AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ. ಸಿಟ್ಟಿನಿಂದ ಸ್ನೇಹಿತನನ್ನೇ ಹತ್ಯೆಗೈದ

'ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ' ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು.

ಬೆಂಗಳೂರು: ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ. ಸಿಟ್ಟಿನಿಂದ ಸ್ನೇಹಿತನನ್ನೇ ಹತ್ಯೆಗೈದ
ಕೊಲೆ ನಡೆದ ಸ್ಥಳ, ಆರೋಪಿ ಮಾರಿಮುತ್ತು
ಆಯೇಷಾ ಬಾನು
|

Updated on:Mar 26, 2023 | 11:37 AM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಕೈ ನೋಡಿ ಭವಿಷ್ಯ ಹೇಳುತ್ತ ಅಪಹಾಸ್ಯ ಮಾಡುತ್ತಿದ್ದ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ. ಮಟ ಮಟ ಮಧ್ಯಾಹ್ನವೇ ಬಾರ್​ನಲ್ಲಿ ಹತ್ಯೆಯಾಗಿದೆ. ನರೇಶ್​ ಎಂಬ ವ್ಯಕ್ತಿ ಮೃತಪಟ್ಟಿದ್ದು ಮಾರಿಮುತ್ತು ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ನರೇಶ್, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಗೋವಿಂದರಾಜನಗರದಲ್ಲಿ ವಾಸವಿದ್ದ. ಗಾರೆ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ. ಹೀಗಿರಬೇಕಾದರೆ ಮಾರ್ಚ್ 25 ರಂದು ಬೆಳಗ್ಗೆ 11 ಗಂಟೆಗೆ ಕಬ್ಬಿನ ಹಾಲು ಕುಡಿದು ಬರ್ತಿನಿ ಅಂತಾ ಮನೆಯಿಂದ ಹೊರ ಬಂದವನು ಕೊಲೆಯಾಗಿದ್ದಾನೆ. ಬಾರ್​ಗೆ ಒಟ್ಟೊಟ್ಟಿಗೆ ಹೋಗಿದ್ದ ಸ್ನೇಹಿತನೇ ಭೀಕರವಾಗಿ ಕೊಂದಿದ್ದಾನೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

ಭವಿಷ್ಯ ಹೇಳ್ತೀನಿ ಎಂದವನನ್ನೇ ಬರ್ಬರವಾಗಿ ಕೊಲೆ

ನರೇಶ್ ಎಂಬಾತನನ್ನ ಕೊಂದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ‌. ವಿಚಾರಣೆ ವೇಳೆ ಆರೋಪಿ ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದ ವಿಚಿತ್ರ ಮನಸ್ಥಿತಿಯವನಾಗಿದ್ದ ಅನ್ನೋದು ಗೊತ್ತಾಗಿದೆ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಒಂದು ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ. ಮಾರ್ಚ್ 24ರ ಮಧ್ಯಾಹ್ನ ಮಾರಿಮುತ್ತು ಜೊತೆ ಬಾರಿಗೆ ಹೋಗಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದಿದ್ದ. ಈ ವೇಳೆ ‘ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ’ ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದಿದ್ದ ಮಾರಿಮುತ್ತು ಪರಾರಿಯಾಗಿದ್ದ. ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ.

ಮೃತನ ಪತ್ನಿ ಮಹಾದೇವಿ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಸ್ನೇಹಿತರೆಂದರೆ ತಮಾಷೆ..ರೇಗಿಸೋದು ಎಲ್ಲಾ ಇದ್ದೇ ಇರತ್ತೆ. ಇದೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡೊ ಹಂತಕ್ಕೆ ಹೋಗಿದ್ದು ನಿಜಕ್ಕೂ ದುರಂತ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Sun, 26 March 23

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು