AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಕರ್ನಾಟಕದ 7 ಕಡೆ ಎನ್​ಐಎ, ಪೊಲೀಸ್ ತಂಡಗಳ ದಾಳಿ

ಯಾಸೀನ್ , ಮಾಜ್ ,ಶಾರಿಕ್ ಮೂವರು ಜಿಹಾದಿಗಳು. ಧರ್ಮಕ್ಕಾಗಿಯೇ ಪ್ರಾಣ ತ್ಯಜಿಸಲು ಸಿದ್ದವಾಗಿದ್ದ ಶಂಕಿತ ಉಗ್ರರು. ನ್‌ಸಿಆರ್ , ಹಿಜಾಬ್, ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೋಪಗೊಂಡಿದ್ದರು. ಈ ಬಗ್ಗೆ ಕೆಲವು ಮುಸ್ಲಿಂ ಬ್ಲಾಗ್‌ಗಳಲ್ಲಿ ಬೋದನೆ ಮಾಡುತ್ತಿದ್ದರು.

Breaking: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಕರ್ನಾಟಕದ 7 ಕಡೆ ಎನ್​ಐಎ, ಪೊಲೀಸ್ ತಂಡಗಳ ದಾಳಿ
ಶಾರಿಕ್ ಮನೆ ಮೇಲೆ ದಾಳಿ ನಡೆಸಲಾಗಿದೆ.
TV9 Web
| Edited By: |

Updated on:Nov 21, 2022 | 1:45 PM

Share

ಬೆಂಗಳೂರು: ಮಂಗಳೂರು ಜಿಲ್ಲೆಯ ಜಿಲ್ಲೆಯ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಗಂಟೆಯೊಂದು ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದೆ. ಸದ್ಯ ಈಗ ರಾಜ್ಯದಲ್ಲಿ 7 ಕಡೆ NIA ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 04 ಕಡೆ, ಮಂಗಳೂರು 01, ಮೈಸೂರು 02 ಕಡೆ ಶಾರಿಕ್‌ಗೆ ಸಂಬಂಧಿಸಿದ ವ್ಯಕ್ತಿಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಶಾರಿಕ್​, ಮಾಜ್​ ಮನೆ ಮೇಲೆ ತೀರ್ಥಹಳ್ಳಿ ಪೊಲೀಸರ ದಾಳಿ

ಮಂಗಳೂರು ಬಾಂಬ್​ ಸ್ಫೋಟದಲ್ಲಿ ಶಾರಿಕ್​ ಪಾತ್ರ ಹಿನ್ನೆಲೆ ತೀರ್ಥಹಳ್ಳಿ ಪಟ್ಟಣದ ಟಾಕೀಸ್ ರಸ್ತೆಯ 4 ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಇನ್ಸ್​ಪೆಕ್ಟರ್ ಅಶ್ವತ್ಥ್ ಗೌಡ, ಮಾಳೂರು ಸಿಪಿಐ ಪ್ರವೀಣ್, ಆಗುಂಬೆ PSI ಶಿವಕುಮಾರ್​, ಮಾಳೂರು PSI ನೇತೃತ್ವದಲ್ಲಿ ಸರ್ಚ್​ ವಾರಂಟ್​ ಪಡೆದು ಮನೆಗಳ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ.

ಇದನ್ನೂ ಓದಿ: Mangalore Blast: ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಮೈಸೂರಿನಲ್ಲಿ ತರಬೇತಿ ಪಡೆದಿದ್ದ ಶಾರಿಕ್​ನಿಂದ ಶಿವಮೊಗ್ಗದ ತುಂಗಾ ತೀರದಲ್ಲಿ ರಿಹರ್ಸಲ್

ಶಾರಿಕ್ ಐಸಿಸಿ ಉಗ್ರರ ನಂಟು ಹೊಂದಿರುವ ಶಂಕೆ

ಯಾಸೀನ್ , ಮಾಜ್ ,ಶಾರಿಕ್ ಮೂವರು ಜಿಹಾದಿಗಳು. ಧರ್ಮಕ್ಕಾಗಿಯೇ ಪ್ರಾಣ ತ್ಯಜಿಸಲು ಸಿದ್ದವಾಗಿದ್ದ ಶಂಕಿತ ಉಗ್ರರು. ಧರ್ಮ ವಿರುದ್ದ ಮಾತನಾಡುವವರ ವಿರುದ್ದ ಸೇಡಿಗೆ ಪ್ಲ್ಯಾನ್ ಮಾಡಿಕೊಂಡಿದ್ದರು. ಇವರು ಮುಸ್ಲಿಂ ಧರ್ಮವೇ ನಮಗೆ ಮುಖ್ಯ ಎಂದು ನಂಬಿದ್ದರು. ಪ್ರಾಣ ಬಿಟ್ಟು ಧರ್ಮದ ವಿರುದ್ದ ಮಾತನಾಡಬಾರದು. ಇತಿಚೀಗೆ ದೇಶದಲ್ಲಿ ನಡೆದ ಕೆಲವು ಮುಸ್ಲಿಂ ಧೋರಣೆ, ಎನ್‌ಸಿಆರ್ , ಹಿಜಾಬ್, ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೋಪಗೊಂಡಿದ್ದರು. ಈ ಬಗ್ಗೆ ಕೆಲವು ಮುಸ್ಲಿಂ ಬ್ಲಾಗ್‌ಗಳಲ್ಲಿ ಬೋದನೆ ಮಾಡುತ್ತಿದ್ದರು. ಶಾರಿಕ್, ಧರ್ಮದ ಬಗ್ಗೆ ಪ್ರಚಾರ ನಡೆಸುತ್ತಿದ್ದ. ಕಳೆದ ಬಾರಿ ಯಾಸೀನ್ ಮತ್ತು ಮಾಜ್ ಬಂಧನವಾದ್ರು ಶಾರಿಕ್ ಬಗ್ಗೆ ಬಾಯಿ ಬಿಟ್ಟಿರಲಿಲ್ಲ.

ಕೊಡಗು ಜಿಲ್ಲೆಯಲ್ಲಿ ಪೊಲೀಸರಿಂದ ಹೈಅಲರ್ಟ್

ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಮಡಿಕೇರಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬಾಂಬ್​ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗುತ್ತಿದೆ. ಮಡಿಕೇರಿಯ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ, ಡಿಸಿ ಕಚೇರಿ, ಕೋರ್ಟ್ ಆವರಣ​ ಸೇರಿ ಪ್ರಮುಖ ಸ್ಥಳಗಲ್ಲಿ ತಪಾಸಣೆ ಮಾಡಲಾಗುತ್ತಿದೆ.

Published On - 1:35 pm, Mon, 21 November 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್