AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸ್ತಿದ್ದ ಬಾವನನ್ನೇ ಚಾಕುವಿನಿಂದ ಇರಿದು ಭಯಾನಕವಾಗಿ ಕೊಂದ ಬಾಮೈದ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್​ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್​ಗಾಗಿ ವೆಂಕಟಾಚಲಪತಿಯವರು ಹೊಸಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆ ಸಹ ಮಾಡಿದ್ದರು. ಆದರೆ ಇಷ್ಟೆಲ್ಲಾ ಸಹಾಯ ಮಾಡಿದ ಬಾವನನ್ನೇ ಕೊಲೆ ಮಾಡಿದ್ದಾನೆ.

ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸ್ತಿದ್ದ ಬಾವನನ್ನೇ ಚಾಕುವಿನಿಂದ ಇರಿದು ಭಯಾನಕವಾಗಿ ಕೊಂದ ಬಾಮೈದ
ಕೊಲೆ
TV9 Web
| Edited By: |

Updated on: Sep 09, 2024 | 7:03 AM

Share

ಬೆಂಗಳೂರು, ಸೆ.09: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ (Murder) ಭಯಾನಕ ಘಟನೆ ಬ್ಯಾಟರಾಯನಪುರದ ಸ್ಯಾಟ್​ಲೈಟ್ ಬಸ್ ನಿಲ್ದಾಣದ (Starlight Bus Stop) ಬಳಿ ನಡೆದಿದೆ. ವೆಂಕಟಾಚಲಪತಿ(46) ಕೊಲೆ ಮಾಡಿದ ಆರೋಪಿ ವಿಶ್ವನಾಥ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್​ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್​ಗಾಗಿ ವೆಂಕಟಾಚಲಪತಿಯವರು ಹೊಸಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆ ಸಹ ಮಾಡಿದ್ದರು. ಆದರೆ ಇಷ್ಟೆಲ್ಲಾ ಸಹಾಯ ಮಾಡಿದ ಬಾವನನ್ನೇ ಕೊಲೆ ಮಾಡಿದ್ದಾನೆ.

ಕೊಲೆಯಾದ ವೆಂಕಟಾಚಲಪತಿ ಟಿ.ಆರ್.ಮಿಲ್ ನಿವಾಸಿ. ಇನ್ನು ಮತ್ತೊಂದೆಡೆ ಆರೋಪಿ ವಿಶ್ವನಾಥ್​ನನ್ನು ಮಾತಾಡಿಸಲು ಮನೆಗೆ ಬಂದಿದ್ದ ಸಹೋದರಿಯ ಮೇಲೂ ವಿಶ್ವನಾಥ್ ದರ್ಪ ಮೆರೆದಿದ್ದಾನೆ. ಸಹೋದರಿಗೂ ಥಳಿಸಿ ಮನೆಯಿಂದ ಹೊರದಬ್ಬಿದ್ದಾನೆ. ಇದನ್ನು ಪ್ರಶ್ನಿಸಲು ವಿಶ್ವನಾಥ್​ ಮನೆಗೆ ವೆಂಕಟಾಚಲಪತಿ ಬಂದಾಗ ಚಾಕುವಿನಿಂದ ಹಲ್ಲೆ ನಡೆಸಿ 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೈದ ನಂತರ ಮನೆ ಹೊರಗೆ ಚಾಕು ಹಿಡಿದು ಓಡಾಡುತ್ತ ಪಕ್ಕದ ಮನೆಯವರಿಗೆ ನಮ್ಮ ಬಾವನನ್ನು ಕೊಂದಿದ್ದೇನೆ ಎಂದು ಕಿರುಚಾಡಿದ್ದಾನೆ. ಈ ವಿಷಯ ಕಿವಿಗೆ ಬೀಳುತ್ತಿದ್ದಂತೆ ಕೂಡಲೇ ಸ್ಥಳೀಯರು ಬ್ಯಾಟರಾಯನಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ವಿಶ್ವನಾಥ್​ನನ್ನು ಬಂಧಿಸಿದ್ದಾರೆ. ವೆಂಕಟಾಚಲಪತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಬಾಲಕಿ ಸೇರಿ ಆರು ಸಾವು

ಚಾಕುವಿನಿಂದ ಇರಿದು ಮಹಿಳೆಯ ಕೊಲೆಗೆ ಯತ್ನ

ಚಾಕುವಿನಿಂದ ಇರಿದು ಮಹಿಳೆಯ ಕೊಲೆಗೆ ಯತ್ನಿಸಲಾಗಿದೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಡಕಿ ತಾಂಡಾದಲ್ಲಿ ಸವಿತಾ ಎಂಬುವರ ಕತ್ತು ಕೊಯ್ದು ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಬೆಳಗ್ಗೆ ಕ್ರೂಸರ್ ವಾಹನದಲ್ಲಿ ಊರಿಗೆ ಹೊರಟಿದ್ದ ಸವಿತಾ ಮತ್ತು ಆ ವ್ಯಕ್ತಿ ಹೊರಟಿದ್ರು. ಈ ವೇಳೆ ಇಬ್ಬರ ಮಧ್ಯೆ ಜಗಳವಾಗಿದ್ದುಮ, ಕತ್ತು ಕೊಯ್ದು ಕೊಲೆಗೆ ಯತ್ನಿಸಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್