AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​

ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ ​ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಬೆಂಗಳೂರು ಐಕಿಯಾ ಶಾಪಿಂಗ್​ ಮಾಲ್​​ ಮಳಿಗೆಗೆ ಮುಗಿಬಿದ್ದ ಜನ; ನಾಗಸಂದ್ರ ಮೆಟ್ರೋ ಸ್ಟೇಷನ್ ಬಳಿ ಫುಲ್​​ ಟ್ರಾಫಿಕ್​ ಜಾಮ್​​
ಐಕಿಯ ಶಾಪಿಂಗ್​ ಮಾಲ್​​ ಮುಂದಿನ ಜನಸ್ತೋಮ
TV9 Web
| Edited By: |

Updated on: Jun 26, 2022 | 8:52 PM

Share

ಬೆಂಗಳೂರು: ಜೂನ್​​ 22 ರಂದು ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೋ ಸ್ಟೇಷನ್ (Nagasandra Metro Station)​ ಬಳಿ ನಿರ್ಮಾಣಗೊಂಡಿರುವ ಐಕಿಯಾ (IKEA) ಶಾಪಿಂಗ್​ ಮಾಲ್​​ನ್ನು (Shopping Mall) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಉದ್ಘಾಟಿಸಿದರು. ವೀಕೆಂಡ್​​ ಹಿನ್ನಲೆ ಇಂದು (ಜೂನ್​ 26) ರಂದು ಐಕಿಯಾನಲ್ಲಿ ಶಾಪಿಂಗ್​ ಮಾಡಲು ಜನ ಸಾಗರವೇ ಹರಿದು ಬಂದಿತ್ತು. ಇದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಮುತ್ತ ಟ್ರಾಫಿಕ್​ ಜಾಮ್​ ಉಂಟಾಗಿತ್ತು.  ಟ್ರಾಫಿಕ್​ ಹಾಗೂ ಜನ ಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಮುಂಬೈ ಮತ್ತು ದೆಹಲಿಯ ನಂತರ, ಭಾರತದಲ್ಲಿ ಮೂರನೇ IKEA ಶಾಪಿಂಗ್​ ಮಾಲ್​​ನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ. ಕಂಪನಿಯು ರಾಜ್ಯದಲ್ಲಿ ಸುಮಾರು 3,000 ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಐಕಿಯಾ ಶಾಪಿಂಗ್ ಮಾಲ್​​ನಲ್ಲಿ ಗೃಹಪಯೋಗಿ ವಸ್ತುಗಳು ಮಾತ್ರ ದೊರೆಯುತ್ತಿದ್ದು,  ಇಲ್ಲಿ ಇತರೆ ಯಾವುದೇ ಸಿನಿಮಾ ಹಾಲ್ ಅಥವಾ ಇತರೆ ವಸ್ತುಗಳು ಲಭ್ಯವಿಲ್ಲ. ಹಾಗಾಗಿ ಸಾರ್ವಜನಿಕರು ಕೇವಲ ಗೃಹೋಪಯೋಗಿ ವಸ್ತುಗಳಿಗೆ ಮಾತ್ರ ಮಾಲ್​ಗೆ ಬರುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಈ ಮಳಿಗೆ 4,60,000 ಚದರ ಅಡಿ ವಿಸ್ತೀರ್ಣ ಹೊಂದಿದೆ. ಇದು ದೇಶದಲ್ಲಿರುವ ಐಕಿಯಾದ ಅತೀ ದೊಡ್ಡ ಮಳಿಗೆಯಾಗಿದೆ. ಐಕಿಯಾ ಮಳಿಗೆಗೆ ಜನರು ಮುಗಿಬಿದ್ದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೆಟ್ಟಿಗರು ಚಿತ್ರಗಳನ್ನು ಹಂಚಿಕೊಂಡು ವ್ಯಂಗ್ಯವಾಗಿ ಶಿರ್ಷಿಕೆ ನೀಡಿದ್ದಾರೆ ಹಾಗೇ ವ್ಯಂಗ್ಯವಾಗಿ ಕಾಮೇಂಟ್​​ ಮಾಡಿದ್ದಾರೆ.

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್