AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​

ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ ​ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​
ಐಕಿಯ ಶಾಪಿಂಗ್​ ಮಾಲ್​​ ಮುಂದಿನ ಜನಸ್ತೋಮ
TV9 Web
| Edited By: |

Updated on: Jun 26, 2022 | 8:52 PM

Share

ಬೆಂಗಳೂರು: ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ (Nagasandra Metro Station)​ ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು (Shopping Mall) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಉದ್ಘಾಟಿಸಿದರು. ವೀಕೆಂಡ್​​ ಹಿನ್ನಲೆ ಇಂದು (ಜೂನ್​ 26) ರಂದು ಐಕಿಯಾನಲ್ಲಿ ಶಾಪಿಂಗ್​ ಮಾಡಲು ಜನ ಸಾಗರವೇ ಹರಿದು ಬಂದಿತ್ತು. ಇದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಮುತ್ತ ಟ್ರಾಫಿಕ್​ ಜಾಮ್​ ಉಂಟಾಗಿತ್ತು.  ಟ್ರಾಫಿಕ್​ ಹಾಗೂ ಜನ ಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಮುಂಬೈ ಮತ್ತು ದೆಹಲಿಯ ನಂತರ, ಭಾರತದಲ್ಲಿ ಮೂರನೇ IKEA ಶಾಪಿಂಗ್​ ಮಾಲ್​​ನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ. ಕಂಪನಿಯು ರಾಜ್ಯದಲ್ಲಿ ಸುಮಾರು 3,000 ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಐಕಿಯಾ ಶಾಪಿಂಗ್ ಮಾಲ್​​ನಲ್ಲಿ ಗೃಹಪಯೋಗಿ ವಸ್ತುಗಳು ಮಾತ್ರ ದೊರೆಯುತ್ತಿದ್ದು,  ಇಲ್ಲಿ ಇತರೆ ಯಾವುದೇ ಸಿನಿಮಾ ಹಾಲ್ ಅಥವಾ ಇತರೆ ವಸ್ತುಗಳು ಲಭ್ಯವಿಲ್ಲ. ಹಾಗಾಗಿ ಸಾರ್ವಜನಿಕರು ಕೇವಲ ಗೃಹೋಪಯೋಗಿ ವಸ್ತುಗಳಿಗೆ ಮಾತ್ರ ಮಾಲ್​ಗೆ ಬರುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಈ ಮಳಿಗೆ 4,60,000 ಚದರ ಅಡಿ ವಿಸ್ತೀರ್ಣ ಹೊಂದಿದೆ. ಇದು ದೇಶದಲ್ಲಿರುವ ಐಕಿಯಾದ ಅತೀ ದೊಡ್ಡ ಮಳಿಗೆಯಾಗಿದೆ. ಐಕಿಯಾ ಮಳಿಗೆಗೆ ಜನರು ಮುಗಿಬಿದ್ದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೆಟ್ಟಿಗರು ಚಿತ್ರಗಳನ್ನು ಹಂಚಿಕೊಂಡು ವ್ಯಂಗ್ಯವಾಗಿ ಶಿರ್ಷಿಕೆ ನೀಡಿದ್ದಾರೆ ಹಾಗೇ ವ್ಯಂಗ್ಯವಾಗಿ ಕಾಮೇಂಟ್​​ ಮಾಡಿದ್ದಾರೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು