AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು

ಬೇರೆ ಋತುಮಾನಗಳಿಗೆ ಹೋಲಿಸಿದರೆ ಮಳೆಗಾಲದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹುಳು-ಹುಪ್ಪಟೆ, ಹಾವಿನಂತಹ ಸರೀಸೃಪಗಳು ಮನೆಯೊಳಗೆ ಬರುವುದನ್ನು ನೀವು ನೋಡಿರಬಹುದು. ಅವುಗಳು ಬಂದು ಬೆಚ್ಚನೆ ಸ್ಥಳದಲ್ಲಿ ಅವಿತುಕೊಳ್ಳುತ್ತವೆ. ಚಪ್ಪಲಿ, ಶೂ, ವಾಹನಗಳಲ್ಲಿ ಸಹ ಸೇರಿಕೊಂಡುಬಿಡುತ್ತವೆ. ಮುಖ್ಯವಾಗಿ ಚಪ್ಪಲಿ, ಶೂ ಹಾಕಿಕೊಳ್ಳುವಾಗ ಕೊಂಚ ಎಚ್ಚರದಿಂದ ಇರಬೇಕು. ಯಾಕಂದ್ರೆ ಶೂನಂತೆ ಇರುವ ಕ್ರಾಕ್ಸ್​​ ಚಪ್ಪಲಿಯಲ್ಲಿ ಸೇರಿಕೊಂಡಿದ್ದ ಹಾವು ವ್ಯಕ್ತಿಗೆ ಕಚ್ಚಿದೆ. ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು
Prakash
TV9 Web
| Edited By: |

Updated on: Aug 30, 2025 | 8:21 PM

Share

ಬೆಂಗಳೂರು, (ಆಗಸ್ಟ್ 30): ಮನೆಯಿಂದ ಹೊರಹೋಗುವಾಗ ಚಪ್ಪಲಿ (slipper), ಶೂ ಹಾಕುವ ಮುನ್ನ ಅವುಗಳನ್ನೊಮ್ಮೆ ಸೂಕ್ಷ್ಮವಾಗಿ ಪರಿಶೀಲನೆ ಮಾಡಬೇಕು. ಯಾಕಂದ್ರೆ ಕ್ರಾಕ್ಸ್​​ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು (snake )ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಮಂಜು ಪ್ರಕಾಶ್(41) ಮೃತ ದುರ್ವೈವಿ. ಪ್ರಕಾಶ್ ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ ಸಂಭವಿಸಿದೆ.

ಮಂಜು ಪ್ರಕಾಶ್ ಅವರು ಇಂದು (ಆಗಸ್ಟ್ 30) ಬೆಳಗ್ಗೆ ಮನೆಯ ಹೊರಗೆ ಹೋಗಲು ಸಿದ್ಧವಾಗುತ್ತಿದ್ದರು. ಸಾಮಾನ್ಯವಾಗಿ ಬಳಸುವ ಕ್ರಾಕ್ಸ್ ಚಪ್ಪಲಿ ಮನೆಯ ಅಂಗಳದಲ್ಲೇ ಇಟ್ಟುಕೊಂಡಿದ್ದರು. ಅಲ್ಲಿ ಯಾರಿಗೂ ಗಮನಿಸದಂತೆ ಕೊಳಕು ಮಂಡಲ ಹಾವು ಒಳನುಗ್ಗಿ ಚಪ್ಪಲಿಯೊಳಗೆ ಅಡಗಿಕೊಂಡಿತ್ತು. ಅದನ್ನು ಗಮನಿಸದ ಮಂಜು ಪ್ರಕಾಶ್, ಚಪ್ಪಲಿಯನ್ನು ಧರಿಸಿ ಹೊರಗೆ ಹೋಗಿದ್ದಾರೆ. ಕೆಲವು ಸಮಯದ ನಂತರ ಅವರು ವಾಪಸ್ ಮನೆಗೆ ಮರಳಿ ಬಂದು ಮಲಗಿದ್ದರು. ಆಗಲೇ ಚಪ್ಪಲಿಯೊಳಗೆ ಅಡಗಿದ್ದ ಹಾವು ಕಚ್ಚಿದ ಪರಿಣಾಮ ಅವರ ದೇಹದಲ್ಲಿ ವಿಷ ಏರಿದ್ದು, ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ಇನ್ನು ನೆರೆಮನೆಯ ನಿವಾಸಿಯೊಬ್ಬರು ಚಪ್ಪಲಿಯನ್ನು ಗಮನಿಸಿದಾಗ, ಅದರೊಳಗೆ ಹಾವು ಸತ್ತಿರುವುದು ಕಂಡು ಬೆಚ್ಚಿಬಿದ್ದಿದ್ದು, ಕೂಡಲೇ ಅವರು ಮಂಜು ಮನೆಯವರಿಗೆ ತಿಳಿಸಿದ್ದಾರೆ. ಆದರೆ ಆ ವೇಳೆಗೆ ಮಂಜು ಪ್ರಕಾಶ್ ಮಲಗಿದ್ದ ಹಾಸಿಗೆಯ ಮೇಲೆಯೇ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದರು. ಮನೆಯವರು ಬಂದು ನೋಡಿದಾಗ ಅದಾಗಲೇ ಅವರ ಮಂಜು ಅವರ ಸಾವನ್ನಪ್ಪಿದ್ದರು.

ಮೃತ ಮಂಜು ಪ್ರಕಾಶ್ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ತಮ್ಮ ಕಾಲಿನ ಸ್ಪರ್ಶಶಕ್ತಿಯನ್ನು ಕಳೆದುಕೊಂಡಿದ್ದರು. ಹಾವು ಸಹ ಅದೇ ಕಾಲಿಗೆ ಕಚ್ಚಿರುವುದರಿಂದ ಅವರಿಗೆ ಯಾವುದೇ ಗೊತ್ತಾಗಿಲ್ಲ. ಕೊನೆಗೆ ಮನೆಗೆ ಬಂದು ಮಲಗಿದ್ದಾಗ ದೇಹದಲ್ಲಿ ವಿಷ ಹರಡಿದೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ