AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 15, 2024 | 2:37 PM

Share

ಬೆಂಗಳೂರು, ಜನವರಿ 15: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು (Nameplate) ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ (Krishna Byregowda) ಅವರು ಉದ್ಘಾಟಿಸಿದ್ದರು. ಈ ಮೂಲಕ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು.

ಆದರೆ ಆ ನಾಮಫಲಕ ಈಗ ಪುಡಿ ಪುಡಿಯಾಗಿದೆ. ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ

2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​ ಬೆಂಗಳೂರಿನ ಯಲಹಂಕದ ಗೇಟ್ ಗಾರ್ಡನ್ ನಿವಾಸಿಯಾಗಿದ್ದು, ಅಂದು ನಡೆದ ಉಗ್ರರ ಕಾಳಗದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್