AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮಾಡಿದ ತಪ್ಪಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳಿಗೆ ಹಾನಿ, ಬಿಬಿಎಂಪಿ ಕಾಮಗಾರಿಗಳಲ್ಲೂ ಪರ್ಸೆಂಟೇಜ್ ಪ್ರತಿಧ್ವನಿ

‘ಕೇವಲ ಅಧಿಕಾರದಲ್ಲಿರುವವರು ಮಾತ್ರವಲ್ಲ, ಅಧಿಕಾರದಲ್ಲಿ ಇಲ್ಲದವರೂ ಕಮಿಷನ್​​ಗಾಗಿ ಪೀಡಿಸುತ್ತಿದ್ದಾರೆ’ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿದೆ.

ಬಿಬಿಎಂಪಿ ಮಾಡಿದ ತಪ್ಪಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳಿಗೆ ಹಾನಿ, ಬಿಬಿಎಂಪಿ ಕಾಮಗಾರಿಗಳಲ್ಲೂ ಪರ್ಸೆಂಟೇಜ್ ಪ್ರತಿಧ್ವನಿ
ಬೆಂಗಳೂರಿನಲ್ಲಿ ಮಳೆಯಿಂದ ಮರ ಉರುಳಿದೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Apr 17, 2022 | 1:40 PM

Share

ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆ ಸುರಿದ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ನೀರುಪಾಲಾಗಿವೆ. ಕಾಮಕ್ಯ ಥಿಯೇಟರ್ ಸಮೀಪದ ಎಸ್​.ಕೆ.ಎಂಟರ್​ಪ್ರೈಸಸ್ ಮೆಡಿಸಿನ್ ದಾಸ್ತಾನು ಕೇಂದ್ರಕ್ಕೆ ಮಳೆ ನೀರು ನುಗ್ಗಿ ಅನಾಹುತವೇ ಸಂಭವಿಸಿದೆ. ಸಿರಿಂಜ್, ಗ್ಲೂಕೋಸ್ ಬಾಟಲಿ, ಇಂಜೆಕ್ಷನ್, ಗ್ಲಾಸ್, ಮಾಸ್ಕ್, ಪೇಷೆಂಟ್ ಏಪ್ರಾನ್, ಪಿಪಿಇ ಕಿಟ್, ಸ್ಟಿಚರ್, ಕಾಟನ್, ಸರ್ಜನ್ ಗ್ಲೌಸ್, ಡಯಾಪರ್ಸ್​ ಸೇರಿದಂತೆ ಸಾಕಷ್ಟು ಔಷಧಿಗಳು ಮತ್ತು ವೈದ್ಯಕೀಯ ಉತ್ಪನ್ನಗಳು ಹಾಳಾಗಿವೆ. ರಾಜಕಾಲುವೆ ಬಳಿ ಬಿಬಿಎಂಪಿ ಅರ್ಧಂಬರ್ಧ ಕಾಮಗಾರಿ ಮಾಡಿದ್ದರಿಂದಲೇ ಈ ಸಮಸ್ಯೆ ಎದುರಾಯಿತು. ಹಾಳಾಗಿರುವ ಉತ್ಪನ್ನಗಳ ಒಟ್ಟು ಮೌಲ್ಯ ಸುಮಾರು ₹ 20 ಲಕ್ಷ ಎಂದು ಅಂದಾಜಿಸಲಾಗಿದೆ. ಕಂಪ್ಯೂಟರ್, ಲ್ಯಾಪ್​ಟಾಪ್ ಸಹ ಮಳೆಯಿಂದ ಹಾಳಾಗಿದೆ. ಬಿಲ್ ಮಾಡಲು ಸಾಧ್ಯವಿಲ್ಲದೆ, ಆಸ್ಪತ್ರೆಗಳಿಗೆ ಕಿಟ್ ಸಹ ಒದಗಿಸಲು ಆಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಟಿವಿ9 ಬಳಿ ಅಳಲು ತೋಡಿಕೊಂಡ ಮಾಲೀಕ ಚೇತನ್, ನಾವು ಇಲ್ಲಿ ಕಳೆದ 6 ವರ್ಷಗಳಿಂದ ಔಷಧಿ ವಿತರಣೆ ಕೆಲಸ ಮಾಡುತ್ತಿದ್ದೇನೆ. ಕಳೆದ 30 ವರ್ಷಗಳಲ್ಲಿ ಎಂದಿಗೂ ಮಳೆಯಿಂದ ಸಮಸ್ಯೆ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ 2 ವರ್ಷಗಳಿಂದ ರಾಜಕಾಲುವೆಗೆ ತಡೆಗೋಡೆ ಕಟ್ಟುವ ಕಾಮಗಾರಿ ನಡೆಯುತ್ತಿದೆ. ತಡೆಗೋಡೆಗೆ ಬಳಸುವ ಶೀಟ್​ಗಳು ಡ್ರೈನೇಜ್ ರಿಂರ್​ಗೆ ಸಿಲುಕಿದ ಕಾರಣ ನೀರಿನ ಸಂಚಾರಕ್ಕೆ ತಡೆಯಾಯಿತು. ಬ್ಲಾಕ್ ಆದ ನೀರು ನಮ್ಮ ಮಳಿಗೆಗೆ ನುಗ್ಗಿ ಅನಾಹುತ ಸೃಷ್ಟಿಸಿದೆ. ಇದರಿಂದ ನನಗೆ ಸುಮಾರು ₹ 20 ಲಕ್ಷ ನಷ್ಟವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಬಿಬಿಎಂಪಿ ನೇರ ಹೊಣೆ ಎಂದು ದೂರಿದರು.

ಬಿಬಿಎಂಪಿಯಲ್ಲೂ ಪರ್ಸೆಂಟೇಜ್ ಭೂತ

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಗುತ್ತಿಗೆದಾರರೊಬ್ಬರ ಅನುಮಾನಾಸ್ಪದ ಸಾವಿನ ನಂತರ ವ್ಯಾಪಕವಾಗಿ ಗಮನ ಸೆಳೆದಿದ್ದ ಸರ್ಕಾರಿ ಕಾಮಗಾರಿಗಳಲ್ಲಿ ನಡೆಯುವ ಭಷ್ಟಾಚಾರದ ವಿಚಾರ ಇದೀಗ ಬೆಂಗಳೂರಿನಲ್ಲಿಯೂ ಪ್ರತಿಧ್ವನಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿಯೂ (ಬಿಬಿಎಂಪಿ) ಪರ್ಸೆಂಟೇಜ್ ಸಮಸ್ಯೆ ವ್ಯಾಪಕವಾಗಿದೆ ಎಂದು ಗುತ್ತಿಗೆದಾರರ ಸಂಘ ನೇರ ಅರೋಪ ಮಾಡಿದೆ. ‘ಕೇವಲ ಅಧಿಕಾರದಲ್ಲಿರುವವರು ಮಾತ್ರವಲ್ಲ, ಅಧಿಕಾರದಲ್ಲಿ ಇಲ್ಲದವರೂ ಕಮಿಷನ್​​ಗಾಗಿ ಪೀಡಿಸುತ್ತಿದ್ದಾರೆ’ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿದೆ.

ಅಧಿಕಾರದಲ್ಲಿ ಇರದ ಮಾಜಿ ಕಾರ್ಪೋರೇಟರ್​ಗೂ ಇಂತಿಷ್ಟು ಎಂದು ಪರ್ಸೆಂಟೇಜ್ ನಿಗದಿಯಾಗಿದೆ. ಬೆಂಗಳೂರಿನ ಮೂವರು ಮಾಜಿ ಕಾರ್ಪೊರೇಟರ್​ಗಳು ಇಂದಿಗೂ ಪರ್ಸೆಂಟೇಜ್ ಪಡೆಯುತ್ತಿದ್ದಾರೆ ಎನ್ನುವ ಅಂಶವನ್ನು ಗುತ್ತಿಗೆದಾರರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘದ ಅಧ್ಯಕ್ಷ ಮಂಜುನಾಥ್ ಗಂಭೀರ ಆರೋಪ ಮಾಡಿದರು. ಆ ಮೂವರು ಮಾಜಿ ಕಾರ್ಪೋರೇಟರ್​ಗಳು ಯಾರು ಎಂದು ಹೆಸರು ಬಹಿರಂಗಪಡಿಸುವುದಿಲ್ಲ. ಪರ್ಸೆಂಟೇಜ್​ಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ದೂರು ಕೊಟ್ಟಿಲ್ಲ. ಆದರೆ ಶೀಘ್ರದಲ್ಲಿಯೇ ಸರ್ಕಾರಕ್ಕೆ ಬರೆದು ಎಲ್ಲ ಮಾಹಿತಿ ನೀಡಲಾಗುವುದು ಎಂದರು.

ಬಿಬಿಎಂಪಿಯಲ್ಲಿ 40 ಪರ್ಸೆಂಟ್ ಅಲ್ಲ, 50 ಪರ್ಸೆಂಟ್ ಕೊಡಬೇಕಿದೆ. ರಾಜ್ಯದ ಇತರೆಡೆಗಿಂತಲೂ ಹೆಚ್ಚು ಅವ್ಯವಹಾರ ಇಲ್ಲಿ ನಡೆಯುತ್ತಿದೆ. ಒಂದೊಂದು ವಿಭಾಗದಲ್ಲಿ ಒಂದೊಂದು ರೀತಿ ಪರ್ಸೆಂಟೇಜ್ ಜಾರಿಯಲ್ಲಿದೆ. ಅಧಿಕಾರಿಗಳು, ಕಾರ್ಪೋರೇಟರ್​ಗಳು, ಎಂಎಲ್​ಗಳಿಗೂ ಪರ್ಸೆಂಟೇಜ್ ಹೋಗತ್ತಿದೆ. ಪರ್ಸೆಂಟೇಜ್ ಪಡೆಯುವವರ ಹೆಸರು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಪರ್ಸೆಂಟೇಜ್ ಭೂತ! ಮಾಮೂಲು ನೀಡುವಂತೆ ಪಿಡಿಒಗಳಿಗೆ EO ಕಿರುಕುಳ? ಪರ್ಸೆಂಟೇಜ್ ಕೇಳುವ ವಿಡಿಯೋ ವೈರಲ್

ಇದನ್ನೂ ಓದಿ: ದಶಕಗಳಿಂದ ವರ್ಕ್​ ಆರ್ಡರ್ ಇಲ್ಲದೆ ಕಾಮಗಾರಿಗಳು ನಡೆಯುತ್ತಿವೆ ಎಂದರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ