AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ

2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು.

ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರದ ಮಾಸ್ಟರ್​ ಸ್ಟ್ರೋಕ್; ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ನಾಳೆಯೇ ಮಂಡನೆ
ವಕ್ಫ್ ಮಂಡಳಿ
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 19, 2022 | 10:37 PM

Share

ಬೆಂಗಳೂರು: ವಿಪಕ್ಷಗಳ ಆರೋಪಕ್ಕೆ ರಾಜ್ಯ ಸರ್ಕಾರ ಮಾಸ್ಟರ್ ಸ್ಟ್ರೋಕ್ ನೀಡಿದ್ದು, ವಕ್ಫ್ ಆಸ್ತಿ ಒತ್ತುವರಿ ವರದಿ ಸದನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ವಿಧಾನಸಭೆಯಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 2012 ರಲ್ಲಿ ಡಿ.ವಿ. ಸದಾನಂದ ಗೌಡ ಸಿಎಂ ಆಗಿದ್ದ ವೇಳೆ ರಾಜ್ಯ ಸರ್ಕಾರಕ್ಕೆ ವಕ್ಫ್ ಆಸ್ತಿ ಒತ್ತುವರಿ ವರದಿ ಸಲ್ಲಿಸಿತ್ತು. ಅನ್ವರ್ ಮಾಣಿಪ್ಪಾಡಿ ಅಂದಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು. 2 ಲಕ್ಷದ 30 ಕೋಟಿ ರೂ. 29 ಸಾವಿರಕ್ಕೂ ಅಧಿಕ ಎಕರೆ ಒತ್ತುವರಿ ವಕ್ಫ್ ಆಸ್ತಿ ಕುರಿತ ವರದಿ ನೀಡಲಾಗಿತ್ತು. ವರದಿಯಲ್ಲಿ 12ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರ ಹೆಸರುಗಳು ಉಲ್ಲೇಖವಾಗಿದೆ.

ಹತ್ತು ವರ್ಷಗಳ ಹಿಂದಿನ ವರದಿಗೆ ಮರು ಜೀವ ನೀಡಲು ನಿರ್ಧಾರ ಮಾಡಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಪಡೆದರು. ಹತ್ತು ವರ್ಷಗಳ ಹಿಂದೆ 2ಜಿ ಸ್ಪ್ರೆಕ್ಟ್ರಂ ಹಗರಣಕ್ಕಿಂತಲೂ ದೊಡ್ಡದಾದ ಹಗರಣ ಎಂದು ಸಂಚಲನ ಸೃಷ್ಟಿಸಿತ್ತು. ಈ ಹಿಂದೆ ಡಿ.ಹೆಚ್. ಶಂಕರಮೂರ್ತಿ ಸಭಾಪತಿ ಆಗಿದ್ದ ವೇಳೆ ವಿಧಾನ ಪರಿಷತ್ತಿನಲ್ಲಿ ಮಂಡನೆಗೆ ಪ್ರಯತ್ನ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Mon, 19 September 22

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!