AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ, ಕ್ರಿಪ್ಟೋ ಹೂಡಿಕೆಯ ಆಮಿಷವೊಡ್ಡಿ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾಳೆ. ಸದ್ಯ ಬೆಂಗಳೂರಿನ ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ
ಪ್ರಾತಿನಿಧಿಕ ಚಿತ್ರImage Credit source: Getty Images
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 07, 2026 | 10:10 AM

Share

ಬೆಂಗಳೂರು, ಜೂನ್​​ 07: ಮದುವೆ ಆಗೋದಾಗಿ ನಂಬಿಸಿ ಯುವಕನೋರ್ವನಿಗೆ ಯುವತಿ (girl) ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ (Fraud) ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಅನಿಲ್ ಎಂಬಾತನಿಗೆ ಲಕ್ಷ್ಮೀ ವಂಚಿಸಿದ್ದಾಳೆ. ಸದ್ಯ ಯುವಕ ನೀಡಿದ ದೂರಿನನ್ವಯ ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ವಧುವಿನ ಹುಡುಕಾಟದಲ್ಲಿದ್ದ ಯುವಕನಿಗೆ ಮಹಾ ಮೋಸ
  • ಯುವತಿಯಿಂದ ಬರೋಬ್ಬರಿ 35 ಲಕ್ಷ ರೂ ವಂಚನೆ
  • ಬೆಂಗಳೂರಿನ ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ಅನಿಲ್​​ ಮ್ಯಾಟ್ರಿಮೋನಿ ವೆಬ್​ಸೈಟ್​​ ಮೂಲಕ ಹುಡುಗಿ ಹುಡುಕುತ್ತಿದ್ದರು. ಈ ವೇಳೆ ಭಾಸ್ಕರ್ ರಾವ್ ಎಂಬಾತ ಅನಿಲ್​ಗೆ ಕರೆ ಮಾಡಿದ್ದರು. ನಿಮ್ಮ ಪ್ರೊಫೈಲ್​ ಇಷ್ಟ ಆಗಿದೆ, ಲಕ್ಷ್ಮೀಗೆ ನಂಬರ್ ನೀಡಿದ್ದೀನಿ‌ ಎಂದಿದ್ದ. ಬಳಿಕ ಖದ್ದು ಲಕ್ಷ್ಮೀ ಅನಿಲ್​ಗೆ ಕರೆ ಮಾಡಿದ್ದಾಳೆ. ಇಬ್ಬರು ಕೆಲ ದಿನ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ

ಇನ್ನು ಭವಿಷ್ಯದ ದೃಷ್ಟಿಯಿಂದ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿರುವುದಾಗಿ ಹೇಳಿದ ಲಕ್ಷ್ಮೀ, ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಮಿಷ ಒಡ್ಡಿದ್ದಾಳೆ. ‘ನೀನು ಈಗಲೇ ಹಣ ಹೂಡಿಕೆ ಮಾಡು, ಮದುವೆಯ ನಂತರ ಅದೇ ಲಾಭದ ಹಣದಲ್ಲಿ ಚೆನ್ನಾಗಿ ಸೆಟಲ್ ಆಗೋಣ’ ಎಂದು ನಂಬಿಸಿದ್ದಾಳೆ. ಇದಕ್ಕೆ ಅನಿಲ್ ‘ಈಗ ಬೇಡ, ಮದುವೆಯಾದ ಬಳಿಕ ನೋಡೋಣ’ ಎಂದು ನಿರಾಕರಿಸಿದರೂ ಬಿಡದ ಲಕ್ಷ್ಮೀ, ಹಠಕ್ಕೆ ಬಿದ್ದು ಹಣ ಹೂಡುವಂತೆ ಸತತವಾಗಿ ಪ್ರೇರೇಪಿಸಿದ್ದಾಳೆ.

ಇದನ್ನೂ ಓದಿ: ನಿಮಗೆ 8 ಲಕ್ಷ ರೂ. ಲಾಟರಿ ಹೊಡೆದಿದೆ ಅಂದ್ರೆ ನಂಬಬೇಡಿ!: ಬೆಂಗಳೂರಿನ ಇಬ್ಬರಿಗೆ ಬಿತ್ತು 13.71 ಲಕ್ಷ ರೂ. ನಾಮ; ಹೊಸ ಆನ್‌ಲೈನ್ ಸ್ಕ್ಯಾಮ್

ಕೊನೆಗೆ ಆಕೆಯ ಮಾತು ನಂಬಿದ ಅನಿಲ್, ಹಂತ ಹಂತವಾಗಿ ಬರೋಬ್ಬರಿ 35 ಲಕ್ಷ ರೂ ಹೂಡಿಕೆ ಮಾಡಿದ್ದಾರೆ. ಆದರೆ, ಆ ಬಳಿಕ ಲಾಭದ ಹಣವನ್ನು ಹಿಂಪಡೆಯಲು ಹೋದಾಗ ಕ್ರಿಪ್ಟೋ ಖಾತೆಯೇ ಡಿಲೀಟ್ ಆಗಿರುವುದು ಕಂಡುಬಂದಿದೆ. ಆತಂಕಗೊಂಡ ಅನಿಲ್ ಲಕ್ಷ್ಮೀ ಮೊಬೈಲ್‌ಗೆ ಕರೆ ಮಾಡಿದಾಗ ಆಕೆಯ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಕೊನೆಗೆ ತಾನು ವಂಚನೆಗೆ ಒಳಗಾಗಿರುವುದು ಮನವರಿಕೆಯಾಗುತ್ತಿದ್ದಂತೆ ಅನಿಲ್ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!