AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು

ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇದನ್ನು ತೆರವು ಕಾರ್ಯಚರಣೆ ವೇಳೆ ದುರ್ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು
ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ವ್ಯಕ್ತಿ ಸಾವು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Dec 17, 2023 | 5:58 PM

Share

ಬೆಂಗಳೂರು, ಡಿ.17: ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.8 ರಂದು ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿತ್ತು. ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣ ಮಾಡುವ ಸಲುವಾಗಿ, ಇದ್ದ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವಲಾಗುತ್ತಿತ್ತು. ಈ ವೇಳೆ ಮೊಬೈಲ್ ಟವರ್ ಧರೆಗುರುಳಿತ್ತು. ಅದೃಷ್ಟವಶಾತ್​ ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು, ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿತ್ತು. ಇದೀಗ ಕಂಬವನ್ನು ತೆರೆವು ಕಾರ್ಯಾಚರಣೆ ವೇಳೆ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Sun, 17 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ