AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಟೆಕ್ಕಿಗೆ ಕೋಟಿ ರೂ. ವಂಚನೆ ಪ್ರಕರಣ: ಆರೋಪಿ ಖಾತೆಯಲ್ಲಿ 84 ಲಕ್ಷ ರೂ. ಫ್ರೀಜ್ ಮಾಡಿದ ಪೊಲೀಸರು

ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಮಹಿಳೆಯ ನಂಬಿ ಇಂಗ್ಲೆಂಡ್​ನ ಟೆಕ್ಕಿಯೊಬ್ಬರು 1.14 ಕೋಟಿ ರೂ. ಕಳೆದುಕೊಂಡಿದ್ದರು. ಪ್ರಕರಣ ಸಂಬಂಧ ವೈಟ್ ಫೀಲ್ಡ್ ಸಿಇಎನ್ ಪೋಲಿಸರು ಆರೋಪಿ ಅಕೌಂಟ್​ನಲ್ಲಿ ಬರೋಬ್ಬರಿ 84 ಲಕ್ಷ ರೂ. ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ಟೆಕ್ಕಿಗೆ ಕೋಟಿ ರೂ. ವಂಚನೆ ಪ್ರಕರಣ: ಆರೋಪಿ ಖಾತೆಯಲ್ಲಿ 84 ಲಕ್ಷ ರೂ. ಫ್ರೀಜ್ ಮಾಡಿದ ಪೊಲೀಸರು
ಬೆತ್ತಲೆ ವಿಡಿಯೋ ಕಾಲ್ ಮಾಡಿ ಟೆಕ್ಕಿಯನ್ನು ವಂಚನೆ ಜಾಲಕ್ಕೆ ಬೀಳಿಸಿದ ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ ಪರಿಚಯವಾದ ಮಹಿಳೆ (ಸಾಂದರ್ಭಿಕ ಚಿತ್ರ)
Kiran HV
| Edited By: |

Updated on:Aug 01, 2023 | 9:31 PM

Share

ಬೆಂಗಳೂರು, ಆಗಸ್ಟ್ 1: ಇಂಗ್ಲೆಂಡ್​ನ ಟೆಕ್ಕಿಯೊಬ್ಬರಿಗೆ ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಪರಿಚಯವಾದ ಮಹಿಳೆ 1.14 ಕೋಟಿ ರೂ. ವಂಚಿಸಿದ (Cheating) ಪ್ರಕರಣ ನಡೆದಿದೆ. ಈ ಬಗ್ಗೆ ವೈಟ್ ಫೀಲ್ಡ್ ಸಿಇಎನ್ ಪೋಲಿಸರಿಗೆ ಟೆಕ್ಕಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿ ಅಕೌಂಟ್​ನಲ್ಲಿದ್ದ ಬರೋಬ್ಬರಿ 84 ಲಕ್ಷ ರೂ. ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್​ನ ಟೆಕ್ಕಿಯೊಬ್ಬರು ತರಬೇತಿಗಾಗಿ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಈ ನಡುವೆ ಮದುವೆಯಾಗಲು ಮ್ಯಾಟ್ರಿಮೋನಿ ವೆಬ್ ಸೈಟ್​ನಲ್ಲಿ ಯುವತಿಯನ್ನು ಹುಡುಕುತ್ತಿದ್ದರು. ಈ ವೇಳೆ ಫೋಟೋವೊಂದನ್ನು ನೋಡಿ ನಂಬರ್​ಗೆ ಮೆಸೇಜ್ ಮಾಡಿದ್ದಾರೆ. ಆಕೆಯೂ ರೀಪ್ಲೆ ಮಾಡಿದ್ದಾಳೆ. ನಂತರ ಅವರಿಬ್ಬರ ನಡುವೆ ಪರಸ್ಪರ ಚಾಟಿಂಗ್ ಶುರುವಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR

ಕೆಲ ದಿನಗಳ ಬಳಿಕ ಇಬ್ಬರ ನಡುವೆ ವಿಡಿಯೋ ಕಾಲ್ ಕೂಡ ಶುರುವಾಯಿತು. ಆ ಯುವತಿ ಕೆಲ ದಿನಗಳ ಬಳಿಕ ತನ್ನ ಅಮ್ಮನಿಗೆ ಆರೋಗ್ಯ ಸರಿಯಿಲ್ಲ, ಹೀಗಾಗಿ 15,000 ನೀಡುವಂತೆ ಟೆಕ್ಕಿಗೆ ಮನವಿ ಮಾಡುತ್ತಾಳೆ. ಆಕೆಯನ್ನು ನಂಬಿದ ಟೆಕ್ಕಿ ಹಣ ವರ್ಗಾಯಿಸುತ್ತಾರೆ. ಕೆಲ ದಿನಗಳ ನಂತರ ಮತ್ತೆ ವಿಡಿಯೋ ಕಾಲ್ ಮೂಲಕ ಮಾತನಾಡುವಾಗ ಯುವತಿ ಏಕಾಏಕಿಯಾಗಿ ಬೆತ್ತಲಾಗಿದ್ದಾಳೆ. ಇದನ್ನು ರೆಕಾರ್ಡ್ ಕೂಡ ಮಾಡಿದ್ದಾಳೆ.

ವಿಡಿಯೋ ಮುಂದಿಟ್ಟುಕೊಂಡು ಇದನ್ನು ನಿಮ್ಮ ಕುಟುಂಬಸ್ಥರಿಗೆ ಕಳುಹಿಸುತ್ತೇನೆ ಅಂತ ಟೆಕ್ಕಿಗೆ ಬೆದರಿಕೆಯೊಡ್ಡಲು ಆರಂಭಿಸಿದ್ದಾಳೆ. ಅದೇ ರೀತಿ ಬೆದರಿಕೆ ಹಾಕುತ್ತಾ ಹಂತ ಅಂತ ಹೋಗಿ ಹಣ ವರ್ಗಾಯಿಸಿ 1 ಕೋಟಿ 14 ಲಕ್ಷ ವನ್ನು ವಸೂಲಿ ಮಾಡಿದ್ದಾಳೆ. ಬೆದರಿಕೆಗೆ ಬೇಸತ್ತ ಟೆಕ್ಕಿ ಅಂತಿಮವಾಗಿ ಪೊಲೀಸ್ ಠಾಣೆ ದೂರು ನೀಡುತ್ತಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಖಾತೆಯಿಂದ 84 ಲಕ್ಷ ಹಣ ಫ್ರೀಜ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Tue, 1 August 23

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ