AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Jan 15, 2024 | 2:37 PM

Share

ಬೆಂಗಳೂರು, ಜನವರಿ 15: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು (Nameplate) ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ (Krishna Byregowda) ಅವರು ಉದ್ಘಾಟಿಸಿದ್ದರು. ಈ ಮೂಲಕ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು.

ಆದರೆ ಆ ನಾಮಫಲಕ ಈಗ ಪುಡಿ ಪುಡಿಯಾಗಿದೆ. ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ

2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​ ಬೆಂಗಳೂರಿನ ಯಲಹಂಕದ ಗೇಟ್ ಗಾರ್ಡನ್ ನಿವಾಸಿಯಾಗಿದ್ದು, ಅಂದು ನಡೆದ ಉಗ್ರರ ಕಾಳಗದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ