AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಡಿಸ್ಚಾರ್ಜ್ ಮಾಡಲಾಗಿದೆ.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಶಂಕಿತ ಉಗ್ರ ಶಾರಿಕ್
ಆಯೇಷಾ ಬಾನು
|

Updated on:Mar 06, 2023 | 1:50 PM

Share

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ(Mangalore Cooker Blast) ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್(Shariq) ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ(Victoria Hospital) ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾನೆ.

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್​ 17ರಂದು ​ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎನ್​ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈಗ ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ಎನ್.ಐ.ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ. ಕಸ್ಟಡಿಗೆ ಪಡೆದು ಶಾರಿಕ್​ನ ವಿಚಾರಣೆ ಮಾಡಲಿದ್ದಾರೆ.

ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಸ್ಫೋಟದ ಹೊಣೆ ಹೊತ್ತ ಐಎಸ್​ಐಎಸ್

ಇನ್ನು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್ (ISIS)​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.

ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Mon, 6 March 23

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!