ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನಿಗೂಢ ಸಾವು, ವಾರ ಕಳೆದರೂ ಭೇದಿಸಲಾಗುತ್ತಿಲ್ಲ ಈ ಪ್ರಕರಣ

ಜುಲೈ 26, 2021 ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರ ಮತ್ತು ವಿಜಿನಾಪುರ ನಡುವಿನ ರೈಲು ಹಳಿ ಪಕ್ಕದ ಪೊದೆಯೊಂದರ ಹತ್ತಿರ ಸೈಯದ್ ಹುಮೈದ್ ಅಹಮದ್ ಎಂಬ ವೈದ್ಯಕೀಯ ವಿದ್ಯಾರ್ಥಿಯ ಶವ ಪತ್ತೆಯಾಗಿತ್ತು.

ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನಿಗೂಢ ಸಾವು, ವಾರ ಕಳೆದರೂ ಭೇದಿಸಲಾಗುತ್ತಿಲ್ಲ ಈ ಪ್ರಕರಣ
ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನಿಗೂಢ ಸಾವು
Follow us
| Updated By: ಆಯೇಷಾ ಬಾನು

Updated on:Aug 03, 2021 | 1:44 PM

ಬೆಂಗಳೂರು: ಜುಲೈ 26 ರಂದು ರೈಲು ಹಳಿ ಬಳಿಯ ಪೊದೆಯೊಂದರ ಹತ್ತಿರ ಶವವಾಗಿ ಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಯುವಕನ ಸಾವಿನ ರಹಸ್ಯ ನಿಗೂಢವಾಗಿಯೇ ಉಳಿದಿದೆ. ಒಂದು ವಾರ ಕಳೆದರೂ ಸಾವಿನ ಬಗ್ಗೆ ಪೊಲೀಸರಿಗೆ ಯಾವ ಸತ್ಯವೂ ತಿಳಿಯುತ್ತಿಲ್ಲ. ಕೊಲೆಯೋ, ಆತ್ಮಹತ್ಯೆಯೋ ಎಂಬುದರ ಬಗ್ಗೆ ಬೆಂಗಳೂರು ದಂಡು ರೈಲ್ವೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಘಟನೆ ವಿವರ: ಜುಲೈ 26, 2021 ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರ ಮತ್ತು ವಿಜಿನಾಪುರ ನಡುವಿನ ರೈಲು ಹಳಿ ಪಕ್ಕದ ಪೊದೆಯೊಂದರ ಹತ್ತಿರ ಸೈಯದ್ ಹುಮೈದ್ ಅಹಮದ್ ಎಂಬ ವೈದ್ಯಕೀಯ ವಿದ್ಯಾರ್ಥಿಯ ಶವ ಪತ್ತೆಯಾಗಿತ್ತು. ಈ ಸಾವಿನ ರೀತಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಸೈಯದ್ ಹುಮೈದ್ ಅಹಮದ್ ಮೃತ ದೇಹ ವಿವಸ್ತ್ರನಾದ ರೀತಿಯಲ್ಲಿ ಪತ್ತೆಯಾಗಿತ್ತು. ತನಿಖೆ ವೇಳೆ ವಿದ್ಯಾರ್ಥಿ ಕತ್ತು ಮತ್ತು ಮರ್ಮಾಂಗದ ಬಳಿ ಚಾಕುವಿನಿಂದ ಇರಿದ ಗಾಯ ಪತ್ತೆಯಾಗಿದೆ. ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನಾ ಅಥವಾ ಕೊಲೆಯೋ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ವಿದ್ಯಾರ್ಥಿ ಬಳಿಯಿದ್ದ ಲ್ಯಾಪ್ ಟಾಪ್, ಮೊಬೈಲ್ ಸಹ ನಾಪತ್ತೆಯಾಗಿದೆ. ಹೀಗಾಗಿ ಯಾರಾದರೂ ಸುಲಿಗೆ ಮಾಡಿ ಕೊಲೆ ಮಾಡಿದ್ದಾರ ಎಂಬ ಬಗ್ಗೆ ಮತ್ತೊಂದು ಅನುಮಾನ ವ್ಯಕ್ತವಾಗುತ್ತಿದೆ.

ಕಳೆದ ಒಂದು ವಾರದಿಂದ ನಿಗೂಢ ಸಾವಿನ ಬಗ್ಗೆ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಸೈಯದ್ ಆರ್ಟಿ ನಗರದ ನಿವಾಸಿಯಾಗಿದ್ದು ಹುಬ್ಬಳ್ಳಿಯ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಕ್ರೀದ್ ಆಚರಿಸಲು ಜುಲೈ 20 ರಂದು ಬೆಂಗಳೂರಿಗೆ ಬಂದಿದ್ದ. ಬಳಿಕ ಹಬ್ಬ ಮುಗಿಸಿ 24ನೇ ತಾರೀಕು ಹಾಸ್ಟೆಲ್ಗೆ ತೆರಳೋದಾಗಿ ಮನೆಯಿಂದ ಹೊರಟಿದ್ದ. ನಂತರ ರಾಮಮೂರ್ತಿನಗರದಲ್ಲಿ ಹೊಟೇಲ್ನಲ್ಲಿ ರೂಂ ಬುಕ್ ಮಾಡಿರುವುದು ಪತ್ತೆಯಾಗಿದೆ.

ಜುಲೈ 26 ರಂದು ರೈಲು ಹಳಿ ಬಳಿಯ ಪೊದೆಯೊಂದರ ಹತ್ತಿರ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸರು ಸಾಕಷ್ಟು ಸಿಸಿಟಿವಿಗಳ ದೃಶ್ಯ ಸಂಗ್ರಹಿಸಿದ್ದಾರೆ. ಮನೆಯ ಸುತ್ತಮುತ್ತ, ರಾಮಮೂರ್ತಿನಗರ ಬಳಿ ಓಡಾಡಿರುವ ಸಿಸಿಟಿವಿ ಸಂಗ್ರಹ ಮಾಡಲಾಗಿದೆ. ಆದ್ರೆ ಸಾವಿಗೆ ಕಾರಣ ಮಾತ್ರ ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ: ಸಾವಿಗೂ ಮುನ್ನ ಗೂಗಲ್​ನಲ್ಲಿ ಹುಡುಕಾಟ

Published On - 1:40 pm, Tue, 3 August 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!