AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ನಂತರ ಮತ್ತೆ ಓಪನ್ ಆದ ಮಂತ್ರಿ ಮಾಲ್; ಕೋರ್ಟ್​ ಸೂಚನೆಯಂತೆ ಬೀಗ ತೆಗೆದ ಬಿಬಿಎಂಪಿ

ಬಿಬಿಎಂಪಿಗೆ ಬರೋಬ್ಬರಿ 50 ಕೋಟಿ ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್ ಅನ್ನು ಮೇ.10ರ ಶುಕ್ರವಾರ ಅಕ್ಷಯ ತೃತೀಯದ ದಿನವೇ ಬಂದ್ ಮಾಡಲಾಗಿತ್ತು. ಸದ್ಯ ವಾರದ ಬಳಿಕ ಇಂದು ಮತ್ತೆ ಮಂತ್ರಿ ಮಾಲ್ ಓಪನ್ ಮಾಡಲಾಗಿದೆ. ಮಂತ್ರಿ ಮಾಲ್ 50 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು ಈ ಪೈಕಿ 20 ಕೋಟಿ ರೂ.ಗಳನ್ನ ಜುಲೈ 31 ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಲ್ ತೆರೆಯಲು‌ ಸೂಚನೆ ನೀಡಲಾಗಿದೆ.

ವಾರದ ನಂತರ ಮತ್ತೆ ಓಪನ್ ಆದ ಮಂತ್ರಿ ಮಾಲ್; ಕೋರ್ಟ್​ ಸೂಚನೆಯಂತೆ ಬೀಗ ತೆಗೆದ ಬಿಬಿಎಂಪಿ
ಮಂತ್ರಿ ಮಾಲ್
ಶಾಂತಮೂರ್ತಿ
| Updated By: ಆಯೇಷಾ ಬಾನು|

Updated on:May 17, 2024 | 11:56 AM

Share

ಬೆಂಗಳೂರು, ಮೇ.17: ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಬಂದ್ ಮಾಡಲಾಗಿದ್ದ ಪ್ರತಿಷ್ಠಿತ ಮಂತ್ರಿಮಾಲ್ (Mantri Mall) ಇವತ್ತಿನಿಂದ ಮತ್ತೆ ಓಪನ್ ಆಗಿದೆ. ಒಂದು ವಾರದ ನಂತರ ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ. ಮಂತ್ರಿ ಮಾಲ್​ಗೆ ಹಾಕಲಾಗಿರುವ ಬೀಗವನ್ನ ತೆರೆಯುವಂತೆ ಬಿಬಿಎಂಪಿಗೆ (BBMP) ಹೈ ಕೋರ್ಟ್ (High Court) ಸೂಚನೆ ನೀಡಿದ್ದು ಮಾಲ್​ಗೆ ಹಾಕಿದ್ದ ಬೀಗ ಓಪನ್ ಮಾಡಲಾಗಿದೆ. ಎಂದಿನಂತೆ ಶಾಪಿಂಗ್ ಮಾಡಲು ಜನ ಮುಂದಾಗಿದ್ದಾರೆ.

ಮಂತ್ರಿ ಮಾಲ್ 50 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು ಈ ಪೈಕಿ 20 ಕೋಟಿ ರೂ.ಗಳನ್ನ ಜುಲೈ 31 ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಲ್ ತೆರೆಯಲು‌ ಸೂಚನೆ ನೀಡಲಾಗಿದೆ. 250ಕ್ಕೂ ಅಧಿಕ ಮಳಿಗೆ ಹಾಗೂ ವ್ಯಾಪಾರ ಹಿನ್ನೆಲೆಯಲ್ಲಿ ಹೈಕೋರ್ಟ್ ಬಿಬಿಎಂಪಿಗೆ ಮಾಲ್ ತೆರೆಯುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ದುರ್ಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ಐತಿಹಾಸಿಕ ಬಾವಿ, ಪುಷ್ಕರಣಿಗಳು ಅವಸಾನದ ಅಂಚಿಗೆ

ಬಿಬಿಎಂಪಿಗೆ ಬರೋಬ್ಬರಿ 50 ಕೋಟಿ ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಮಾಲ್ ಮಾಲೀಕರಿಗೆ ಮೇ.10ರ ಶುಕ್ರವಾರ ಅಕ್ಷಯ ತೃತೀಯದ ದಿನವೇ ಪಾಲಿಕೆ ಅಧಿಕಾರಿಗಳು ಶಾಕ್ ಕೊಟ್ಟಿದ್ದರು. ಈ ಹಿಂದೆ ಹಲವು ಬಾರಿ ಎಚ್ಚರಿಕೆ ಕೊಟ್ಟರೂ ಬಾಕಿ ತೆರಿಗೆ ಪಾವತಿಸದ ಮಾಲ್ ಗೆ ಎಂಟನೇ ಬಾರಿಗೆ ಪಾಲಿಕೆ ಬೀಗ ಹಾಕಿತ್ತು.

ಬೆಳಗ್ಗೆಯೇ ಮಾಲ್ ಗೆ ಬೀಗ ಹಾಕಿದ ಅಧಿಕಾರಿಗಳು, ನಿಮ್ಮ ಆಸ್ತಿ ಸೀಜ್ ಮಾಡಿದ್ದೇವೆ, ಉದ್ಯಮಪರವಾನಗಿ ರದ್ದಾಗಿದೆ ಅಂತಾ ಬೋರ್ಡ್ ಹಾಕಿ ಮಾರ್ಷಲ್ ಗಳನ್ನ ಕಾವಲಿಗಿಟ್ಟಿದ್ದರು. ಎಂದಿನಂತೆ ಕೆಲಸಕ್ಕೆ ಬಂದ ಮಾಲ್ ಸಿಬ್ಬಂದಿ ದಿಢೀರ್ ಅಂತಾ ಮಾಲ್ ಬಂದ್ ಆಗಿದ್ದರಿಂದ ರಸ್ತೆಯಲ್ಲೇ ಕಾದುನಿಂತಿದ್ರು. ಮಾಲ್ ಗೆ ಬೀಗ ಬಿದ್ದಿದ್ದಕ್ಕೆ ಕಂಗಾಲಾದ ಸಿಬ್ಬಂದಿ, ಪದೇ ಪದೇ ಹೀಗೆ ಮಾಲ್ ಬಂದ್ ಆದ್ರೆ ನಮ್ಮ ಕತೆಯೇನು, ಮಾಲ್ ನಲ್ಲಿರುವ ನಮ್ಮ ಸ್ಟಾಲ್ ಗಳ ಮಾಲೀಕರು ಏನ್ ಮಾಡೋದು ಅಂತಾ ಬೇಸರ ತೋಡಿಕೊಂಡಿದ್ದರು. ಸದ್ಯ ಒಂದು ವಾರದ ಬಳಿಕ ಇಂದು ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:55 am, Fri, 17 May 24

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ