AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮಾಡಿದ ತಪ್ಪಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳಿಗೆ ಹಾನಿ, ಬಿಬಿಎಂಪಿ ಕಾಮಗಾರಿಗಳಲ್ಲೂ ಪರ್ಸೆಂಟೇಜ್ ಪ್ರತಿಧ್ವನಿ

‘ಕೇವಲ ಅಧಿಕಾರದಲ್ಲಿರುವವರು ಮಾತ್ರವಲ್ಲ, ಅಧಿಕಾರದಲ್ಲಿ ಇಲ್ಲದವರೂ ಕಮಿಷನ್​​ಗಾಗಿ ಪೀಡಿಸುತ್ತಿದ್ದಾರೆ’ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿದೆ.

ಬಿಬಿಎಂಪಿ ಮಾಡಿದ ತಪ್ಪಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳಿಗೆ ಹಾನಿ, ಬಿಬಿಎಂಪಿ ಕಾಮಗಾರಿಗಳಲ್ಲೂ ಪರ್ಸೆಂಟೇಜ್ ಪ್ರತಿಧ್ವನಿ
ಬೆಂಗಳೂರಿನಲ್ಲಿ ಮಳೆಯಿಂದ ಮರ ಉರುಳಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 17, 2022 | 1:40 PM

ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆ ಸುರಿದ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ನೀರುಪಾಲಾಗಿವೆ. ಕಾಮಕ್ಯ ಥಿಯೇಟರ್ ಸಮೀಪದ ಎಸ್​.ಕೆ.ಎಂಟರ್​ಪ್ರೈಸಸ್ ಮೆಡಿಸಿನ್ ದಾಸ್ತಾನು ಕೇಂದ್ರಕ್ಕೆ ಮಳೆ ನೀರು ನುಗ್ಗಿ ಅನಾಹುತವೇ ಸಂಭವಿಸಿದೆ. ಸಿರಿಂಜ್, ಗ್ಲೂಕೋಸ್ ಬಾಟಲಿ, ಇಂಜೆಕ್ಷನ್, ಗ್ಲಾಸ್, ಮಾಸ್ಕ್, ಪೇಷೆಂಟ್ ಏಪ್ರಾನ್, ಪಿಪಿಇ ಕಿಟ್, ಸ್ಟಿಚರ್, ಕಾಟನ್, ಸರ್ಜನ್ ಗ್ಲೌಸ್, ಡಯಾಪರ್ಸ್​ ಸೇರಿದಂತೆ ಸಾಕಷ್ಟು ಔಷಧಿಗಳು ಮತ್ತು ವೈದ್ಯಕೀಯ ಉತ್ಪನ್ನಗಳು ಹಾಳಾಗಿವೆ. ರಾಜಕಾಲುವೆ ಬಳಿ ಬಿಬಿಎಂಪಿ ಅರ್ಧಂಬರ್ಧ ಕಾಮಗಾರಿ ಮಾಡಿದ್ದರಿಂದಲೇ ಈ ಸಮಸ್ಯೆ ಎದುರಾಯಿತು. ಹಾಳಾಗಿರುವ ಉತ್ಪನ್ನಗಳ ಒಟ್ಟು ಮೌಲ್ಯ ಸುಮಾರು ₹ 20 ಲಕ್ಷ ಎಂದು ಅಂದಾಜಿಸಲಾಗಿದೆ. ಕಂಪ್ಯೂಟರ್, ಲ್ಯಾಪ್​ಟಾಪ್ ಸಹ ಮಳೆಯಿಂದ ಹಾಳಾಗಿದೆ. ಬಿಲ್ ಮಾಡಲು ಸಾಧ್ಯವಿಲ್ಲದೆ, ಆಸ್ಪತ್ರೆಗಳಿಗೆ ಕಿಟ್ ಸಹ ಒದಗಿಸಲು ಆಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಟಿವಿ9 ಬಳಿ ಅಳಲು ತೋಡಿಕೊಂಡ ಮಾಲೀಕ ಚೇತನ್, ನಾವು ಇಲ್ಲಿ ಕಳೆದ 6 ವರ್ಷಗಳಿಂದ ಔಷಧಿ ವಿತರಣೆ ಕೆಲಸ ಮಾಡುತ್ತಿದ್ದೇನೆ. ಕಳೆದ 30 ವರ್ಷಗಳಲ್ಲಿ ಎಂದಿಗೂ ಮಳೆಯಿಂದ ಸಮಸ್ಯೆ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ 2 ವರ್ಷಗಳಿಂದ ರಾಜಕಾಲುವೆಗೆ ತಡೆಗೋಡೆ ಕಟ್ಟುವ ಕಾಮಗಾರಿ ನಡೆಯುತ್ತಿದೆ. ತಡೆಗೋಡೆಗೆ ಬಳಸುವ ಶೀಟ್​ಗಳು ಡ್ರೈನೇಜ್ ರಿಂರ್​ಗೆ ಸಿಲುಕಿದ ಕಾರಣ ನೀರಿನ ಸಂಚಾರಕ್ಕೆ ತಡೆಯಾಯಿತು. ಬ್ಲಾಕ್ ಆದ ನೀರು ನಮ್ಮ ಮಳಿಗೆಗೆ ನುಗ್ಗಿ ಅನಾಹುತ ಸೃಷ್ಟಿಸಿದೆ. ಇದರಿಂದ ನನಗೆ ಸುಮಾರು ₹ 20 ಲಕ್ಷ ನಷ್ಟವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಬಿಬಿಎಂಪಿ ನೇರ ಹೊಣೆ ಎಂದು ದೂರಿದರು.

ಬಿಬಿಎಂಪಿಯಲ್ಲೂ ಪರ್ಸೆಂಟೇಜ್ ಭೂತ

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಗುತ್ತಿಗೆದಾರರೊಬ್ಬರ ಅನುಮಾನಾಸ್ಪದ ಸಾವಿನ ನಂತರ ವ್ಯಾಪಕವಾಗಿ ಗಮನ ಸೆಳೆದಿದ್ದ ಸರ್ಕಾರಿ ಕಾಮಗಾರಿಗಳಲ್ಲಿ ನಡೆಯುವ ಭಷ್ಟಾಚಾರದ ವಿಚಾರ ಇದೀಗ ಬೆಂಗಳೂರಿನಲ್ಲಿಯೂ ಪ್ರತಿಧ್ವನಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿಯೂ (ಬಿಬಿಎಂಪಿ) ಪರ್ಸೆಂಟೇಜ್ ಸಮಸ್ಯೆ ವ್ಯಾಪಕವಾಗಿದೆ ಎಂದು ಗುತ್ತಿಗೆದಾರರ ಸಂಘ ನೇರ ಅರೋಪ ಮಾಡಿದೆ. ‘ಕೇವಲ ಅಧಿಕಾರದಲ್ಲಿರುವವರು ಮಾತ್ರವಲ್ಲ, ಅಧಿಕಾರದಲ್ಲಿ ಇಲ್ಲದವರೂ ಕಮಿಷನ್​​ಗಾಗಿ ಪೀಡಿಸುತ್ತಿದ್ದಾರೆ’ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿದೆ.

ಅಧಿಕಾರದಲ್ಲಿ ಇರದ ಮಾಜಿ ಕಾರ್ಪೋರೇಟರ್​ಗೂ ಇಂತಿಷ್ಟು ಎಂದು ಪರ್ಸೆಂಟೇಜ್ ನಿಗದಿಯಾಗಿದೆ. ಬೆಂಗಳೂರಿನ ಮೂವರು ಮಾಜಿ ಕಾರ್ಪೊರೇಟರ್​ಗಳು ಇಂದಿಗೂ ಪರ್ಸೆಂಟೇಜ್ ಪಡೆಯುತ್ತಿದ್ದಾರೆ ಎನ್ನುವ ಅಂಶವನ್ನು ಗುತ್ತಿಗೆದಾರರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘದ ಅಧ್ಯಕ್ಷ ಮಂಜುನಾಥ್ ಗಂಭೀರ ಆರೋಪ ಮಾಡಿದರು. ಆ ಮೂವರು ಮಾಜಿ ಕಾರ್ಪೋರೇಟರ್​ಗಳು ಯಾರು ಎಂದು ಹೆಸರು ಬಹಿರಂಗಪಡಿಸುವುದಿಲ್ಲ. ಪರ್ಸೆಂಟೇಜ್​ಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ದೂರು ಕೊಟ್ಟಿಲ್ಲ. ಆದರೆ ಶೀಘ್ರದಲ್ಲಿಯೇ ಸರ್ಕಾರಕ್ಕೆ ಬರೆದು ಎಲ್ಲ ಮಾಹಿತಿ ನೀಡಲಾಗುವುದು ಎಂದರು.

ಬಿಬಿಎಂಪಿಯಲ್ಲಿ 40 ಪರ್ಸೆಂಟ್ ಅಲ್ಲ, 50 ಪರ್ಸೆಂಟ್ ಕೊಡಬೇಕಿದೆ. ರಾಜ್ಯದ ಇತರೆಡೆಗಿಂತಲೂ ಹೆಚ್ಚು ಅವ್ಯವಹಾರ ಇಲ್ಲಿ ನಡೆಯುತ್ತಿದೆ. ಒಂದೊಂದು ವಿಭಾಗದಲ್ಲಿ ಒಂದೊಂದು ರೀತಿ ಪರ್ಸೆಂಟೇಜ್ ಜಾರಿಯಲ್ಲಿದೆ. ಅಧಿಕಾರಿಗಳು, ಕಾರ್ಪೋರೇಟರ್​ಗಳು, ಎಂಎಲ್​ಗಳಿಗೂ ಪರ್ಸೆಂಟೇಜ್ ಹೋಗತ್ತಿದೆ. ಪರ್ಸೆಂಟೇಜ್ ಪಡೆಯುವವರ ಹೆಸರು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಪರ್ಸೆಂಟೇಜ್ ಭೂತ! ಮಾಮೂಲು ನೀಡುವಂತೆ ಪಿಡಿಒಗಳಿಗೆ EO ಕಿರುಕುಳ? ಪರ್ಸೆಂಟೇಜ್ ಕೇಳುವ ವಿಡಿಯೋ ವೈರಲ್

ಇದನ್ನೂ ಓದಿ: ದಶಕಗಳಿಂದ ವರ್ಕ್​ ಆರ್ಡರ್ ಇಲ್ಲದೆ ಕಾಮಗಾರಿಗಳು ನಡೆಯುತ್ತಿವೆ ಎಂದರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?