AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ವಿಚಾರಕ್ಕೆ ಜಗಳ; ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ವ್ಯಕ್ತಿ ಎಸ್ಕೇಪ್, ಆಸ್ಪತ್ರೆಯಲ್ಲಿ ವೃದ್ಧಗೆ ಚಿಕಿತ್ಸೆ

ಗೇರಿ ರೋಜಾರಿಯೊ ಜೊತೆಗೆ ಚಾರ್ಲ್ಸ್ ಮಾತಿನ ಚಕಮಕಿ ನಡೆದಿದೆ. ನಂತರ ಚಾರ್ಲ್ಸ್ ಇದ್ದಕ್ಕಿದ್ದಂತೆ ತನ್ನ ಮೊದಲನೇ ಮಹಡಿಯಿಂದ ವೃದ್ಧನ ಮೇಲೆ ಕಲ್ಲು ಬೀಸಿದ್ದಾನೆ. ಕಲ್ಲು ವೃದ್ಧನ ಗಡ್ಡಕ್ಕೆ ಬಿದ್ದು ರಕ್ತ ಚಿಮ್ಮಿದ್ದು 2 ಹಲ್ಲುಗಳು ಮುರಿದಿವೆ.

ನಾಯಿ ವಿಚಾರಕ್ಕೆ ಜಗಳ; ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ವ್ಯಕ್ತಿ ಎಸ್ಕೇಪ್, ಆಸ್ಪತ್ರೆಯಲ್ಲಿ ವೃದ್ಧಗೆ ಚಿಕಿತ್ಸೆ
ಗೇರಿ ರೋಜಾರಿಯೊ ಮತ್ತು ಚಾರ್ಲ್ಸ್
TV9 Web
| Edited By: |

Updated on: Nov 23, 2021 | 8:24 AM

Share

ಬೆಂಗಳೂರು: ನಾಯಿ ಮೂತ್ರ ವಿಸರ್ಜನೆ ಮಾಡಿದ್ದ ವಿಚಾರಕ್ಕೆ ಗಲಾಟೆ ನಡೆದಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ 71 ವರ್ಷದ ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ ನಡೆದಿದೆ.

ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಪ್ಪ ಲೇಔಟ್ನಲ್ಲಿ ಭಾನುವಾರ ರಾತ್ರಿ 11.30 ರ ಸುಮಾರಿಗೆ ಈ ಘಟನೆ ನಡೆದಿದೆ. ಗೇರಿ ರೋಜಾರಿಯೊ ಎಂಬ ವೃದ್ಧ ತನ್ನ ನಾಯಿಯನ್ನು ಆಚೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಎದುರು ಮನೆ ನಿವಾಸಿ ಚಾರ್ಲ್ಸ್ ಎಂಬಾತನ ಕಾರಿನ ಮೇಲೆ ನಾಯಿ ಮೂತ್ರ ವಿಸರ್ಜನೆ ಮಾಡಿದೆ. ಇದನ್ನು ನೋಡಿದ ಚಾಲ್ಸ್ ವೃದ್ಧನ ಮೇಲೆ ಕೆಂಡಾ ಮಂಡಲನಾಗಿದ್ದಾನೆ.

ಗೇರಿ ರೋಜಾರಿಯೊ ಜೊತೆಗೆ ಚಾರ್ಲ್ಸ್ ಮಾತಿನ ಚಕಮಕಿ ನಡೆದಿದೆ. ನಂತರ ಚಾರ್ಲ್ಸ್ ಇದ್ದಕ್ಕಿದ್ದಂತೆ ತನ್ನ ಮೊದಲನೇ ಮಹಡಿಯಿಂದ ವೃದ್ಧನ ಮೇಲೆ ಕಲ್ಲು ಬೀಸಿದ್ದಾನೆ. ಕಲ್ಲು ವೃದ್ಧನ ಗಡ್ಡಕ್ಕೆ ಬಿದ್ದು ರಕ್ತ ಚಿಮ್ಮಿದ್ದು 2 ಹಲ್ಲುಗಳು ಮುರಿದಿವೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲ್ಲಿನಿಂದ ಹೊಡೆದು ಚಾರ್ಲ್ಸ್ ಎಸ್ಕೇಪ್ ಆಗಿದ್ದಾನೆ. ಕಲ್ಲೇಟು ಬಿದ್ದ ತಕ್ಷಣ ಕೆಳಗೆ ಕುಸಿದು ಬಿದ್ದ ವೃದ್ಧ ಗೇರಿ ರೋಜಾರಿಯೊನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ವೃದ್ಧ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಹಲ್ಲೆ ಮಾಡಿದ ಚಾಲ್ಸ್ಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ಸಂಬಂಧವೊಂದು ಮುರಿದುಬಿದ್ದಾಗ ಅದಕ್ಕಾಗಿ ಪರಿತಪಿಸುವುದರಲ್ಲಿ ಅರ್ಥವಿಲ್ಲ, ಅದರಿಂದ ಪಾಠ ಕಲಿತು ಮುಂದೆ ಸಾಗಬೇಕು: ಡಾ ಸೌಜನ್ಯ ವಶಿಷ್ಠ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ