AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 15, 2024 | 2:37 PM

Share

ಬೆಂಗಳೂರು, ಜನವರಿ 15: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು (Nameplate) ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ (Krishna Byregowda) ಅವರು ಉದ್ಘಾಟಿಸಿದ್ದರು. ಈ ಮೂಲಕ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು.

ಆದರೆ ಆ ನಾಮಫಲಕ ಈಗ ಪುಡಿ ಪುಡಿಯಾಗಿದೆ. ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ

2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​ ಬೆಂಗಳೂರಿನ ಯಲಹಂಕದ ಗೇಟ್ ಗಾರ್ಡನ್ ನಿವಾಸಿಯಾಗಿದ್ದು, ಅಂದು ನಡೆದ ಉಗ್ರರ ಕಾಳಗದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು