ಭಯೋತ್ಪಾದಕರಿಗೆ ಫಂಡಿಂಗ್ ಎಲ್ಲಿಂದ? ಕುಕ್ಕರ್ ಬ್ಲಾಸ್ಟ್ ಪ್ರಮುಖ ಆರೋಪಿ ಶಾರಿಕ್​ನ ತೀವ್ರ ವಿಚಾರಣೆ ನಡೆಸಿದ ಇಡಿ

ಉಗ್ರರಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದುಬರುತ್ತಿದೆ ಎಂಬ ಆರೋಪಗಳ ಬಗ್ಗೆ ಜಾರಿ ನಿರ್ದೇಶನಾಯಲ ತನಿಖೆ ತೀವ್ರಗೊಳಿಸಿದೆ. ಎನ್​ಐಎ ತನಿಖೆ ವೇಳೆ ಸಿಕ್ಕ ಸುಳಿವಿನಿಂದಾಗಿ ಇದೀಗ ಇ.ಡಿ ಸಹ ಅಖಾಡಕ್ಕಿಳಿದಿದ್ದು, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದೆ.

ಭಯೋತ್ಪಾದಕರಿಗೆ ಫಂಡಿಂಗ್ ಎಲ್ಲಿಂದ? ಕುಕ್ಕರ್ ಬ್ಲಾಸ್ಟ್ ಪ್ರಮುಖ ಆರೋಪಿ ಶಾರಿಕ್​ನ ತೀವ್ರ ವಿಚಾರಣೆ ನಡೆಸಿದ ಇಡಿ
ಜಾರಿ ನಿರ್ದೇಶನಾಲಯ & ಶಾರಿಕ್​
Edited By:

Updated on: Aug 28, 2025 | 7:48 AM

ಬೆಂಗಳೂರು, ಆಗಸ್ಟ್ 28: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಹವಣಿಸಿದ್ದ ಭಯೋತ್ಪಾದಕರಿಗೆ (Terrorists) ಫಂಡಿಂಗ್ ಮಾಡಿದ್ದು ಯಾರು‌‌ ಎಂಬುದರ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್​ ಪ್ರಕರಣದ ಪ್ರಮುಖ ಆರೋಪಿ ಶಾರಿಕ್​ನನ್ನು (Mohammed Shariq) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಶಾರಿಕ್ ಮಾತ್ರವಲ್ಲದೆ, ಪರಪ್ಪರ ಅಗ್ರಹಾರ ಜೈಲಿನಲ್ಲಿರುವ ಇತರ ಶಂಕಿತ ಉಗ್ರರನ್ನೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಿಗೆ, ಅಕ್ರಮ ಹಣ ಸಂದಾಯ ಆಗಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರುವ ಬಗ್ಗೆ ಇಡಿ ತನಿಖೆ ಮಾಡುತ್ತಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿದೆ.

ಇದನ್ನೂ ಓದಿ
ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​ಗೆ ED ಎಂಟ್ರಿ, ಆರೋಪಿ​ ಖಾತೆ ಸೀಜ್
ಉಗ್ರ ನಾಸೀರ್ ಜೈಲಿನಿಂದ ತಪ್ಪಿಸಿಕೊಳ್ಳಲು ನಡೆದಿತ್ತು ಸಿನಿಮೀಯ ರೀತಿ ಸಂಚು!
ಉಗ್ರನಿಗೆ ನೆರವು: ವೈದ್ಯನ ಕರ್ಮಕಾಂಡ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ NIA
ಹಲವು ಸ್ಫೋಟಗಳ ಮಾಸ್ಟರ್ ಮೈಂಡ್ ನಾಸೀರ್ ಜತೆ ಬಂಧಿತರಿಗೆ ಪ್ರಬಲ ನಂಟು

ಉಗ್ರರ ತನಿಖೆಗೆ ಇ.ಡಿ ಮುಂದಾಗಲು ಕಾರಣವೇನು?

ದೇಶದ ಹಲವೆಡೆ ವಿದ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಶಂಕಿತ ಉಗ್ರರ ಷಡ್ಯಂತ್ರ ಎನ್​ಐಎ ತನಿಖೆವೇಳೆ ಬಯಲಾಗಿತ್ತು. ಅದರ ಬೆನ್ನಲ್ಲೇ ವಿದೇಶಿ ಹಣದ ಮೂಲದ ಕುರಿತಂತೆ ತನಿಖೆಗೆ ಇಡಿ ಮುಂದಾಗಿದೆ. ಶಂಕಿತ ಉಗ್ರರಿಗೆ ಭಯೋತ್ಪಾದನಗೆ ಹಣದ ಪೂರೈಕೆ, ಫಂಡಿಂಗ್ ಹಿಂದಿನ‌ ಕಾಣದ ಕೈಗಳು ಯಾವುದು ಎಂಬುದನ್ನು ಇಡಿ ತನಿಖೆ ಬಯಲಿಗೆಳೆಯಲಿದೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​ಗೆ ಇಡಿ ಎಂಟ್ರಿ, ಆರೋಪಿ​ ಖಾತೆ ಸೀಜ್

ಮಂಗಳೂರಿನಲ್ಲಿ 2022ರ ನವೆಂಬರ್‌ನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿತ್ತು. ಪ್ರಕರಣ ಸಂಬಂಧ ಮೂರು ವಾರಗಳ ಹಿಂದೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಐಸಿಸ್ ಸಂಘಟನೆಯ ಹಣಕಾಸು ವ್ಯವಹಾರ ಮತ್ತು ಕ್ರಿಪ್ಟೋ ಕರೆನ್ಸಿ ಮೂಲಕ ಹಣದ ವರ್ಗಾವಣೆಯನ್ನು ಇಡಿ ಪತ್ತೆ ಹಚ್ಚುತ್ತಿದ್ದು, ಇದರ ಭಾಗವಾಗಿ ಕುಕ್ಕರ್ ಬ್ಲಾಸ್ಟ್ ಕೇಸ್​​ಗೂ ಎಂಟ್ರಿ ಕೊಟ್ಟಿದೆ. ಇಡಿ ತನಿಖೆಗೆ ಇಳಿಯುತ್ತಿದ್ದಂತೆಯೇ, ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿತ್ತು. ಇದರ ಜೊತೆಗೆ, ಭಾರತಾದ್ಯಂತ ಐಸಿಸ್ ಚಟುವಟಿಕೆಗಳನ್ನು ವಿಸ್ತರಿಸುವ ಉಗ್ರರ ಸಂಚಿನ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ