ಚುನಾವಣೆ ನೆತ್ತಿ ಮೇಲಿರುವಾಗ ಮಂಡ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ, ಪ್ರಮುಖ ನಾಯಕ ದೇವರಾಜ್ ಕಾಂಗ್ರೆಸ್ ಸೇರ್ಪಡೆ
ಎಲ್ಲರನ್ನು ಪಕ್ಷಕ್ಕೆ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾವುದೇ ಷರತ್ತುಗಳಿಲ್ಲದೆ ದೇವರಾಜ್ ತಮ್ಮ ಸಂಗಡಿಗರೊಂದಿಗೆ ಪಕ್ಷ ಸೇರಿದ್ದಾರೆ ಅಂತ ಹೇಳಿದರು.
ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವಾಗ ಮಂಡ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ಕಳೆದ ಮೂರೂವರೆ ದಶಕಗಳಿಂದ ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿದಿದ್ದ ಮತ್ತು ಕೆ ಆರ್ ಪೇಟೆಗೆ (KR Pet) ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 57,000 ಕ್ಕೂ ಹೆಚ್ಚು ಮತ ಪಡೆದಿದ್ದ ಬಿಎಲ್ ದೇವರಾಜ್ (BL Devaraj) ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಲ್ಲರನ್ನು ಪಕ್ಷಕ್ಕೆ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಯಾವುದೇ ಷರತ್ತುಗಳಿಲ್ಲದೆ ದೇವರಾಜ್ ತಮ್ಮ ಸಂಗಡಿಗರೊಂದಿಗೆ ಪಕ್ಷ ಸೇರಿದ್ದಾರೆ ಅಂತ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 27, 2023 03:09 PM
Loading...
Unable to load recommendations.
Follow Us