AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಚುನಾವಣೆ: ಸುಮಲತಾಗೊಂದು ಕಿವಿಮಾತು ಹೇಳಿದ ಆಪ್ತ ಸಚ್ಚಿದಾನಂದ!

ಬಿಜೆಪಿ ಹೈಕಮಾಂಡ್ ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಪಕ್ಷ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಪರಿಣಾಮ ಬಿಜೆಪಿ ಬೆಂಬಲಿತ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಬೆಂಬಲಿಗರು ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಆಪ್ತರಾಗಿರುವ ಸಚ್ಚಿದಾನಂದ ಅವರು ಸುಮಲತಾ ಅವರಿಗೆ ಕಿವಿ ಮಾತು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆ: ಸುಮಲತಾಗೊಂದು ಕಿವಿಮಾತು ಹೇಳಿದ ಆಪ್ತ ಸಚ್ಚಿದಾನಂದ!
ಮಂಡ್ಯ ಲೋಕಸಭಾ ಚುನಾವಣೆ: ಸುಮಲತಾಗೊಂದು ಕಿವಿಮಾತು ಹೇಳಿದ ಆಪ್ತ ಸಚ್ಚಿದಾನಂದ!
TV9 Web
| Edited By: Rakesh Nayak Manchi|

Updated on: Mar 25, 2024 | 7:35 PM

Share

ಬೆಂಗಳೂರು, ಮಾ.25: ಬಿಜೆಪಿ ಹೈಕಮಾಂಡ್ ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಪಕ್ಷ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಪರಿಣಾಮ ಬಿಜೆಪಿ ಬೆಂಬಲಿತ ಮಂಡ್ಯದ (Mandya) ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಬೆಂಬಲಿಗರು ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಆಪ್ತರಾಗಿರುವ ಸಚ್ಚಿದಾನಂದ ಅವರು ಸುಮಲತಾ ಅವರಿಗೆ ಕಿವಿ ಮಾತು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚ್ಚಿದಾನಂದ, ಈ ಬಾರಿ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಗೆಲ್ಲುವುದು ಖಚಿತ. ಮೈತ್ರಿ ಅಭ್ಯರ್ಥಿ ಗೆಲ್ಲಿಸಲು BJP-JDS ಒಟ್ಟಿಗೆ ಕೆಲಸ ಮಾಡಲಿದೆ. ಜಿಲ್ಲೆಯಲ್ಲಿ ಅಂಬರೀಶ್​ ಕುಟುಂಬಕ್ಕೆ ಉತ್ತಮ ಹೆಸರಿದೆ. ಸುಮಲತಾ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಸಂಪರ್ಕದಲ್ಲಿದ್ದಾರೆ. ಸುಮಲತಾರಿಗೆ ಉತ್ತಮ ಭವಿಷ್ಯ ಇದೆ. ಆದರೆ ತಾಳ್ಮೆಯಿಂದ ಇರಬೇಕು ಎಂದರು.

ಇದನ್ನೂ ಓದಿ: ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೇಮಾಡುತ್ತಾರೆ: ಹನಕೆರೆ ಶಶಿಕುಮಾರ್, ಸಂಸದೆ ಆಪ್ತ

ಪ್ರಧಾನಿ ಮೋದಿ ಬಗ್ಗೆ ಸುಮಲತಾ ಅವರು ಅಪಾರ ವಿಶ್ವಾಸ ಇಟ್ಟಿದ್ದಾರೆ. ನಾಳೆ ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆ ಕರೆದಿದ್ದಾರೆ. ಎಲ್ಲಾ ವಿಚಾರಗಳು ಚರ್ಚೆಗೆ ಬರಲಿವೆ ಎಂದರು. ಯಾರೇ ಅಭ್ಯರ್ಥಿ ಆದರೂ ಸುಮಲತಾ ಪ್ರಚಾರಕ್ಕೆ ಬರುತ್ತಾರಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಲತಾ ಅವರ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ. ನಮಗೆ ಸುಮಲತಾ ಅವರು ವಿಧಾನಸಭೆ ಚುನಾವಣೆ ಸಂಧರ್ಭದಲ್ಲಿ ಬಂದು ಆಶಿರ್ವಾದ ಮಾಡಿದ್ದರು ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕೂಡ ಸಭೆ ಮಾಡಿದ್ದರು ಎಂದರು. ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರಿಲ್ಲ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚ್ಚಿದಾನಂದ, ನಾನೊಬ್ಬ ಶ್ರೀರಂಗಪಟ್ಟಣದಲ್ಲಿ ಪರಾಜಿತ ಅಭ್ಯರ್ಥಿ. ನೂರಕ್ಕೆ ನೂರು ಬಾಹ್ಯ ಬೆಂಬಲ ನೀಡಿದರು. ಅಂಬರೀಶ್ ಅಣ್ಣ ಅಭಿಮಾನಿ ಆಗಿ ಸುಮಲತಾ ಅಕ್ಕನಿಗೆ ಭವಿಷ್ಯ ಇದೆ. ಅವರು ತಾಳ್ಮೆಯಿಂದ ಇರಬೇಕು ಎಂದರು.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ