AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್

ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್
ಡ್ರಗ್ಸ್
Jagadisha B
| Edited By: |

Updated on: Feb 27, 2024 | 2:21 PM

Share

ಬೆಂಗಳೂರು, ಫೆ.27: ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ನಶೆ ಏರಿಸಲು ಸಿದ್ಧವಾಗಿದ್ದ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೊಲದೇವನಹಳ್ಳಿಯ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಓರ್ವ ಪೆಡ್ಲರ್ ಈ ಹಿಂದೆ ಪ್ರವಾಸಿ ವಿಸಾದಲ್ಲಿ ಬಂದು ಡ್ರಗ್ ದಂಧೆಯಲ್ಲಿ ಭಾಗಿಯಾಗಿ ಮುಂಬೈನಲ್ಲಿ ಬಂಧನದ ಬಳಿಕ ಜೈಲು ಸೇರಿದ್ದ. ಬಳಿಕ ಜೈಲಿನಿಂದ ಬಿಡುಗಡೆಯಾಗಿ ಮತ್ತೋರ್ವ ವಿದೇಶಿ ವ್ಯಕ್ತಿಯ ಜೊತೆ ಸೇರಿಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದ. ಸದ್ಯ ಈಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಇನ್ನು ಮತ್ತೊಂದೆಡೆ ಘಾನ ದೇಶದ ಇಮಾನ್ಯುಲ್ ಎಂಬ ಡ್ರಗ್ ಪೆಡ್ಲರ್​ನನ್ನು ಬಂಧಿಸಲಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಬ್ಯುಸಿನೆಸ್ ವಿಸಾದಲ್ಲಿ ಬಂದ ಇಮಾನ್ಯುಲ್ ಡ್ರಗ್ಸ್ ದಂಧೆ ನಡೆಸುತ್ತಿದ್ದ. ಇನ್ನು ಇಂಡಿಯನ್ ಪೋಸ್ಟ್ ಮುಖಾಂತರ ಹೈಡ್ರೋ ಗಾಂಜಾ ತರಿಸಿಕೊಳ್ಳುತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಆರೋಪಿ ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ 3 ಲಕ್ಷ ಮೌಲ್ಯದ 42 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 7 ಜನರ ಬಂಧನ

ರಾಡ್‌ ನಿಂದ ಹೊಡೆದು ಯುವಕನ ಹತ್ಯೆ

ಬಾಗಲಕೋಟೆಯ ಬೀಳಗಿಯಲ್ಲಿ ರಾಡ್‌ನಿಂದ ಹೊಡೆದು ಯುವಕನನ್ನು ಹತ್ಯೆಗೈಯ್ಯಲಾಗಿದೆ. ಹೆಗ್ಗೂರು ಪುನರ್ವಸತಿ ಕೇಂದ್ರದಲ್ಲಿ ಸಿದ್ದು ಇಂಡಿ ಎಂಬ ಯುವಕನನ್ನು ಸಾಗರ್ & ಟೀಂ ಕೊಲೆ ಮಾಡಿದೆ. ಬೈಕ್‌ ಅಪಘಾತ ಸಂಬಂಧ ಸಿದ್ದು ಮತ್ತು ಸಾಗರ್ ನಡುವೆ ಜಗಳ ನಡೆದಿತ್ತು. ಇದೇ ವಿಚಾರಕ್ಕೆ ಕಳೆದ ರಾತ್ರಿ ಸಿದ್ದುವನ್ನು ಕೊಲೆ ಮಾಡಲಾಗಿದೆ.

ಆಸ್ತಿವಿಚಾರಕ್ಕೆ ತಂದೆ ಕೊಂದ ಮಗ

ಮಂಡ್ಯದಲ್ಲಿ ಆಸ್ತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸುಂಡಹಳ್ಳಿ ಗ್ರಾಮದಲ್ಲಿ ಮಗನೇ ತಂದೆಯನ್ನು ಕೊಲೆಗೈದಿದ್ದಾನೆ. ಮಗ ಮಹದೇವ್‌ ತಲೆ ಮೇಲೆ ಕಲ್ಲು ಎತ್ತುಹಾಕಿ ತಂದೆ ನಂಜಪ್ಪನನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ನಂಜಪ್ಪ ಆಸ್ತಿಯನ್ನು ಮಗಳ ಹೆಸರಿಗೆ ಬರೆದುಕೊಟ್ಟಿದ್ದ. ಆಸ್ತಿ ಕೊಡಲಿಲ್ಲ ಎಂಬ ಕಾರಣಕ್ಕೆ ಮಗ ಮಹದೇವ್ ಈ ಕೃತ್ಯವೆಸಗಿದ್ದಾನೆ.

ಅಪರಾಧ ಸುದ್ದಿಗಳನ್ನು  ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್