Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲೂನ್​​​​ವೊಂದರಲ್ಲಿ ಕೆಲಸ ಮಾಡಲು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ವಿಮಾನ ನಿಲ್ದಾಣದಿಂದ ನಾಪತ್ತೆ

ದೆಹಲಿ ಮೂಲದವರಾದ ಯೋಗೀಶ್‌ಕುಮಾರ್ ರೋಜಾನಾ ಅವರು ಸ್ನೇಹಿತ ಅನೀಸ್ ಕೆಲಸ ಮಾಡುತ್ತಿರುವ ಕಾಮನಹಳ್ಳಿಯ ಸಲೂನ್‌ನಲ್ಲಿಯೇ ಕೆಲಸ ಮಾಡಲು ಸೆಪ್ಟೆಂಬರ್ 15 ರಂದು ಬೆಂಗಳೂರಿಗೆ ಬಂದಿದ್ದರು.

ಸಲೂನ್​​​​ವೊಂದರಲ್ಲಿ ಕೆಲಸ ಮಾಡಲು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ವಿಮಾನ ನಿಲ್ದಾಣದಿಂದ ನಾಪತ್ತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 19, 2023 | 8:16 AM

ಬೆಂಗಳೂರು: ಸಲೂನ್‌ನಲ್ಲಿ (Salon) ಕೆಲಸ ಮಾಡಲು ಭಾನುವಾರ ಸಂಜೆ ನವದೆಹಲಿಯಿಂದ (Delhi) ಬೆಂಗಳೂರಿಗೆ (Bengaluru) ಬಂದಿದ್ದ 31 ವರ್ಷದ ಕೇಶ ವಿನ್ಯಾಸಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ನಾಪತ್ತೆಯಾಗಿದ್ದಾರೆ ಎಂದು ಆತನ ಸ್ನೇಹಿತ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯೋಗೀಶ್‌ಕುಮಾರ್ ರೋಜಾನಾ ನಾಪತ್ತೆಯಾದ ವ್ಯಕ್ತಿ.

ಯೋಗೀಶ್‌ಕುಮಾರ್ ರೋಜಾನಾ ದೆಹಲಿ ಮೂಲದವರಾಗಿದ್ದು, ಇವರು ಸ್ನೇಹಿತ ಅನೀಸ್ ಕೆಲಸ ಮಾಡುತ್ತಿರುವ ಕಾಮನಹಳ್ಳಿಯ ಸಲೂನ್‌ನಲ್ಲಿ ಕೆಲಸ ಮಾಡಲು ಸೆಪ್ಟೆಂಬರ್ 15 ರಂದು ಬೆಂಗಳೂರಿಗೆ ಬಂದಿದ್ದರು. ಆದರೆ ಯೋಗೀಶ್‌ಕುಮಾರ್ ರೋಜಾನಾ ಅವರಿಗೆ ಇಲ್ಲಿಯ ಕೆಲಸ ಹೊಂದಾಣಿಕೆಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಮರಳಿ ದೆಹಲಿಗೆ ಹೋಗಲು ನಿರ್ಧರಿಸಿದ್ದರು. ಈ ವಿಷಯವನ್ನು ಯೋಗೀಶ್‌ಕುಮಾರ್ ರೋಜಾನಾ ಪತ್ನಿಗೆ ತಿಳಿಸಿದ್ದರು.

ಹೀಗಾಗಿ ಯೋಗೀಶ್‌ಕುಮಾರ್ ರೋಜಾನಾ ಅವರ ಪತ್ನಿ ರಿಟರ್ನ್​​ ಟಿಕೆಟ್​ ಬುಕ್​​ ಮಾಡಲು ಮುಂದಾದರು. ಆದರೆ ಯಾವುದೇ ಟಿಕೆಟ್‌ಗಳು ತಕ್ಷಣಕ್ಕೆ ಲಭ್ಯವಾಗದ ಕಾರಣ, ಮರುದಿನ ಬೆಳಿಗ್ಗೆ (ಸೆಪ್ಟೆಂಬರ್ 16) ಅವರು ಆಕಾಶ ಏರ್‌ ಟಿಕೆಟ್​​ ಬುಕ್ ಮಾಡಿದ್ದರು. ಹೀಗಾಗಿ ನಾನು ಅವರನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಮನೆಗೆ ಹೋದೆ. ರಾತ್ರಿ ವಿಮಾನ ನಿಲ್ದಾಣದಲ್ಲಿ ಕಾದು ಬೆಳಗಿನ ಫ್ಲೈಟ್ ಹತ್ತುವುದಾಗಿ ಹೇಳಿದ್ದರು. ಆದರೆ, ಅವರು ವಿಮಾನ ಹತ್ತಲೇ ಇಲ್ಲ ಮತ್ತು ವಿಮಾನ ಕೂಡ ದೆಹಲಿಗೆ ಹೋಗಿಲ್ಲ ಎಂದು ಅನೀಸ್​ ಹೇಳಿದ್ದಾರೆ.

ಇದನ್ನೂ ಓದಿ: ಕೋಟಿಗಟ್ಟಲೆ ಆಸ್ತಿ ಹೊಂದಿದ್ದ ಆಕೆ 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಳು: ಇತ್ತೀಚೆಗಷ್ಟೇ ಆಕೆಯ ಆಧಾರ್ ನವೀಕರಿಸಲಾಗಿದೆ, ಹೋಗಿ ತಡಕಾಡಿದಾಗ!

ರೋಜಾನಾ ಅವರ ಮೊಬೈಲ್​​ಗೆ ಪದೇ ಪದೇ ಕರೆ ಮಾಡಿದೆ, ಫೋನ್ ಸ್ವಿಚ್ ಆಫ್ ಆಗಿದೆ. ಕೂಡಲೇ ಈ ವಿಷಯವನ್ನು ವಿಮಾನ ನಿಲ್ದಾಣ ಪೊಲೀಸರಿಗೆ ತಿಳಿಸಿದೆ. ಸೆಪ್ಟೆಂಬರ್​​ 17 ರ ಸಂಜೆ ಮಿಸ್ಸಿಂಗ್ ಕೇಸ್​​ ದಾಖಲಿಸಿದೆ. ರೋಜಾನಾ ಅವರ ಫೋನ್​​ ಟ್ರ್ಯಾಕ್​​ ಮಾಡಿದಾಗ ವಿಮಾನ ನಿಲ್ದಾಣದಿಂದ 20 ಕಿಮೀ ದೂರದಲ್ಲಿ ಮೊಬೈಲ್​ ಪತ್ತೆಯಾಗಿದೆ. ಆತ ವಿಮಾನ ನಿಲ್ದಾಣದಿಂದ ಹೊರನಡೆದು ಬೆಂಗಳೂರಿನಲ್ಲೇ ಎಲ್ಲೋ ಇದ್ದಾನೆ ಎಂಬ ಶಂಕೆ ಇದೆ ಎಂದು ಅನೀಸ್ ಹೇಳಿದರು.

ಯೋಗೀಶ್‌ಕುಮಾರ್ ರೋಜಾನಾ ಅವರನ್ನು ಕಳೆದ ಮೂರು ವರ್ಷಗಳಿಂದ ನಾನು ಬಲ್ಲೆ. ದೆಹಲಿಯಲ್ಲಿ ತನ್ನದೇ ಆದ ಸಲೂನ್ ನಡೆಸುತ್ತಿದ್ದಾರೆ. ಆದರೆ ಅಲ್ಲಿ ಅಷ್ಟೊಂದು ಸಂಪಾದನೆ ಆಗುತ್ತಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಕೆಲಸ ಮಾಡಿ ಹೆಚ್ಚು ಗಳಿಸಬಹುದೆಂದು ಬಂದಿದ್ದರು. ಅಲ್ಲದೇ ರೋಜನಾ ನಮ್ಮ ಸಲೂನ್​​ನಲ್ಲೇ ಕೆಲಸ ಮಾಡಲಿ ಎಂದು ನನ್ನ ಮಾಲಿಕರಿಗೆ ಶಿಫಾರಸು ಮಾಡಿದ್ದೆ ಎಂದು ಸ್ನೇಹಿತ ಅನೀಸ್​​ ತಿಳಿಸಿದ್ದಾರೆ.

ರೋಜನಾ ಅವರು ಈ ಹಿಂದೆ ಮೂರು ವರ್ಷಗಳ ಕಾಲ ಬೆಂಗಳೂರಿನಲ್ಲಿ ಕೇಶ ವಿನ್ಯಾಸಕನಾಗಿ ಕೆಲಸ ಮಾಡಿದ್ದರು. ಇತ್ತೀಚಿಗೆ ಮರಳಿ ದೆಹಲಿಗೆ ಹೋಗಿ ಅಲ್ಲಿಯೇ ಉದ್ಯೋಗ ಮಾಡಲು ಆರಂಭಿಸಿದ್ದರು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ