AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಸರ್ಕಾರಿ ನೌಕರರಿಗೆ ಇನ್ನೂ ಆಗಿಲ್ಲ ಮಾರ್ಚ್​​ ಸಂಬಳ: ಗೃಹಲಕ್ಷ್ಮೀಗೆ ಬಳಕೆಯಾಯ್ತಾ ಹಣ?

ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ವಿಳಂಬವಾಗಿದೆ. ಏಪ್ರಿಲ್ 18 ಕಳೆದರೂ ಹಣ ಸಂದಾಯವಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಮಸ್ಯೆಗಳು ಮತ್ತು ಆರ್ಥಿಕ ಕೊರತೆಯೇ ವಿಳಂಬಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಹಣ ವರ್ಗಾವಣೆಯಾಗಿರುವುದು ಸಮಸ್ಯೆಗೆ ಕಾರಣವೆಂಬ ಆರೋಪ ಕೇಳಿಬಂದಿದೆಯಾದರೂ, ಹಣಕಾಸು ಇಲಾಖೆ ಇದನ್ನು ತಳ್ಳಿಹಾಕಿದೆ.

ಹಲವು ಸರ್ಕಾರಿ ನೌಕರರಿಗೆ ಇನ್ನೂ ಆಗಿಲ್ಲ ಮಾರ್ಚ್​​ ಸಂಬಳ: ಗೃಹಲಕ್ಷ್ಮೀಗೆ ಬಳಕೆಯಾಯ್ತಾ ಹಣ?
ಸಾಂದರ್ಭಿಕ ಚಿತ್ರImage Credit source: shutterstock.com
ಪ್ರಸನ್ನ ಹೆಗಡೆ
|

Updated on: Apr 19, 2026 | 8:13 AM

Share

ಬೆಂಗಳೂರು, ಏಪ್ರಿಲ್​​ 19: ಸಾಮಾನ್ಯವಾಗಿ ತಿಂಗಳ ಮೊದಲವಾರವೇ ರಾಜ್ಯದ ಸರ್ಕಾರಿ ನೌಕರರಿಗೆ ಪಾವತಿಯಾಗುತ್ತಿದ್ದ ಹಿಂದಿನಿ ತಿಂಗಳ ಸಂಬಳ ಈ ಸಲ ಭಾರಿ ವಿಳಂಬವಾಗಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್​​ 18 ಕಳೆದರೂ ಹಲವು ಇಲಾಖೆಗಳ ನೌಕರರಿಗೆ ಮಾರ್ಚ್​​ ಸಂಬಳ ಇನ್ನೂ ಕೈ ಸೇರಿಲ್ಲ. ಇದರಿಂದಾಗಿ ಆದಾಯ, ಶಿಕ್ಷಣ, ಪೊಲೀಸ್, ಪಶುಸಂಗೋಪನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸೇರಿದಂತೆ ಪ್ರಮುಖ ಇಲಾಖೆಗಳ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರಿಗೆ ಏಪ್ರಿಲ್ 9–10ರಂದು ಸಂಬಳ ಬಂದಿದೆಯಾದರೂ, ಬಹಳಷ್ಟು ಮಂದಿ ಇನ್ನೂ ಕಾಯುತ್ತಿದ್ದಾರೆ ಎನ್ನಲಾಗಿದೆ.

ಹಣದ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಸೋಮವಾರದೊಳಗೆ ಸಂಬಳ ಪಾವತಿ ಆಗಬಹುದು ಎಂದು ಖಜಾನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ರಾಜ್ಯದ ಸುಮಾರು 6.4 ಲಕ್ಷ ನೌಕರರಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಮೂಲಗಳ ಪ್ರಕಾರ ತಾಂತ್ರಿಕ ಸಮಸ್ಯೆಗಳು ಮತ್ತು ಹಣಕಾಸಿನ ಕೊರತೆಯೇ ಮಾರ್ಚ್​​ ತಿಂಗಳಿನ ಸಂಬಳ ವಿಳಂಬಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಹಣಕಾಸು ವರ್ಷದ ಅಂತ್ಯದಲ್ಲಿ ಒಂದು-ಎರಡು ವಾರ ಸಂಬಳ ವಿಳಂಬ ಆಗುವುದುಂಟು. ಆದರೆ ಇಷ್ಟು ವಿಳಂಬ ಅಪರೂಪ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ; ದೇಶದ ಮಹಿಳೆಯರ ಗೆಲುವು ಎಂದ ಕೈ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೂ ಮುನ್ನ ಗೃಹಲಕ್ಷ್ಮಿ ಯೋಜನೆಗೆ 6,000 ಕೋಟಿ ಹಣ ನೀಡಲಾಗಿದೆ. ಸುಮಾರು ಮೂರು ತಿಂಗಳ ಬಾಕಿ ಪಾವತಿಗಾಗಿ ದೊಡ್ಡ ಮೊತ್ತದ ಹಣವನ್ನು ವ್ಯಯಿಸಿರುವ ಕಾರಣಕ್ಕೆ ಈಗ ಸರ್ಕಾರಿ ನೌಕರರ ಸಂಬಳಕ್ಕೆ ದುಡ್ಡಿನ ಸಮಸ್ಯೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಗೃಹಲಕ್ಷ್ಮಿ ಯೋಜನೆಗೆ ಸಂಬಳದ ಹಣವನ್ನು ನೀಡಲಾಗಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ. ಕೆಲವು ಇಲಾಖೆಗಳ ಡಿಡಿಒಗಳು ನಿಧಾನವಾಗಿದ್ದಾರೆ. ಸಂಬಳ ಪಾವತಿ ಇಲಾಖೆಯ ಮುಖ್ಯಸ್ಥರ ಹೊಣೆ ಎಂದು ತಿಳಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ