AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಮ್ಮೆ ಪರೀಕ್ಷೆ ಬೇಡ, ಮರು ಮೌಲ್ಯಮಾಪನ ಮಾಡುವಂತೆ ಆಗ್ರಹ

ಸೆಪ್ಟೆಂಬರ್ 14 ರಂದು ಆರ್-3 ಬ್ಯಾಚ್​ನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತೇವೆ ಎಂದು ರಾಜೀವ್ ಗಾಂಧಿ ವಿವಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಪರೀಕ್ಷೆ ಬೇಡ ಅಂತಿದ್ದಾರೆ.

ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಮ್ಮೆ ಪರೀಕ್ಷೆ ಬೇಡ, ಮರು ಮೌಲ್ಯಮಾಪನ ಮಾಡುವಂತೆ ಆಗ್ರಹ
ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
TV9 Web
| Edited By: sandhya thejappa|

Updated on: Aug 07, 2021 | 2:16 PM

Share

ಬೆಂಗಳೂರು: ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಮುಂದೆ ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಮತ್ತೊಮ್ಮೆ ಪರೀಕ್ಷೆ ಬೇಡ, ಮರು ಮೌಲ್ಯಮಾಪನ ಮಾಡುವಂತೆ ಆಗ್ರಹಿಸಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಂಬಿಬಿಎಸ್ ಆರ್-3 ಬ್ಯಾಚ್​ನ ಪರೀಕ್ಷೆ ನಡೆದಿತ್ತು. ಕೋರ್ಟ್ ಮತ್ತೊಮ್ಮೆ ಮರು ಮೌಲ್ಯಮಾಪನ ನಡೆಸುವಂತೆ ಸೂಚಿಸಿದೆ. ಆದರೆ, ರಾಜೀವ್ ಗಾಂಧಿ ವಿವಿ ಪುನಃ ಪರೀಕ್ಷೆ ಮಾಡಲು ಮುಂದಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರ್-3 ಬ್ಯಾಚ್​ನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತೇವೆ ಎಂದು ರಾಜೀವ್ ಗಾಂಧಿ ವಿವಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಪರೀಕ್ಷೆ ಬೇಡ ಅಂತಿದ್ದಾರೆ. ಆದರೆ ಮತ್ತೊಮ್ಮೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ ಅಂತ ರಾಜೀವ್ ಗಾಂಧಿ ವಿವಿ ಕುಲಸಚಿವ ಪ್ರೊ.ರಾಮಕೃಷ್ಣ ರೆಡ್ಡಿ ಹೇಳುತ್ತಿದ್ದಾರೆ. ಹೀಗಾಗಿ ಎಂಬಿಬಿಎಸ್ ವಿದ್ಯಾರ್ಥಿಗಳು ರಾಜೀವ್ ಗಾಂಧಿ ವಿವಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ.27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ. ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್(BDS)ಗೂ ಅನ್ವಯವಾಗಲಿದೆ. ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ (OBC) ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಜೊತಗೆ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.

ಇದನ್ನೂ ಓದಿ

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ

OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ

(MBBS students protesting Front of Rajiv Gandhi University against re exam)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು