AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಟೆಕ್ಕಿಗೆ ಕೋಟಿ ರೂ. ವಂಚನೆ ಪ್ರಕರಣ: ಆರೋಪಿ ಖಾತೆಯಲ್ಲಿ 84 ಲಕ್ಷ ರೂ. ಫ್ರೀಜ್ ಮಾಡಿದ ಪೊಲೀಸರು

ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಮಹಿಳೆಯ ನಂಬಿ ಇಂಗ್ಲೆಂಡ್​ನ ಟೆಕ್ಕಿಯೊಬ್ಬರು 1.14 ಕೋಟಿ ರೂ. ಕಳೆದುಕೊಂಡಿದ್ದರು. ಪ್ರಕರಣ ಸಂಬಂಧ ವೈಟ್ ಫೀಲ್ಡ್ ಸಿಇಎನ್ ಪೋಲಿಸರು ಆರೋಪಿ ಅಕೌಂಟ್​ನಲ್ಲಿ ಬರೋಬ್ಬರಿ 84 ಲಕ್ಷ ರೂ. ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ಟೆಕ್ಕಿಗೆ ಕೋಟಿ ರೂ. ವಂಚನೆ ಪ್ರಕರಣ: ಆರೋಪಿ ಖಾತೆಯಲ್ಲಿ 84 ಲಕ್ಷ ರೂ. ಫ್ರೀಜ್ ಮಾಡಿದ ಪೊಲೀಸರು
ಬೆತ್ತಲೆ ವಿಡಿಯೋ ಕಾಲ್ ಮಾಡಿ ಟೆಕ್ಕಿಯನ್ನು ವಂಚನೆ ಜಾಲಕ್ಕೆ ಬೀಳಿಸಿದ ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ ಪರಿಚಯವಾದ ಮಹಿಳೆ (ಸಾಂದರ್ಭಿಕ ಚಿತ್ರ)
Kiran HV
| Edited By: |

Updated on:Aug 01, 2023 | 9:31 PM

Share

ಬೆಂಗಳೂರು, ಆಗಸ್ಟ್ 1: ಇಂಗ್ಲೆಂಡ್​ನ ಟೆಕ್ಕಿಯೊಬ್ಬರಿಗೆ ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಪರಿಚಯವಾದ ಮಹಿಳೆ 1.14 ಕೋಟಿ ರೂ. ವಂಚಿಸಿದ (Cheating) ಪ್ರಕರಣ ನಡೆದಿದೆ. ಈ ಬಗ್ಗೆ ವೈಟ್ ಫೀಲ್ಡ್ ಸಿಇಎನ್ ಪೋಲಿಸರಿಗೆ ಟೆಕ್ಕಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿ ಅಕೌಂಟ್​ನಲ್ಲಿದ್ದ ಬರೋಬ್ಬರಿ 84 ಲಕ್ಷ ರೂ. ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್​ನ ಟೆಕ್ಕಿಯೊಬ್ಬರು ತರಬೇತಿಗಾಗಿ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಈ ನಡುವೆ ಮದುವೆಯಾಗಲು ಮ್ಯಾಟ್ರಿಮೋನಿ ವೆಬ್ ಸೈಟ್​ನಲ್ಲಿ ಯುವತಿಯನ್ನು ಹುಡುಕುತ್ತಿದ್ದರು. ಈ ವೇಳೆ ಫೋಟೋವೊಂದನ್ನು ನೋಡಿ ನಂಬರ್​ಗೆ ಮೆಸೇಜ್ ಮಾಡಿದ್ದಾರೆ. ಆಕೆಯೂ ರೀಪ್ಲೆ ಮಾಡಿದ್ದಾಳೆ. ನಂತರ ಅವರಿಬ್ಬರ ನಡುವೆ ಪರಸ್ಪರ ಚಾಟಿಂಗ್ ಶುರುವಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಎಂಡಿ, ನಿರ್ದೇಶಕರ ನಕಲಿ ಸಹಿ ಮಾಡಿ ₹79 ಲಕ್ಷ ವಂಚನೆ; 7 ಅಧಿಕಾರಿಗಳ ವಿರುದ್ಧ FIR

ಕೆಲ ದಿನಗಳ ಬಳಿಕ ಇಬ್ಬರ ನಡುವೆ ವಿಡಿಯೋ ಕಾಲ್ ಕೂಡ ಶುರುವಾಯಿತು. ಆ ಯುವತಿ ಕೆಲ ದಿನಗಳ ಬಳಿಕ ತನ್ನ ಅಮ್ಮನಿಗೆ ಆರೋಗ್ಯ ಸರಿಯಿಲ್ಲ, ಹೀಗಾಗಿ 15,000 ನೀಡುವಂತೆ ಟೆಕ್ಕಿಗೆ ಮನವಿ ಮಾಡುತ್ತಾಳೆ. ಆಕೆಯನ್ನು ನಂಬಿದ ಟೆಕ್ಕಿ ಹಣ ವರ್ಗಾಯಿಸುತ್ತಾರೆ. ಕೆಲ ದಿನಗಳ ನಂತರ ಮತ್ತೆ ವಿಡಿಯೋ ಕಾಲ್ ಮೂಲಕ ಮಾತನಾಡುವಾಗ ಯುವತಿ ಏಕಾಏಕಿಯಾಗಿ ಬೆತ್ತಲಾಗಿದ್ದಾಳೆ. ಇದನ್ನು ರೆಕಾರ್ಡ್ ಕೂಡ ಮಾಡಿದ್ದಾಳೆ.

ವಿಡಿಯೋ ಮುಂದಿಟ್ಟುಕೊಂಡು ಇದನ್ನು ನಿಮ್ಮ ಕುಟುಂಬಸ್ಥರಿಗೆ ಕಳುಹಿಸುತ್ತೇನೆ ಅಂತ ಟೆಕ್ಕಿಗೆ ಬೆದರಿಕೆಯೊಡ್ಡಲು ಆರಂಭಿಸಿದ್ದಾಳೆ. ಅದೇ ರೀತಿ ಬೆದರಿಕೆ ಹಾಕುತ್ತಾ ಹಂತ ಅಂತ ಹೋಗಿ ಹಣ ವರ್ಗಾಯಿಸಿ 1 ಕೋಟಿ 14 ಲಕ್ಷ ವನ್ನು ವಸೂಲಿ ಮಾಡಿದ್ದಾಳೆ. ಬೆದರಿಕೆಗೆ ಬೇಸತ್ತ ಟೆಕ್ಕಿ ಅಂತಿಮವಾಗಿ ಪೊಲೀಸ್ ಠಾಣೆ ದೂರು ನೀಡುತ್ತಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಖಾತೆಯಿಂದ 84 ಲಕ್ಷ ಹಣ ಫ್ರೀಜ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Tue, 1 August 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ