Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು

ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇದನ್ನು ತೆರವು ಕಾರ್ಯಚರಣೆ ವೇಳೆ ದುರ್ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು
ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ವ್ಯಕ್ತಿ ಸಾವು
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 17, 2023 | 5:58 PM

ಬೆಂಗಳೂರು, ಡಿ.17: ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.8 ರಂದು ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿತ್ತು. ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣ ಮಾಡುವ ಸಲುವಾಗಿ, ಇದ್ದ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವಲಾಗುತ್ತಿತ್ತು. ಈ ವೇಳೆ ಮೊಬೈಲ್ ಟವರ್ ಧರೆಗುರುಳಿತ್ತು. ಅದೃಷ್ಟವಶಾತ್​ ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು, ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿತ್ತು. ಇದೀಗ ಕಂಬವನ್ನು ತೆರೆವು ಕಾರ್ಯಾಚರಣೆ ವೇಳೆ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Sun, 17 December 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ