AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು

ದೊಡ್ಡ ದೊಡ್ಡ ಕೇಸ್ ಪತ್ತೆ ಮಾಡಿದ್ದ ಪೊಲೀಸರಿಗೆ ಮಾರತ್ ಹಳ್ಳಿ ಕೊಲೆ ಪ್ರಕರಣ ಸವಾಲಾಗಿದೆ. ಹಂತಕರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಚಾಲೆಂಜಿಂಗ್ ಆಗಿದೆ. ಹಂತಕನ ಹೆಜ್ಜೆಯಷ್ಟೇ ಅಲ್ಲ, ಮೃತನ ಗುರುತು ಸಹ ಪತ್ತೆ ಆಗದಂತೆ ಹತ್ಯೆ ಮಾಡಲಾಗಿದೆ.

ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು
ಮೃತ ವ್ಯಕ್ತಿಯ ಕೈ ಮೇಲೆ ಪತ್ತೆಯಾದ ಟ್ಯಾಟು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 21, 2023 | 12:55 PM

Share

ಬೆಂಗಳೂರು: ಇದೇ ಜೂನ್ ತಿಂಗಳ 9ರಂದು ಬೆಳ್ಳಂದೂರು ಕೋಡಿಯಲ್ಲಿ ಮೃತದೇಹ ಸಿಕ್ಕಿತ್ತು. ಡೆಡ್ ಬಾಡಿ ಸಿಕ್ಕಿ 13 ದಿನ ಕಳೆದರೂ ಇದುವರೆಗೂ ಚಿಕ್ಕ ಸುಳಿವು ಸಿಕ್ಕಿಲ್ಲ(Dead Body). ಮೃತ ಪಟ್ಟ ವ್ಯಕ್ತಿಯಾರೆಂಬುವ ಗುರುತು ಸಹ ಪತ್ತೆಯಾಗಿಲ್ಲ. ದೊಡ್ಡ ದೊಡ್ಡ ಕೇಸ್ ಪತ್ತೆ ಮಾಡಿದ್ದ ಪೊಲೀಸರಿಗೆ ಮಾರತ್ ಹಳ್ಳಿ ಕೊಲೆ ಪ್ರಕರಣ ಸವಾಲಾಗಿದೆ(Marathahalli Murder Case). ಹಂತಕರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಚಾಲೆಂಜಿಂಗ್ ಆಗಿದೆ. ಹಂತಕನ ಹೆಜ್ಜೆಯಷ್ಟೇ ಅಲ್ಲ, ಮೃತನ ಗುರುತು ಸಹ ಪತ್ತೆ ಆಗದಂತೆ ಹತ್ಯೆ ಮಾಡಲಾಗಿದ್ದು ಹಂತಕನ ಜಾಲ ಬೇಧಿಸುವಲ್ಲಿ ಪೊಲೀಸರು ಸೋಲುತ್ತಿದ್ದಾರೆ.

ಇದೇ ತಿಂಗಳ 9ರಂದು ಕತ್ತು ಬಿಗಿದು ಚೀಲದಲ್ಲಿ ತುಂಬಿದ ರೀತಿ ಅಂದಾಜು 28ರಿಂದ 35 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ತಲೆ ಕೆಡಿಸಿಕೊಂಡು ಹಂತಕನ ಪತ್ತೆಗೆ ಬಲೆ ಬೀಸಿದ್ದಾರೆ. ಆದ್ರೆ ತನಿಖೆಯಲ್ಲಿ ಹಂತಕರ ಬಗ್ಗೆ ಚಿಕ್ಕ ಸುಳಿವೂ ಸಹ ಸಿಗುತ್ತಿಲ್ಲ. ಬೆಂಗಳೂರಿನಲ್ಲಿ ಒಂದು ಟೀಮ್, ತಮಿಳುನಾಡಿನಲ್ಲಿ ಎರಡು ಟೀಮ್​ಗಳು ಹಂತಕರಿಗಾಗಿ ಬೀದಿ, ಬೀದಿ ಹುಡುಕಾಡುತ್ತಿವೆ. ಮೃತದೇಹ ಸಿಕ್ಕು 13 ದಿನ ಕಳೆದರೂ ಯಾವುದೇ ಕ್ಲ್ಯೂ ಇಲ್ಲ. ಹಂತಕನಿರಲಿ, ಕೊಲೆಯಾದ ವ್ಯಕ್ತಿ ಯಾರೆಂಬುದೇ ಪತ್ತೆಯಾಗಿಲ್ಲ. ಈ ಕೇಸ್ ಖಾಕಿಗೆ ಚಾಲೆಂಜಿಂಗ್ ಆಗಿದೆ.

ಟೆಕ್ನಕಲ್ ಮಾಹಿತಿಗಳ ಬೆನ್ನು ಬಿದ್ದ ಪೊಲೀಸರು

ಕೊಲೆ ಮಾಡುವ ಹಂತಕ ಭಯ, ಆತಂಕದಲ್ಲಿ ಒಂದು ಸುಳಿವನ್ನಾದರೂ ಬಿಟ್ಟೆ ಬಿಟ್ಟಿರುತ್ತಾನೆ ಎಂಬ ಮಾತನ್ನು ಸಿನಿಮಾಗಳಲ್ಲಿ ಕೇಳಿರುತ್ತೀವಿ. ಆದ್ರೆ ಇಲ್ಲಿ ಪೊಲೀಸರು ಕಳೆದ 12 ದಿನದಿಂದ ಟೆಕ್ನಕಲ್ ಮಾಹಿತಿಗಳ ಬೆನ್ನು ಬಿದಿದ್ದಾರೆ. ಆದ್ರೆ ಯಾವುದೇ ರೀತಿಯಲ್ಲೂ ಹಂತಕರು ಮಾತ್ರ ಸಾಕ್ಷಿ ಬಿಟ್ಟು ಹೋಗಿಲ್ಲ. ಹೀಗಾಗಿ ಖಾಕಿ ಸಾಂಪ್ರದಾಯಿಕ ಪೊಲೀಸರಿಂಗ್ ಆರಂಭಿಸಿದ್ದಾರೆ. 5 ಸಾವಿರ ಪಾಂಪ್ಲೇಟ್ ಪ್ರಿಂಟ್ ಮಾಡಿಸಿ ಬೆಂಗಳೂರು-ತಮಿಳುನಾಡಿನ ಹಲವೆಡೆ ಹಂಚಿದ್ದಾರೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಜಿ ಪರಮೇಶ್ವರ

ಟ್ಯಾಂಟು ಮೂಲಕ ಹಂತಕನ ಪತ್ತೆಗೆ ಜಾಲ

ಮತ್ತೊಂದೆಡೆ ಮೃತದೇಹದಲ್ಲಿ ಪತ್ತೆಯಾದ ಟ್ಯಾಟುವಿನಿಂದ ಕ್ಲ್ಯೂ ಹುಡುಕುವ ನಿಟ್ಟಿನಲ್ಲಿ ತಮಿಳುನಾಡಿನಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ. ಪತ್ತೆಯಾದ ಟ್ಯಾಟು ತಮಿಳಿನಲ್ಲಿದ್ದು ಅಲ್ಲಿನ ಟ್ಯಾಟು ಅಂಗಡಿಗಳಲ್ಲಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಕುಟುಂಬದಲ್ಲೇ ನಡೆದ ಗಲಾಟೆಗೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದ್ದು ಈವರೆಗೂ ಮೃತನ ಬಗ್ಗೆ ಯಾವುದೇ ಮಿಸ್ಸಿಂಗ್ ಕೇಸ್ ದಾಖಲಾಗಿಲ್ಲ. ಮೃತದೇಹ ಸಿಗುವ ನಾಲ್ಕು ದಿನದ ಮುಂಚೆ ಕೊಲೆ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಒಟ್ಟಾರೆ ವ್ಯಕ್ತಿ ನಾಪತ್ತೆಯಾಗಿ 16 ದಿನವಾದರೂ ಮೃತನ ಕಡೆಯವರು ಠಾಣೆಗೆ ಬಂದಿಲ್ಲ. ಸದ್ಯ ಮಾರತ್ ಹಳ್ಳಿ ಪೊಲೀಸರು ಈ ಕೇಸ್​ನಲ್ಲಿ ಮುಳುಗಿದ್ದು ಹಂತಕರಿಗಾಗಿ ಗುಪ್ತ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ