ಬೆಂಗಳೂರು: ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ. ಸಿಟ್ಟಿನಿಂದ ಸ್ನೇಹಿತನನ್ನೇ ಹತ್ಯೆಗೈದ

'ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ' ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು.

ಬೆಂಗಳೂರು: ಕೈ ನೋಡಿ ಭವಿಷ್ಯ ಹೇಳ್ತೀನಿ ಎಂದು ವ್ಯಂಗ್ಯ. ಸಿಟ್ಟಿನಿಂದ ಸ್ನೇಹಿತನನ್ನೇ ಹತ್ಯೆಗೈದ
ಕೊಲೆ ನಡೆದ ಸ್ಥಳ, ಆರೋಪಿ ಮಾರಿಮುತ್ತು
Follow us
|

Updated on:Mar 26, 2023 | 11:37 AM

ಬೆಂಗಳೂರು: ಮದ್ಯದ ಅಮಲಿನಲ್ಲಿ ಕೈ ನೋಡಿ ಭವಿಷ್ಯ ಹೇಳುತ್ತ ಅಪಹಾಸ್ಯ ಮಾಡುತ್ತಿದ್ದ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ. ಮಟ ಮಟ ಮಧ್ಯಾಹ್ನವೇ ಬಾರ್​ನಲ್ಲಿ ಹತ್ಯೆಯಾಗಿದೆ. ನರೇಶ್​ ಎಂಬ ವ್ಯಕ್ತಿ ಮೃತಪಟ್ಟಿದ್ದು ಮಾರಿಮುತ್ತು ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ನರೇಶ್, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಗೋವಿಂದರಾಜನಗರದಲ್ಲಿ ವಾಸವಿದ್ದ. ಗಾರೆ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ. ಹೀಗಿರಬೇಕಾದರೆ ಮಾರ್ಚ್ 25 ರಂದು ಬೆಳಗ್ಗೆ 11 ಗಂಟೆಗೆ ಕಬ್ಬಿನ ಹಾಲು ಕುಡಿದು ಬರ್ತಿನಿ ಅಂತಾ ಮನೆಯಿಂದ ಹೊರ ಬಂದವನು ಕೊಲೆಯಾಗಿದ್ದಾನೆ. ಬಾರ್​ಗೆ ಒಟ್ಟೊಟ್ಟಿಗೆ ಹೋಗಿದ್ದ ಸ್ನೇಹಿತನೇ ಭೀಕರವಾಗಿ ಕೊಂದಿದ್ದಾನೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಡೆಡ್ಲಿ ವ್ಹೀಲಿಂಗ್, ವಿಡಿಯೋ ಶೇರ್ ಮಾಡಿಕೊಂಡು ಸಿಕ್ಕಿಬಿದ್ದ

ಭವಿಷ್ಯ ಹೇಳ್ತೀನಿ ಎಂದವನನ್ನೇ ಬರ್ಬರವಾಗಿ ಕೊಲೆ

ನರೇಶ್ ಎಂಬಾತನನ್ನ ಕೊಂದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ‌. ವಿಚಾರಣೆ ವೇಳೆ ಆರೋಪಿ ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದ ವಿಚಿತ್ರ ಮನಸ್ಥಿತಿಯವನಾಗಿದ್ದ ಅನ್ನೋದು ಗೊತ್ತಾಗಿದೆ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಒಂದು ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ. ಮಾರ್ಚ್ 24ರ ಮಧ್ಯಾಹ್ನ ಮಾರಿಮುತ್ತು ಜೊತೆ ಬಾರಿಗೆ ಹೋಗಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದಿದ್ದ. ಈ ವೇಳೆ ‘ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ’ ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಮತ್ತು ನರೇಶ್ ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದಿದ್ದ ಮಾರಿಮುತ್ತು ಪರಾರಿಯಾಗಿದ್ದ. ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ.

ಮೃತನ ಪತ್ನಿ ಮಹಾದೇವಿ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಸ್ನೇಹಿತರೆಂದರೆ ತಮಾಷೆ..ರೇಗಿಸೋದು ಎಲ್ಲಾ ಇದ್ದೇ ಇರತ್ತೆ. ಇದೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡೊ ಹಂತಕ್ಕೆ ಹೋಗಿದ್ದು ನಿಜಕ್ಕೂ ದುರಂತ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Sun, 26 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ