AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಉಳಿಸಿಕೊಳ್ಳಲು ನನ್ನ ಹೋರಾಟ, ನೀವು ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸಿ; ಮಾಧ್ಯಮಗಳಿಗೆ ರೂಪಾ ಹೀಗೆಂದಿದ್ದೇಕೆ?

ಆ ಮಹಿಳೆ ಐಎಎಸ್ ಅಧಿಕಾರಿಯಾಗಿದ್ದುಕೊಂಡು ಸಾಕಷ್ಟು ಮನೆ ಹಾಳು ಮಾಡಿದ್ದಾರೆ. ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ಕುಟುಂಬವನ್ನು ಉಳಿಸಿಕೊಳ್ಳಲು ಇನ್ನೂ ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಕಂಟಕಪ್ರಾಯವಾದವರನ್ನು ದಯವಿಟ್ಟು ಪ್ರಶ್ನಿಸಿ - ಡಿ ರೂಪಾ

ಕುಟುಂಬ ಉಳಿಸಿಕೊಳ್ಳಲು ನನ್ನ ಹೋರಾಟ, ನೀವು ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸಿ; ಮಾಧ್ಯಮಗಳಿಗೆ ರೂಪಾ ಹೀಗೆಂದಿದ್ದೇಕೆ?
ನಾನು-ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ -ಡಿ ರೂಪಾ
ಆಯೇಷಾ ಬಾನು
| Edited By: |

Updated on:Feb 22, 2023 | 3:04 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಬಗ್ಗೆ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಗಂಗರಾಜು ಜೊತೆ ವಿವಾದಿತ ಐಪಿಎಸ್​ ಅಧಿಕಾರಿ ಡಿ. ರೂಪಾ(D Roopa) ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ವೈರಲ್ ಆಗುತ್ತಿದೆ. ಈ ಬಗ್ಗೆ ಟಿವಿ9ಗೆ ಡಿ ರೂಪಾ ಪ್ರತಿಕ್ರಿಯೆ ನೀಡಿದ್ದು ನಾನು ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಡ್ತಿದ್ದೇನೆ ಅಷ್ಟೇ ಎಂದಿದ್ದಾರೆ. ಈ ಮಧ್ಯೆ, ಆಡಿಯೋ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ರೋಹಿಣಿ ಸಿಂಧೂರಿ ನಿರಾಕರಿಸಿದ್ದಾರೆ.

ಐಎಎಸ್ ಅಧಿಕಾರಿಯಾಗಿದ್ದುಕೊಂಡು ಅವರು ಸಾಕಷ್ಟು ಮನೆ ಹಾಳು ಮಾಡಿದ್ದಾರೆ. ನನ್ನ ಕುಟುಂಬ ಉಳಿಸಿಕೊಳ್ಳಲು ನಾನು ಹೋರಾಡ್ತಿದ್ದೇನೆ ಎಂದು ರೂಪಾ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ. ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆ ಆಗಲಿ, ಕೌಟುಂಬಿಕ ಮತ್ತು ವೈಯಕ್ತಿಕ‌ ವಿಚಾರ ಬಗ್ಗೆ ಚರ್ಚೆ ಬೇಡ. ಗಂಗರಾಜು ವಿರುದ್ಧವೂ ಕೂಡ ಹಲವು ಕ್ರಿಮಿನಲ್​ ಕೇಸ್​​ಗಳಿವೆ. ವೈಯಕ್ತಿಕ‌ ವಿಚಾರ ಚರ್ಚಿಸಿದ್ರೆ ಯಾವ IAS ದಂಪತಿ ಬೇರ್ಪಟ್ಟಿದ್ದಾರೆ. ತಮಿಳುನಾಡಿನ ಯಾವ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ್ರು, ಯಾರಿಂದ, ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ಬಗ್ಗೆಯೂ ಚರ್ಚೆ ಆಗಲಿ. IAS ಅಧಿಕಾರಿಯಾಗಿದ್ದುಕೊಂಡು ಸಾಕಷ್ಟು ಮನೆ ಹಾಳು ಮಾಡಿದ್ದಾರೆ ಎಂದು ರೋಹಿಣಿ ವಿರುದ್ಧ ರೂಪಾ ಆರೋಪ ಮಾಡಿದ್ದಾರೆ.

ಗಂಗರಾಜುಗೆ ಡಿ.ರೂಪಾ ಸವಾಲು

ಆಡಿಯೋ ಬಿಡುಗಡೆ ಮಾಡಿದ ಗಂಗರಾಜುಗೆ ಡಿ. ರೂಪಾ ಸವಾಲು ಹಾಕಿದ್ದಾರೆ. ಭ್ರಷ್ಟಾಚಾರ ವಿರುದ್ಧ ಹೋರಾಟ ನಿಲ್ಲಿಸು ಎಂದು ನಾನು ಹೇಳಿಲ್ಲ. ನಾನು ಹಾಗೆ ಹೇಳಿದ್ದರೆ ಗಂಗರಾಜು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: D Roopa Viral Audio: ನಮ್ಮ ಸಂಸಾರ ಚೆನ್ನಾಗಿಲ್ಲ, ರೋಹಿಣಿ ಕ್ಯಾನ್ಸರ್ ಇದ್ದಂಗೆ; ರೂಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲೇನಿದೆ?

ಡಿ ರೂಪಾ ಫೇಸ್​ಬುಕ್ ಫೋಸ್ಟ್​ನಲ್ಲೇನಿದೆ?

ಇನ್ನು ಆಡಿಯೋ ವೈರಲ್ ಬಗ್ಗೆ ಡಿ ರೂಪಾ ತಮ್ಮ ಫೇಸ್​ಬುಕ್ ಫೋಸ್ಟ್ ಮುಖಾಂತರ ಪ್ರತಿಕ್ರಿಯಿಸಿದ್ದಾರೆ. ಅದರ ಸಾರಾಂಶ ಹೀಗಿದೆ. ಆತ್ಮೀಯ ಮಾಧ್ಯಮಗಳೇ, ದಯವಿಟ್ಟು ನಾನು ರೋಹಿಣಿ ಸಿಂಧೂರಿ ವಿರುದ್ಧ ಎತ್ತಿದ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಯಾರನ್ನೂ ನಾನು ತಡೆದಿಲ್ಲ. ಅದೇ ರೀತಿ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಹಾಗೂ ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಪತಿ-ಪತ್ನಿ ಈಗಾಗಲೇ ವಿಚ್ಛೇದನ ಪಡೆದಿದ್ದಾರೆ. ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಕಂಟಕಪ್ರಾಯವಾಗುವುವರನ್ನು ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಂತ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲಾ ಮಹಿಳೆಯರಿಗೂ ಹೋರಾಟ ಮಾಡುವ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ. ಧನ್ಯವಾದಗಳು ಎಂದು ರೂಪಾ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:02 pm, Wed, 22 February 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!