AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 15, 2024 | 2:37 PM

Share

ಬೆಂಗಳೂರು, ಜನವರಿ 15: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು (Nameplate) ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ (Krishna Byregowda) ಅವರು ಉದ್ಘಾಟಿಸಿದ್ದರು. ಈ ಮೂಲಕ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು.

ಆದರೆ ಆ ನಾಮಫಲಕ ಈಗ ಪುಡಿ ಪುಡಿಯಾಗಿದೆ. ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ

2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​ ಬೆಂಗಳೂರಿನ ಯಲಹಂಕದ ಗೇಟ್ ಗಾರ್ಡನ್ ನಿವಾಸಿಯಾಗಿದ್ದು, ಅಂದು ನಡೆದ ಉಗ್ರರ ಕಾಳಗದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು