AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​

ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ ​ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​
ಐಕಿಯ ಶಾಪಿಂಗ್​ ಮಾಲ್​​ ಮುಂದಿನ ಜನಸ್ತೋಮ
TV9 Web
| Edited By: |

Updated on: Jun 26, 2022 | 8:52 PM

Share

ಬೆಂಗಳೂರು: ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ (Nagasandra Metro Station)​ ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು (Shopping Mall) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಉದ್ಘಾಟಿಸಿದರು. ವೀಕೆಂಡ್​​ ಹಿನ್ನಲೆ ಇಂದು (ಜೂನ್​ 26) ರಂದು ಐಕಿಯಾನಲ್ಲಿ ಶಾಪಿಂಗ್​ ಮಾಡಲು ಜನ ಸಾಗರವೇ ಹರಿದು ಬಂದಿತ್ತು. ಇದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಮುತ್ತ ಟ್ರಾಫಿಕ್​ ಜಾಮ್​ ಉಂಟಾಗಿತ್ತು.  ಟ್ರಾಫಿಕ್​ ಹಾಗೂ ಜನ ಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಮುಂಬೈ ಮತ್ತು ದೆಹಲಿಯ ನಂತರ, ಭಾರತದಲ್ಲಿ ಮೂರನೇ IKEA ಶಾಪಿಂಗ್​ ಮಾಲ್​​ನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ. ಕಂಪನಿಯು ರಾಜ್ಯದಲ್ಲಿ ಸುಮಾರು 3,000 ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಐಕಿಯಾ ಶಾಪಿಂಗ್ ಮಾಲ್​​ನಲ್ಲಿ ಗೃಹಪಯೋಗಿ ವಸ್ತುಗಳು ಮಾತ್ರ ದೊರೆಯುತ್ತಿದ್ದು,  ಇಲ್ಲಿ ಇತರೆ ಯಾವುದೇ ಸಿನಿಮಾ ಹಾಲ್ ಅಥವಾ ಇತರೆ ವಸ್ತುಗಳು ಲಭ್ಯವಿಲ್ಲ. ಹಾಗಾಗಿ ಸಾರ್ವಜನಿಕರು ಕೇವಲ ಗೃಹೋಪಯೋಗಿ ವಸ್ತುಗಳಿಗೆ ಮಾತ್ರ ಮಾಲ್​ಗೆ ಬರುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಈ ಮಳಿಗೆ 4,60,000 ಚದರ ಅಡಿ ವಿಸ್ತೀರ್ಣ ಹೊಂದಿದೆ. ಇದು ದೇಶದಲ್ಲಿರುವ ಐಕಿಯಾದ ಅತೀ ದೊಡ್ಡ ಮಳಿಗೆಯಾಗಿದೆ. ಐಕಿಯಾ ಮಳಿಗೆಗೆ ಜನರು ಮುಗಿಬಿದ್ದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೆಟ್ಟಿಗರು ಚಿತ್ರಗಳನ್ನು ಹಂಚಿಕೊಂಡು ವ್ಯಂಗ್ಯವಾಗಿ ಶಿರ್ಷಿಕೆ ನೀಡಿದ್ದಾರೆ ಹಾಗೇ ವ್ಯಂಗ್ಯವಾಗಿ ಕಾಮೇಂಟ್​​ ಮಾಡಿದ್ದಾರೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು