬೇಕಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್