ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ನಾಮಫಲಕ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು
ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ
Edited By: ವಿವೇಕ ಬಿರಾದಾರ

Updated on: Jan 15, 2024 | 2:37 PM

ಬೆಂಗಳೂರು, ಜನವರಿ 15: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು (Nameplate) ಕಿಡಿಗೇಡಿಗಳು ಬೀಳಿಸಿದ್ದಾರೆ. ಈ ಬಗ್ಗೆ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ (Krishna Byregowda) ಅವರು ಉದ್ಘಾಟಿಸಿದ್ದರು. ಈ ಮೂಲಕ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು.

ಆದರೆ ಆ ನಾಮಫಲಕ ಈಗ ಪುಡಿ ಪುಡಿಯಾಗಿದೆ. ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ

2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​ ಬೆಂಗಳೂರಿನ ಯಲಹಂಕದ ಗೇಟ್ ಗಾರ್ಡನ್ ನಿವಾಸಿಯಾಗಿದ್ದು, ಅಂದು ನಡೆದ ಉಗ್ರರ ಕಾಳಗದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us