Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ 3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ  3.5 ಲಕ್ಷ ಮೌಲ್ಯದ ವಸ್ತುಗಳು ಕಳವು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Nov 15, 2023 | 8:20 AM

ಬೆಂಗಳೂರು ನ.15: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್‌ಪೋರ್ಟ್ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್​​ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ (ನವೆಂಬರ್ 11) ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ವಿಮಾನ ನಿಲ್ದಾಣದ ಕಾಮಗಾರಿ 2020ರಿಂದ ಆರಂಭವಾಗಿದ್ದು, ಡಿಸೆಂಬರ್ 2022 ರಿಂದ ಆವರಣದೊಳಗೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಇತರ ಕೆಲಸಗಳಿಗಾಗಿ ಇರಿಸಲಾಗಿತ್ತು. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ವಸ್ತುಗಳು ನಾಪತ್ತೆಯಾಗಿರುವುದರ ಬಗ್ಗೆ ಭದ್ರತಾ ಸಿಬ್ಬಂದಿಗೂ ತಿಳಿದಿರಲಿಲ್ಲ ಎಂದು ಎಫ್ಐಆರ್​ನಲ್ಲಿ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ