AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರತ್ ಹಳ್ಳಿ ಲಾಡ್ಜ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ; ಹೆಂಡತಿ ಬಿಟ್ಟ ಸಲಿಂಗ ಕಾಮಿಗಳ ಕಾಮದಾಟದಲ್ಲಿ ಕೊಲೆ, ಆರೋಪಿ ಬಿಚ್ಚಿಟ್ಟ 4 ವರ್ಷಗಳ ಕತೆ

ಜುಲೈ 7 ರಂದು 24 ವರ್ಷದ ರಾಜಗೋಪಾಲ್ ಎಂಬಾತನ ಮೃತದೇಹ ಲಾಡ್ಜ್ ನ ಕೋಣೆಯಲ್ಲಿ ಪತ್ತೆಯಾಗಿತ್ತು. ಜುಲೈ 4 ರಂದು ಮಾರತ್ ಹಳ್ಳಿ ರಿಲ್ಯಾಕ್ಸ್ ಲಾಡ್ಜ್ ನಲ್ಲಿ ರಾಜಗೋಪಾಲ್ ತನ್ನ ಜೊತೆ ಮತ್ತೋರ್ವ ವ್ಯಕ್ತಿ ತಮಿಳು ಮಣಿವಣ್ಣನ್ ನೊಂದಿಗೆ ಒಂದು ರೂಂ ಬುಕ್ ಮಾಡಿದ್ದ.

ಮಾರತ್ ಹಳ್ಳಿ ಲಾಡ್ಜ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ; ಹೆಂಡತಿ ಬಿಟ್ಟ ಸಲಿಂಗ ಕಾಮಿಗಳ ಕಾಮದಾಟದಲ್ಲಿ ಕೊಲೆ, ಆರೋಪಿ ಬಿಚ್ಚಿಟ್ಟ 4 ವರ್ಷಗಳ ಕತೆ
ತಮಿಳು ಮಣಿವಣ್ಣನ್
TV9 Web
| Edited By: |

Updated on:Jul 14, 2022 | 4:54 PM

Share

ಬೆಂಗಳೂರು: ನಗರದ ಮಾರತ್ ಹಳ್ಳಿ ಲಾಡ್ಜ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಪೊಲೀಸರ ತ‌ನಿಖೆ ವೇಳೆ ಭಾರೀ ಟ್ವಿಸ್ಟ್ ಸಿಕ್ಕಿದೆ. ಮಾರತಹಳ್ಳಿ ಪೊಲೀಸರು(Marathahalli Police) ಕೊಲೆ ಆರೋಪಿ ತಮಿಳು ಮಣಿವಣ್ಣನ್ ಬಂಧಿಸಿದ್ದಾರೆ. ಕೇಸ್ ತನಿಖೆ ವೇಳೆ ಸಲಿಂಗ ಕಾಮಿಗಳ ಕಾಮದಾಟದ ನಡುವೆಯೇ ಕೊಲೆ ನಡೆದಿರುವ ರಹಸ್ಯ ರಿವೀಲ್ ಆಗಿದೆ.

ಸಲಿಂಗ ಕಾಮಿಗಳ ಕಾಮದಾಟದಲ್ಲಿ ಕೊಲೆ ಜುಲೈ 7 ರಂದು 24 ವರ್ಷದ ರಾಜಗೋಪಾಲ್ ಎಂಬಾತನ ಮೃತದೇಹ ಲಾಡ್ಜ್ ನ ಕೋಣೆಯಲ್ಲಿ ಪತ್ತೆಯಾಗಿತ್ತು. ಜುಲೈ 4 ರಂದು ಮಾರತ್ ಹಳ್ಳಿ ರಿಲ್ಯಾಕ್ಸ್ ಲಾಡ್ಜ್ ನಲ್ಲಿ ರಾಜಗೋಪಾಲ್ ತನ್ನ ಜೊತೆ ಮತ್ತೋರ್ವ ವ್ಯಕ್ತಿ ತಮಿಳು ಮಣಿವಣ್ಣನ್ ನೊಂದಿಗೆ ಒಂದು ರೂಂ ಬುಕ್ ಮಾಡಿದ್ದ. ಎರಡು ದಿನದ ಬಳಿಕ ಮತ್ತೆ ರೂಂ ರಿನೀವಲ್ ಮಾಡಿರಲಿಲ್ಲ. ಲಾಡ್ಜ್ ಸಿಬ್ಬಂದಿ ಪರಿಶೀಲಿಸಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿತ್ತು. ಮೃತ ರಾಜಗೋಪಾಲ್ ಜೊತೆಗೆ ಲಾಡ್ಜ್ ಗೆ ಬಂದು ರೂಂ ಪಡೆದಿದ್ದ ತಮಿಳು ಮಣಿವಣ್ಣನ್ ಎಸ್ಕೇಪ್ ಆಗಿದ್ದ. ಘಟನೆ ಬಳಿಕ ಲಾಡ್ಜ್ ಸಿಬ್ಬಂದಿ ಮಾರತ್ ಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ರು. ಮರಣೋತ್ತರ ಪರೀಕ್ಷೆಯಲ್ಲಿ ಕುತ್ತಿಗೆ ಹಿಸುಕಿ ಉಸಿರು ಗಟ್ಟಿಸಿ ರಾಜಗೋಪಾಲ್ ಕೊಲೆ ಮಾಡಿರುವುದು ಪತ್ತೆಯಾಗಿತ್ತು. ಹೀಗಾಗಿ ಅನುಮಾನಾಸ್ಪದ ಸಾವಿನ ಹಿನ್ನಲೆ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ಅಚ್ಚರಿಯ ಉತ್ತರ ಸಿಕ್ಕಿದೆ.

ಕಳೆದ 4 ವರ್ಷಗಳಿಂದ ರಾಜಗೋಪಾಲ್ ಮತ್ತು ತಮಿಳು ಮಣಿವಣ್ಣನ್ ಇಬ್ಬರು ಸಂಬಂಧ ಹೊಂದಿದ್ದರು. ಕೊಲೆ ಆರೋಪಿ ತಮಿಳು ಮಣಿವಣ್ಣನ್ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ. ಈ ಹಿಂದೆ ಮೊದಲಿಗೆ ತಮಿಳುನಾಡಿನ ಚೈನ್ನೈ ನಲ್ಲಿ ಆಸ್ಪತ್ರೆಯೊಂದರಲ್ಲಿ ಇಬ್ಬರು ಕೆಲಸ ಮಾಡ್ತಿದ್ದರು. ಇಬ್ಬರೂ ಮದುವೆ ಬಳಿಕವೂ ಸಂಬಂಧ ಮುಂದುವರೆಸಿದ್ದರಿಂದ ದಾಂಪತ್ಯ ಮುರಿದುಬಿದ್ದಿತ್ತು. ಇದೇ ವಿಚಾರವಾಗಿ ಪತ್ನಿ ತ್ಯಜಿಸಿದ ಬಳಿಕ ಕೊಲೆ ಆರೋಪಿ ತಮಿಳು ಮಣಿವಣ್ಣನ್ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಲ್ಯಾಬ್ ನಲ್ಲಿ ಕೆಲಸ ಮಾಡ್ತಿದ್ದ. ಚೈನ್ನೈ ನಿಂದ ಆಗಾಗ ರಾಜಗೋಪಾಲ್ ನನ್ನ ಮಾರತ್ ಹಳ್ಳಿಯ ಲಾಡ್ಜ್ ಗೆ ಕರೆಸಿಕೊಳ್ತಿದ್ದ. ಆದ್ರೆ ಜುಲೈ 4ರಿಂದ ಜುಲೈ7 ರ ನಡುವೆ ಇವರಿಬ್ಬರ ನಡುವೆ ಅದೇನಾಯ್ತೂ ರಾಜಗೋಪಾಲ್ ಲಾಡ್ಜ್ ನಲ್ಲೇ ಸತ್ತು ಬಿದ್ದಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

Published On - 3:56 pm, Thu, 14 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?