AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್​​ಗೆ ಮತ್ತೆ ಬೀಗ

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಬೀಗ ಜಡಿದಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹಲವಾರು ಬಾರಿ ತೆರಿಗೆ ಪಾವತಿಸದೆ ಮಾಲ್ ಸೀಜ್ ಆಗಿತ್ತು. ತೆರಿಗೆ ಕಟ್ಟದ ಕಾರಣ ಮಾಲ್ ಸಿಬ್ಬಂದಿ ಹಾಗೂ ಮಾಲೀಕರು ಕಂಗಾಲಾಗಿದ್ದು, ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್​​ಗೆ ಮತ್ತೆ ಬೀಗ
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್​​ಗೆ ಮತ್ತೆ ಬೀಗ
ಶಾಂತಮೂರ್ತಿ
| Edited By: |

Updated on:Nov 19, 2025 | 11:32 AM

Share

ಬೆಂಗಳೂರು, ನವೆಂಬರ್ 19: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ (Mantri Mall closed again). ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು ಬಾರಿ ಮಾಲ್​ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ 30 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿ ಮಾಲ್​ಗೆ ಬೀಗ ಬಿದ್ದಿತ್ತು. ಈ ಬಾರಿಯೂ ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್​ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆ. ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಇತ್ತ ಮಾರ್ಷಲ್ಸ್ ಮತ್ತು ಪೊಲೀಸರು ಮಾಲ್ ಬಳಿಯೇ ಬೀಡುಬಿಟ್ಟಿದ್ದಾರೆ.

ಇದನ್ನೂ ಓದಿ 51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

ಹಲವು ಬಾರಿ ಮಾಲ್​ಗೆ ಬೀಗ

2020 ರಲ್ಲಿ ಬರೋಬ್ಬರಿ 42,63,40,874 ರೂ ಆಸ್ತಿ ತೆರಿಗೆ ಕಟ್ಟದೇ ಇದ್ದಿದ್ದಕ್ಕೆ ಮತ್ತು BBMP ಗೆ ಕೊಟ್ಟ 10 ಕೋಟಿ ರೂ. ಚೆಕ್ ಬೌನ್ಸ್ ಆಗಿದ್ದಕ್ಕೆ ಮಂತ್ರಿ ಮಾಲ್​ಗೆ ಬೀಗ ಹಾಕಲಾಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ. ಅಂತೆಯೇ 2021 ರಲ್ಲಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಇದ್ದ ಕಾರಣ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನೂ ನೀಡಲಾಗಿತ್ತು.

ಮಂತ್ರಿ ಮಾಲ್​ಗೆ ಬೀಗ ಜಡಿದಿರುವ ವೀಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ 32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಿದ ಬಿಬಿಎಂಪಿ

2023ರಲ್ಲಿ 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡ ಮಾಲ್ಗೆ​ ಪಾಲಿಕೆ ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್​ ಆಗದಿರುವ ಕಾರಣ ಮಾಲ್​ಗೆ ಬೀಗ ಜಡಿದಿತ್ತು. ಮತ್ತೊಮ್ಮೆ 2024ರಲ್ಲಿಯೂ ಇದೇ ತಪ್ಪು ಮಾಡಿದ್ದ ಮಂತ್ರಿ ಮಾಲ್, ಸುಮಾರು 50 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನಲೆ ಮಂತ್ರಿ ಮಾಲ್​ನ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಬೋರ್ಡ್ ಹಾಕಿ, ಪಾಲಿಕೆ ಅಧಿಕಾರಿಗಳು ಸೀಜ್ ಮಾಡಿದ್ದರು. ಇದೀಗ ಮತ್ತೊಮ್ಮೆ ತೆಗಿ ವಿಷಯದಲ್ಲಿಯೇ ಮಾಲ್​ಗೆ ಬೀಗ ಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:56 am, Wed, 19 November 25

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್