AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ: ತನಿಖೆ ವೇಳೆ ಬಯಲಾಯ್ತು ಮಾರತ್ತಹಳ್ಳಿ ಪಿಎಸ್​ಐನ ಸ್ಫೋಟಕ ಸತ್ಯ

ಕಿಡ್ನಾಪ್ ಕೇಸ್ ಸಂಬಂಧ ವೈಟ್ ಫೀಲ್ಡ್ ಡಿಸಿಪಿ ಗಿರೀಶ್​ ಅವರು ಪಿಎಸ್​ಐ ರಂಗೇಶ್, ಸಿಬ್ಬಂದಿ ಹರೀಶ್, ಮಹದೇವ್ ನಾಯ್ಕ್, ಮಹೇಶ್​ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ: ತನಿಖೆ ವೇಳೆ ಬಯಲಾಯ್ತು ಮಾರತ್ತಹಳ್ಳಿ ಪಿಎಸ್​ಐನ ಸ್ಫೋಟಕ ಸತ್ಯ
ಮಾರತ್ತಹಳ್ಳಿ ಪೊಲೀಸ್ ಠಾಣೆ
ಆಯೇಷಾ ಬಾನು
|

Updated on:Mar 24, 2023 | 9:35 AM

Share

ಬೆಂಗಳೂರು: ರಾಮಾಂಜಿನಿ ಎಂಬ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ 45 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಾಗಲೂರು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಈ ಪ್ರಕರಣದಲ್ಲಿ ಮಾರತ್ತಹಳ್ಳಿ ಪಿಎಸ್ಐ ರಂಗೇಶ್ ಕಳ್ಳಾಟ ಬಟಾಬಯಲಾಗಿದೆ. ಮಾರತ್ತಹಳ್ಳಿ ಪಿಎಸ್​ಐ ಮತ್ತು ಸಿಬ್ಬಂದಿ ಸೇರಿಕೊಂಡು ಈ ಕೃತ್ಯ ಎಸಗಿದ್ದು ಬಾಗಲೂರು ಪೊಲೀಸರ ತನಿಖಾ ವರದಿ ಆಧರಿಸಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್​ ಅವರು ಪಿಎಸ್​ಐ ರಂಗೇಶ್, ಸಿಬ್ಬಂದಿ ಹರೀಶ್, ಮಹದೇವ್ ನಾಯ್ಕ್, ಮಹೇಶ್​ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಹಣ ಮಾಡಲೆಂದೇ ಫೀಲ್ಡಿಗೆ ಇಳಿದಿದ್ದ ಪಿಎಸ್ಐ ರಂಗೇಶ್ ಮತ್ತು ತಂಡ ರಾಮಾಂಜನಿಯನ್ನು ಬಾಗಲೂರು ಅಂಗಡಿಯಿಂದ ಕರೆತಂದಿದ್ದರು. ಆದರೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದೆ ಕಾರಿನಲ್ಲಿ ಮಾರತ್ತಹಳ್ಳಿ ಎಲ್ಲಾ ರೌಂಡ್ಸ್ ಹಾಕಿಸಿದ್ದಾರೆ. ಪೊಲೀಸ್ ಠಾಣೆ ಪಕ್ಕದಲ್ಲಿ ರಾಮಾಂಜನಿಯನ್ನ ಇರಿಸಿದ್ದಾರೆ. ಎರಡು ದಿನಗಳ ಕಾಲ ಜೊತೆಗೆ ಇಟ್ಟುಕೊಂಡು ಬಳಿಕ ರಾಮಾಂಜನಿಯ ತಂದೆಗೆ ಫೋನ್ ಮಾಡಿ 45 ಲಕ್ಷ ಹಣ ತರುವಂತೆ ಹೇಳಿಸಿದ್ದಾರೆ. ಇದರಿಂದ ಆತಂಕಗೊಂಡ ತಂದೆ ಮಾರ್ಚ್ 21 ರಂದು ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಗನನ್ನ ಕಿಡ್ನಾಪ್ ಮಾಡಿದ್ದಾರೆಂದು ಎಫ್ಐಆರ್ ದಾಖಲಿಸಿದ್ದಾರೆ. ಈ ವೇಳೆ ಬಾಗಲೂರು ಪೊಲೀಸರು ಮಾರತ್ತಹಳ್ಳಿ ಪೊಲೀಸರ ಸಂಪರ್ಕ ಮಾಡಿದ್ದಾರೆ. ಆಗ ರಾಮಾಂಜನಿಯನ್ನ ಮಾರತ್ತಹಳ್ಳಿ ಠಾಣೆ ಬಳಿ ಇರಿಸಿಕೊಂಡಿದ್ದು ಪತ್ತೆಯಾಗಿದೆ. ನಂತರ ಮಾರತ್ತಹಳ್ಳಿ ಪೊಲೀಸರು ಬಾಗಲೂರು ಠಾಣೆಗೆ ವ್ಯಕ್ತಿಯನ್ನು ಬಿಟ್ಟುಬಂದಿದ್ದಾರೆ.

ಇಷ್ಟೆಲ್ಲ ಆದ ಮೇಲೆ ಬಾಗಲೂರು ಪೊಲೀಸರು ವಿಚಾರಣೆ ನಡೆಸಿದ್ದು ಈ ವೇಳೆ ರಾಮಾಂಜನಿ ಎಲ್ಲವನ್ನು ಹೇಳಿದ್ದಾನೆ. ಇದೆಲ್ಲಾ ಹೈಡ್ರಾಮಾ ಬಳಿಕ ರಾಮಾಂಜನಿ ಮೇಲೆ ಮಾರತ್ತಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹುಲಿ ಚರ್ಮ ಮಾರಾಟಕ್ಕೆ ಯತ್ನ ಎಂದು ಎಫ್ಐಆರ್ ಹಾಕಲಾಗಿದೆ. ಅಸಲಿಗೆ ಅದು ನಕಲಿ ಹುಲಿ ಚರ್ಮ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ನಾಲ್ವರು ಅಮಾನತು

ಬಾಗಲೂರು ಪೊಲೀಸರಿಂದ ಪೊಲೀಸ್ ಕಮೀಷನರ್​ಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಲಾಗಿದೆ. ತನಿಖಾ ವರದಿ ಸಲ್ಲಿಕೆ ಬೆನ್ನಲ್ಲೇ ಪಿಎಸ್​ಐ ಸೇರಿ ನಾಲ್ವರನ್ನು ಅಮಾನತು ಮಾಡಿ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ತನಿಖೆ ವೇಳೆ ಪಿಎಸ್​ಐ ರಂಗೇಶ್ ಸೇರಿ ಮೂವರು ಸಿಬ್ಬಂದಿಗಳು ಪ್ರಕರಣದಲ್ಲಿ ಭಾಗಿ ಆರೋಪ ಸಾಬೀತಾಗಿದೆ. ಕರ್ತವ್ಯ ಲೋಪ ಹಾಗೂ ಹಣದ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವುದು ರಿಪೋರ್ಟ್ ನಲ್ಲಿ ಉಲ್ಲೇಖವಾಗಿದೆ. ಎರಡು ದಿನಗಳ ಬಳಿಕ ತಡವಾಗಿ ಪ್ರಕರಣ ದಾಖಲು ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದ ಹಿನ್ನಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಇಲಾಖೆ ತನಿಖೆ ಮಾಡಲು ಸಹ ಆದೇಶ ಮಾಡಿದ್ದಾರೆ. ಸದ್ಯ ಪರಾರಿಯಾಗಿರುವ ಪಿಎಸ್​ಐ ರಂಗೇಶ್, ಸಿಬ್ಬಂದಿಗಳಾದ ಮಹದೇವ್ ನಾಯ್ಕ್, ಮಹೇಶ್ ಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಆರೋಪಿತರ ಹುಟ್ಟೂರಿಗೆ ತೆರಳಿ ಬಾಗಲೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Fri, 24 March 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್