AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು

ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Jul 06, 2023 | 8:33 AM

Share

ಬೆಂಗಳೂರು: ನಿನ್ನೆ (ಜುಲೈ 05) ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು(Bengaluru Police) ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ. ಆದ್ರೆ, ಅದೊಂದು ಸುಳ್ಳು ಮಾಹಿತಿ ಎಂದು ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಹೌದು.. ಬೆಂಗಳೂರಿನ ಶಿವಾಜಿನಗರದಲ್ಲಿರುವ(Shivajinagar) ಆಜಾಂ ಮಸೀದಿಯಲ್ಲಿ (mosque) ಟೆರೆರಿಸ್ಟ್​ಗಳು ಬಾಂಬ್ ಇಟ್ಟಿದ್ದಾರೆಂದು ವ್ಯಕ್ತಿಯೋರ್ವ ಬುಧವಾರ ತಡರಾತ್ರಿ 112ಗೆ ಕರೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಇಡಿ ಮಸೀದಿಯನ್ನೇ ಪರಿಶೀಲಿಸಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಮಸೀದಿಯ ಸುತ್ತಾಮುತ್ತ ಹುಡುಕಾಡಿದ್ದಾರೆ. ಕೊನೆಗೆ ಸುಳ್ಳು ಮಾಹಿತಿ ಎಂದು ತಿಳಿದು ಪೊಲೀಸರು ನಿಟ್ಟುಸಿರು ಬಿಟ್ಟು ಅಲ್ಲಿಂದ ವಾಪಸ್​ ಆಗಿದ್ದಾರೆ.

ಸದ್ಯ ಪೊಲೀಸರ ನಿದ್ದೆ ಗೆಡಿಸಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಂಗಳೂರಿನಿಂದ ಹೊರಗಡೆ ಕುಳಿತುಕೊಂಡು ಪೊಲೀಸರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ಆತನ ಪತ್ತೆಯಾಗಿ ಶಿವಾಜಿನಗರ ಪೊಲೀಸರ ಬಲೆಬೀಸಿದ್ದಾರೆ.

ಈ ರೀತಿಯ ಸುಳ್ಳು ಬಾಂಬ್ ಕರೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಶಾಲೆಗಳಿಗೆ, ಐಟಿ-ಬಿಟಿ ಕಂಪನಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವ ಸಾಕಷ್ಟು ಉದಾಹರಣಗಳು ಇವೆ. ಇನ್ನು ಕೆಲವರು ಅಲ್ಲಿ ಬಾಂಬ್ ಇಟ್ಟಿದ್ದಾರೆ. ಇಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಪೊಲೀಸರಿಗೆ ಕರೆ ಮಾಡಿ ಇಲ್ಲ ಇಮೇಲ್​ ಮಾಡಿರುವುದು ಉಂಟು.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ