AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

ನವೆಂಬರ್ 6ರ ರಾತ್ರಿ ಮಂಡ್ಯಕ್ಕೆ ಹೊರಟಿದ್ದ ಅಭಿಷೇಕ್ ಮತ್ತು ಆತನ ಸ್ನೇಹಿತರು ರಾತ್ರಿ 2 ಗಂಟೆಗೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸುವಾಗ ಅಭಿಷೇಕ್ ಕೆಳಕ್ಕೆ ಬಿದ್ದಿದ್ದ. ಅಭಿಷೇಕ್, ಲೋಕಪಾವನಿ ನದಿಗೆ ಬಿದ್ದು ಮೃತಪಟ್ಟಿದ್ದ.

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ
ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ
TV9 Web
| Edited By: |

Updated on:Nov 18, 2021 | 1:08 PM

Share

ಬೆಂಗಳೂರು: ಮಂಡ್ಯದ ಯುವಕನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಾ, ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾನೆ. 5 ದಿನಗಳ ಬಳಿಕ ಶ್ರೀರಂಗಪಟ್ಟಣದ ಬಳಿ ಆತನ ಶವ ಪತ್ತೆಯಾಗಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು, ರೈಲ್ವೆ ಪೊಲೀಸರು ಮತ್ತು ಮಂಡ್ಯ ಪೊಲೀಸರ ಕಾರ್ಯಾಚರಣೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ನವೆಂಬರ್ 10 ರಂದು ಉಪ್ಪಾರಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಮಂಡ್ಯ ಅಭಿಷೇಕ್ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಗಾಂಧಿನಗರದ ಬಾರ್ & ರೆಸ್ಟೋರೆಂಟ್ ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಊರಿಗೆ ಹೋಗಿ ಬರುವುದಾಗಿ ಸ್ನೇಹಿತರ ಜೊತೆ ಮಂಡ್ಯಕ್ಕೆ ಹೊರಟಿದ್ದ. ನವೆಂಬರ್ 6ರ ರಾತ್ರಿ ಮಂಡ್ಯಕ್ಕೆ ಹೊರಟಿದ್ದ ಅಭಿಷೇಕ್ ಮತ್ತು ಆತನ ಸ್ನೇಹಿತರು ರಾತ್ರಿ 2 ಗಂಟೆಗೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸುವಾಗ ಅಭಿಷೇಕ್ ಕೆಳಕ್ಕೆ ಬಿದ್ದಿದ್ದ. ಅಭಿಷೇಕ್, ಲೋಕಪಾವನಿ ನದಿಗೆ ಬಿದ್ದು ಮೃತಪಟ್ಟಿದ್ದ. ಸತತ ಮಳೆಯಿಂದಾಗಿ 6-7 ಕಿ. ಮೀ. ವರೆಗೂ ಕೊಚ್ಚಿ ಹೋಗಿದ್ದ ಅಭಿಷೇಕ್ ಶವ ನವೆಂಬರ್ 14 ರಂದು ಶ್ರೀರಂಗಪಟ್ಟಣ ಬಳಿ ಪತ್ತೆಯಾಗಿತ್ತು.

Also Read: ಸೆಲ್ಫಿ ಹುಚ್ಚಿಗೆ ನದಿ ಮಧ್ಯದ ಬಂಡೆ ಏರಿದ್ದ ಯುವಕ ನೀರು ಪಾಲು

(mandya youth abhishek died while taking selfie in moving train)

Published On - 1:08 pm, Thu, 18 November 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ