AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ವಿದ್ಯಾರ್ಥಿನಿ ಸಾವು ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ ಎಂದು ಸಿದ್ದರಾಮಯ್ಯ ಟ್ವೀಟ್​​​

ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಮಂಡ್ಯ ವಿದ್ಯಾರ್ಥಿನಿ ಸಾವು ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ ಎಂದು ಸಿದ್ದರಾಮಯ್ಯ ಟ್ವೀಟ್​​​
ಸಿದ್ದರಾಮಯ್ಯ
TV9 Web
| Edited By: |

Updated on: Oct 13, 2022 | 6:18 PM

Share

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ.​​ ವಿದ್ಯಾರ್ಥಿನಿಗೆ ಆದ ಸ್ಥಿತಿ ಬೇರೆ ಯಾರಿಗೂ ಬರಬಾರದು. ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಟ್ಯೂಷನ್ ಶಿಕ್ಷಕನೇ ವಿದ್ಯಾರ್ಥಿನಿಯನ್ನು ಕೊಲೆಗೈದು ಇಷ್ಟೆಲ್ಲಾ ಹೈಡ್ರಾಮಾ ಸೃಷ್ಟಿಸಿರುವುದು ಪತ್ತೆಯಾಗಿದೆ. ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್​ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ಆರೋಪಿ ಕಾಂತರಾಜ್ ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ: ಹೆಚ್​.ಡಿ ಕುಮಾರಸ್ವಾಮಿ

ಈ ವಿಚಾರವಾಗಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಕೂಟ ಟ್ವೀಟ್​ ಮಾಡಿದ್ದು, ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ. ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ.

ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ನ್ಯಾಯ ಕೇಳುತ್ತೇನೆ: ಪೋಷಕರ ಆಕ್ರೋಶ

ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ನ್ಯಾಯ ಕೇಳುತ್ತೇನೆ ಎಂದು ಮಳವಳ್ಳಿಯಲ್ಲಿ ಟಿವಿ9ಗೆ ಬಾಲಕಿ ಪೋಷಕರ ಹೇಳಿಕೆ ನೀಡಿದರು. ಬೇಟಿ ಬಚಾವೋ ಬೇಟಿ ಪಡಾವೋ ಅಂತಾರಲ್ಲ ಹಾಗಂದ್ರೆ ಇದೇನಾ? ಎಂದು ಪ್ರಶ್ನಿಸಿದರು. ನನ್ನ ಮಗಳು ಏನು ತಪ್ಪು ಮಾಡಿದ್ದಳು, ಆಕೆಗೆ ಯಾಕೆ ಇಂತ ಶಿಕ್ಷೆ. ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಲಿ ಎಂದು ಶಾಲೆಗೆ ಟ್ಯೂಷನ್​ಗೆ ಕಳುಹಿಸುತ್ತೇವೆ. ಆದರೆ ಅಕ್ಷರ ಹೇಳಿ ಕೊಡುವವರೇ ಹೀಗೆ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು. ಆರೋಪಿ ಕಾಂತರಾಜನಿಗೆ ಕಠಿಣ ಶಿಕ್ಷೆ ಆಗಲೇ ಬೇಕು.

ಒಂದು ಗಲ್ಲಿಗೆ ಹಾಕಿ ಇಲ್ಲಾ ಎನ್ ಕೌಂಟರ್ ಮಾಡಿ, ಅದು ಆಗಿಲ್ವ ನಮ್ಮ ಕೈಗೆ ಒಪ್ಪಿಸಿ ಎಂದು ಮೃತ ದಿವ್ಯಾ ಪೋಷಕರಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಸದ್ಯ ಐಪಿಸಿ 302 ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರೊ ಪೊಲೀಸರು, ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ಪೋಕ್ಸೊ ಕಾಯ್ದೆ ಹಾಕಲು ಚಿಂತನೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ನಿನ್ನೆ ಬಾಲಕಿಯನ್ನ ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೇಸ್​ಗೆ ಮತ್ತಷ್ಟು ತಿರುವು ಸಿಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ