ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಡಿಸ್ಚಾರ್ಜ್ ಮಾಡಲಾಗಿದೆ.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಶಂಕಿತ ಉಗ್ರ ಶಾರಿಕ್
ಆಯೇಷಾ ಬಾನು

Updated on: Mar 06, 2023 | 1:50 PM

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ(Mangalore Cooker Blast) ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್(Shariq) ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ(Victoria Hospital) ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾನೆ.

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್​ 17ರಂದು ​ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎನ್​ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈಗ ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ಎನ್.ಐ.ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ. ಕಸ್ಟಡಿಗೆ ಪಡೆದು ಶಾರಿಕ್​ನ ವಿಚಾರಣೆ ಮಾಡಲಿದ್ದಾರೆ.

ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಸ್ಫೋಟದ ಹೊಣೆ ಹೊತ್ತ ಐಎಸ್​ಐಎಸ್

ಇನ್ನು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್ (ISIS)​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.

ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Mon, 6 March 23

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us