AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳೂ ಮುಸ್ಲಿಂ ಯುವತಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ: ಆರೂಢ ಭಾರತೀ ಶ್ರೀ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರವು ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸ್ ಪಡೆಯಲು ಮುಂದಾಗುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂತರ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೂಢ ಭಾರತೀ ಸ್ವಾಮೀಜಿ (Aruda Bharathi Swamiji), ಹಿಂದೂಗಳು ಕೂಡ ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಮತಾಂತ ಮಾಡಬೇಕಾಗುತ್ತದೆ ಎಂದಿದ್ದಾರೆ.

ಹಿಂದೂಗಳೂ ಮುಸ್ಲಿಂ ಯುವತಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ: ಆರೂಢ ಭಾರತೀ ಶ್ರೀ ಎಚ್ಚರಿಕೆ
ಆರೂಢ ಭಾರತೀ ಸ್ವಾಮೀಜಿ
Kiran Surya
| Updated By: Rakesh Nayak Manchi|

Updated on:Aug 13, 2023 | 3:33 PM

Share

ಬೆಂಗಳೂರು, ಆಗಸ್ಟ್ 13: ಮುಸ್ಲಿಮರಿಗಷ್ಟೆ (Muslim) ಗಂಡಸ್ತನ, ಮೀಸೆ ಇರುವುದಲ್ಲ. ಹಿಂದೂ (Hindu) ಹುಡುಗರಿಗೂ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನ ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್​ನ ಆರೂಢ ಭಾರತೀ ಸ್ವಾಮೀಜಿ (Aruda Bharathi Swamiji) ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರವು ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸ್ ಪಡೆಯಲು ಮುಂದಾಗುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ನಂತರ ಹಿಂದೂ, ಜೈನ, ಸಿಖ್, ಬೌದ್ದರ ಜನಸಂಖ್ಯೆ ಇಳಿಕೆಯಾಗುತ್ತಿದೆ. ಮುಸ್ಲಿಂ, ಕ್ರೈಸ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಬಲವಂತದ ಮತಾಂತರದ ಸಂಕೇತ ಎಂದರು.

ಮುಸ್ಲಿಂ, ಕ್ರಿಶ್ಚಿಯನ್ನರ ಸಂಖ್ಯೆ ಹೆಚ್ಚಾಗಿದ್ದೆ ಹಿಂದೂಗಳಿಂದ. ಲವ್ ಜಿಹಾದ್, ಮತಾಂತರ ಮೂಲಕ ಜನಸಂಖ್ಯೆ ಹೆಚ್ಚು ಮಾಡುತ್ತಿದ್ದಾರೆ. ಸ್ವಪ್ರೇರಣೆಯಿಂದ ಮತಾಂತರ ಆದರೆ ತಪ್ಪಿಲ್ಲ. ಆದರೆ ಬಲವಂತವಾಗಿ ಮಾಡುವುದು ಅಪರಾಧ. ಹಿಂದೂಗಳು ಸಂಕುಚಿತ ಅಲ್ಲ ಎಂದು ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೇ ವಿಧಾನಸೌಧಕ್ಕೆ ಮುತ್ತಿಗೆ: ಸರ್ಕಾರಕ್ಕೆ ಸಂತರ ಎಚ್ಚರಿಕೆ

ನಾನು ಬೈಬಲ್ ಹಾಗೂ ಕುರಾನ್ ಓದಿದ್ದೇನೆ. ಹಿಂದೂಗಳ ದೇವಸ್ಥಾನ, ಮಂದಿರಗಳನ್ನ ಒಡೆದು ಹಾಕಿ, ಆ ಧರ್ಮದ ಅನುಯಾಯಿಗಳು ನೆಲೆ‌ನಿಲ್ಲದಂತೆ ನಾಶ ಮಾಡಬೇಕು ಅಂತ ಬೈಬಲ್​ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಮುಸ್ಲಿಮರು ಕೂಡ ಹೊರತಾಗಿಲ್ಲ ಎಂದು ಭಾರತೀ ಸ್ವಾಮೀಜಿ ಹೇಳಿದರು.

ಮತಾಂತರ, ಗೋಹತ್ಯೆ ನಿಂತರೆ ಸನಾತನ ಧರ್ಮಕ್ಕೆ ಪುಷ್ಟಿ

ಸಭೆಯಲ್ಲಿ ಮಾತನಾಡಿದ ಮೇಲುಕೋಟೆಯ ಮಠದ ಪೀಠಾಧೀಧ್ಯಕ್ಷ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ನಮ್ಮ ರಾಷ್ಟ್ರದ ಹಲವಾರು ವಿಚಾರ ವಿನಿಮಯ ‌ಮಾಡಲು, ಮುಖ್ಯವಾಗಿ ಗೋಹತ್ಯೆ ‌ನಿಷೇಧ ಮತ್ತು ಮತಾಂತರ ನಿಷೇಧ ವಿಚಾರವಾಗಿ ಇಂದು ಎಲ್ಲಾ ಸಾಧು ಸಂತರ, ಸನ್ಯಾಸಿಗಳ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದೆ.

ಮತಾಂತರ ಹಾಗೂ ಗೋಹತ್ಯೆ ಬಗ್ಗೆ ‌ಸಾಧು ಸಂತರು ಚರ್ಚೆ ಮಾಡಬೇಕು. ಮತಾಂತರ ಹಾಗೂ ಗೋಹತ್ಯೆ ‌ನಿಲ್ಲಬೇಕು. ಇದರಿಂದ ನಮ್ಮ ಸನಾತನ ಧರ್ಮಕ್ಕೆ ಪುಷ್ಟಿ ನೀಡಿದಂತೆ ಆಗುತ್ತದೆ. ಯಾವತ್ತೂ ನಮ್ಮ ಧರ್ಮ ಸಹಿಷ್ಣುತೆಯನ್ನೆ ಪ್ರತಿಪಾದಿಸುತ್ತದೆ. ಭಾರತದಲ್ಲಿ ಎಲ್ಲಾ ಧರ್ಮಿಗಳು ವಾಸ ಮಾಡುತ್ತಾರೆ. ಸೌಹಾರ್ದವಾದಂತ ವಾತವರಣದಲ್ಲಿ ಇರಬೇಕು ಎನ್ನುವುದು ನಮ್ಮ ಎಲ್ಲಾ ಹಿರಿಯರ ಚಿಂತನೆಯಾಗಿದೆ. ಹೀಗಾಗಿ ಮತಾಂತ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಎಲ್ಲಾ ಯತಿಗಳು ಇಲ್ಲಿ ‌ಸೇರಿ‌ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದರು.

ಇವತ್ತಿನ ಸಭೆಯ ನಿರ್ಣಯವನ್ನು ರಾಜ್ಯ ಸರ್ಕಾರಕ್ಕೆ ನೀಡಿ ಒತ್ತಾಯ ಮಾಡಲಿದ್ದೇವೆ. ಸರ್ಕಾರ ಸ್ಪಂದಿಸುವ ವಿಶ್ವಾಸ ನಮ್ಮಲಿದೆ. ಇದರಲ್ಲಿ ಪಕ್ಷ ಮುಖ್ಯ ಆಗುವುದಿಲ್ಲ. ವಿಚಾರ ಮುಖ್ಯವಾಗಿರುತ್ತದೆ. ಈ ವೇದಿಕೆಯ ನಿರ್ಣಯದ ನಂತರ ರಾಷ್ಟ್ರ ಮಟ್ಟದ ನಾಯಕರ ಗಮನಕ್ಕೂ ತರುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Sun, 13 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ